ಮಂಗಳೂರು ಆಟೋ ಸ್ಫೋಟ: ಸಿಮ್ ಖರೀದಿಸಲು ಶಾರಿಕ್ ಬಳಸಿದ್ದು ಬಳ್ಳಾರಿ ಅಡ್ರೆಸ್
ಬಳ್ಳಾರಿ, ನವೆಂಬರ್ 22 : ಮಂಗಳೂರಿನಲ್ಲಿ ಶನಿವಾರ ನಡೆದ ಆಟೋದಲ್ಲಿನ ಕುಕ್ಕರ್ ಬ್ಲಾಸ್ ಪ್ರಕರಣದ ಆರೋಪಿ ಶಾರಿಕ್ ತಾನೂ ಉಪಯೋಗಿಸುತ್ತಿದ್ದ ನಂಬರ್ಗೆ ಬಳಸಿದ್ದು ಬಳ್ಳಾರಿ ಜಿಲ್ಲೆಯ ಸಂಡೂರು ವಿಳಾಸ ಎಂಬುದು ಬೆಳಕಿಗೆ ಬಂದಿದೆ.
ಸಂಡೂರಿನ ಅರುಣ್ ಕುಮಾರ್ ಗೌಳಿ ಎಂಬಾತನ ಹೆಸರಿನಲ್ಲಿ ಶಾರಿಕ್ ಸಿಮ್ ಖರೀದಿಸಿದ್ದಾನೆ. ಅರುಣ್ ಎಂಬಿಎ ಮತ್ತು ಎಂಜಿನಿಯರ್ ಪದವೀಧರ, ಹುಬ್ಬಳ್ಳಿಯಲ್ಲಿ ವ್ಯಾಸಂಗ ಮಾಡಿದ್ದಾನೆ. ಹಾವೇರಿಯಲ್ಲಿ ವಿವಾಹವಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಕರಣದ ಸಂಬಂಧ ಅಧಿಕಾರಿಗಳು ಅರುಣ್ ಕುಮಾರ್ ಬಳಿ ಮಾಹಿತಿ ಕಲೆಯಾಕಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆಯಲ್ಲಿ ಅರುಣ್ ಒಂದೂವರೆ ವರ್ಷದ ಹಿಂದೆ ಬೆಂಗಳೂರಿನಲ್ಲಿ ತಮ್ಮ ದಾಖಲೆಗಳನ್ನು ಕಳೆದುಕೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ. ಈ ದಾಖಲೆಗಳನ್ನು ದುರಪಯೋಗ ಪಡಿಸಿಕೊಂಡಿರುವ ಆರೋಪಿ ಸಿಮ್ ಕಾರ್ಡ್ ಖರೀದಿಸಿ ಆ ಸಿಮ್ನಿಂದ ತಮ್ಮ ತಂಡದ ಜೊತೆ ಮಾತುಕತೆ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ರಂಜಿತ್ ಬಂಡಾರು, "ಪ್ರಕರಣದಲ್ಲಿ ಆರೋಪಿಗಳು ಬಳಸಿದ ಸಿಮ್ ಕಾರ್ಡ್ ಬಗ್ಗೆ ತನಿಖೆ ನಡೆಸಿದಾಗ ಒಂದು ಕಾರ್ಡ್ ಸಂಡೂರಿನ ವಿಳಾಸದ್ದಾಗಿತ್ತು. ಎಡಿಜಿಪಿ ಆದೇಶದ ಮೇರೆಗೆ ನಾವು ಸಂಬಂಧಿತ ವಿಳಾಸಕ್ಕೆ ಸೇರಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಈ ಪ್ರಕರಣಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ ಎನ್ನುವುದು ದೃಢಪಟ್ಟಿದೆ".
"ವರ್ಷದ ಇಂದೆ ಅರುಣ್ ಪರ್ಸ್ ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ. ಬೇರೆ ಯಾರಾದರೂ ಈ ರೀತಿ ದಾಖಲೆ ಕಳೆದುಕೊಂದ್ದರೆ, ಡಿಪಾರ್ಟ್ ಮೆಂಟ್ ಆಪ್ ಟೆಲಿಕಮ್ಯುನಿಕೇಶನ್ ತಂದಿರುವ TAF COP PORTAL ಎನ್ನುವ ಆ್ಯಪ್ ಅನ್ನು ಬಳಸಿಕೊಳ್ಳಿ. ಇದರಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿದರೆ ಈ ಆ್ಯಪ್ನಲ್ಲಿ ನಿಮ್ಮ ದಾಖಲೆಗಳನ್ನ ಇತರರು ಬಳಕೆ ಮಾಡಿದ್ದರೆ ತಿಳಿಯುತ್ತದೆ" ಎಂದು ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ ವಿಳಾಸದಲ್ಲಿ ಮೈಸೂರಲ್ಲಿ ಮನೆ
ಸದ್ಯಕ್ಕೆ ಕುಕ್ಕರ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರಿಕ್ ಮೈಸೂರಲ್ಲಿ ಉಳಿದುಕೊಳ್ಳಲು ಹುಬ್ಬಳ್ಳಿಯ ರೈಲ್ವೆ ಉದ್ಯೋಗಿಯಾಗಿರುವ ಪ್ರೇಮ ರಾಜ್ ಎಂಬುವವರ ಆಧಾರ್ ಕಾರ್ಡ್ ಬಳಸಿಕೊಂಡಿದ್ದ. ಈ ಬಗ್ಗೆ ಪೊಲೀಸ್ ವಿಚಾರಣೆ ಮಾಡಿದಾಗ ಅರಣ್ರಂತೆಯೇ ಪ್ರೇಮರಾಜ್ ಕೂಡ ತನ್ನ ವರ್ಷದ ಹಿಂದ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಅದನ್ನ ಶಂಕಿತ ಆರೋಪಿ ಭಯೋತ್ಪಾದಕ ಕೃತ್ಯ ಎಸಗಲು ದುರ್ಬಳಕೆ ಮಾಡಿಕೊಂಡಿದ್ದಾನೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications