ಪತ್ನಿಯರು ಬೇಕೆಂದು ತೆಂಗಿನ ಮರವೇರಿ ಕುಳಿತ ವ್ಯಕ್ತಿ!
ಬಳ್ಳಾರಿ, ಡಿಸೆಂರ್ 16: ಪತ್ನಿಯರು ಬೇಕೆಂದು ತೆಂಗಿನ ಮರವೇರಿ ಕುಳಿತು ಪ್ರತಿಭಟಿಸುತ್ತಿದ್ದ ವ್ಯಕ್ತಿಯೊಬ್ಬ ಮೊದಲ ಹೆಂಡತಿ ಮುಖ ನೋಡಿ ಮರದಿಂದ ಇಳಿದು ಬಂದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 2ನೇ ಹೆಂಡತಿ ತವರು ಮನೆ ಸೇರಿದ್ದಕ್ಕೆ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ.
ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಸಮೀಪದ ದಾಸೋಬನಹಳ್ಳಿ ಗ್ರಾಮದ ಗೊಲ್ಲರಹಟ್ಟಿ ನಿವಾಸಿ ದೊಡ್ಡಪ್ಪ (40) ಬುಧವಾರ ತೆಂಗಿನ ಮರವೇರಿ ಕುಳಿತಿದ್ದ. ಇಬ್ಬರು ಪತ್ನಿಯರ ಪೈಕಿ ಒಬ್ಬರು ನನ್ನೊಂದಿಗೆ ಜೀವನ ಮಾಡುತ್ತಿಲ್ಲ ಆಕೆ ವಾಪಸ್ ಬರಬೇಕು ಎಂದು ಪ್ರತಿಭಟನೆ ನಡೆಸಿದ.
ದೊಡ್ಡಪ್ಪ ಮೊದಲು ಗ್ರಾಮದ ಸೋದರ ಸೊಸೆಯೊಂದಿಗೆ ಮೊದಲ ಮದುವೆಯಾಗಿದ್ದ. ಮಕ್ಕಳಾಗದ ಕಾರಣ ಅವಳು ತವರು ಮನೆ ಸೇರಿದ್ದಳು. ನಂತರ ಕೂಡ್ಲಿಗಿ ಸಮೀಪದ ಶಿವಪುರ ಗೊಲ್ಲರಹಟ್ಟಿಯ ಮಹಿಳೆಯೊಂದಿಗೆ 2ನೇ ಮದುವೆಯಾದ.

ಈಕೆಗೆ ಮೂರು ಗಂಡು ಮಕ್ಕಳಿದ್ದಾರೆ. ಆದರೆ, ಇಬ್ಬರ ನಡುವಿನ ಮನಸ್ತಾಪದಿಂದ 5 ವರ್ಷಗಳ ಹಿಂದೆ ಮನೆ, ಮಕ್ಕಳನ್ನು ಬಿಟ್ಟು ಅವಳು ತವರು ಮನೆ ಸೇರಿದ್ದಾಳೆ. ಇದಕ್ಕಾಗಿ ಪತ್ನಿಯರು ನನ್ನ ಜೊತೆ ಜೀವನ ಮಾಡಬೇಕು ಎಂದು ಮರವೇರಿ ಕುಳಿತಿದ್ದ.
ಹೆಂಡತಿ ದರ್ಶನ ಕೆಳಗಿಳಿದ ಪತಿ: ಗ್ರಾಮಸ್ಥರು ಪಂಚಾಯಿತಿ ಮಾಡಿಸಲು ಮುಂದೆ ಬಂದಿಲ್ಲ ಮತ್ತು ಮೂವರು ಮಕ್ಕಳ ಪೋಷಣೆಯಿಂದ ಬೇಸತ್ತು ದೊಡ್ಡಪ್ಪ ತೆಂಗಿನಮರವೇರಿ ಕುಳಿತಿದ್ದ. ಕೆಳಗಿಳಿಯುವಂತೆ ಗ್ರಾಮಸ್ಥರು, ಮಕ್ಕಳು ಹೇಳಿದರು ಯಾರ ಮಾತು ಕೇಳಲಿಲ್ಲ.
ಕೊನೆಗೆ ಗ್ರಾಮಸ್ಥರು ಖಾನಾ ಹೊಸಹಳ್ಳಿ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರ ಮನವರಿಕೆಗೂ ಬಗ್ಗದ ಆತ ಸುಮಾರು 8 ತಾಸು ಮರದಲ್ಲಿಯೇ ಕುಳಿತಿದ್ದ. ಪಿಎಸ್ಐ ಎಚ್. ನಾಗರಾಜ ಸ್ಥಳಕ್ಕೆ ಆಗಮಿಸಿದರು. ಆಗ ಮೊದಲ ಹೆಂಡತಿಯನ್ನು ಕರೆಸಿ ಎಂದು ಪಟ್ಟು ಹಿಡಿದ.
ಬೇರೆ ದಾರಿ ಕಾಣದ ಪೊಲೀಸರು ಮೊದಲ ಹೆಂಡತಿಯನ್ನು ಸ್ಥಳಕ್ಕೆ ಕರೆಸಿದರು. ಅಂತಿಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರ ದೊಂದಿಗೆ ದೊಡ್ಡಪ್ಪನನ್ನು ಮರದಿಂದ ಕೆಳಗಿಳಿಸಲಾಯಿತು. ಗ್ರಾಮ ಪಂಚಾಯಿತಿ ಚುನಾವಣೆ ನಂತರ ಇಬ್ಬರ ಪತ್ನಿಯರನ್ನು ಕರೆಸಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಪೊಲೀಸರ ಭರವಸೆ ಕೊಟ್ಟಿದ್ದಾರೆ.
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications