ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಮೊದಲ ಮಾವು ಮೇಳ; 300 ತಳಿಗಳ ಪ್ರದರ್ಶನ, ಮಾರಾಟ

|
Google Oneindia Kannada News

ಬಳ್ಳಾರಿ, ಮೇ 30; ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ ಹಾಗೂ ಹಾಪ್ ಕಾಮ್ಸ್ ಸಹಯೋಗದಲ್ಲಿ ಬಳ್ಳಾರಿ ತಹಶೀಲ್ದಾರ್‌ ಕಛೇರಿ ಆವರಣದಲ್ಲಿ ಇದೇ ಮೊದಲ ಬಾರಿಗೆ ಮಾವು ಮೇಳವನ್ನು ಆಯೋಜನೆ ಮಾಡಲಾಗಿದೆ.

ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಸೋಮವಾರ ಮಾವು ಮೇಳಕ್ಕೆ ಚಾಲನೆ ನೀಡಿದರು. ರಾಜ್ಯ ಹಾಗೂ ದೇಶದ 300ಕ್ಕೂ ಹೆಚ್ಚು ತಳಿಗಳ ಪ್ರದರ್ಶನ ಮತ್ತು ಮಾರಾಟ ಮೂರು ದಿನಗಳ ಕಾಲ ನಡೆಯಲಿವೆ.

ಆನ್‌ಲೈನ್‌ನಿಂದ ಮಾವು ಖರೀದಿಸಲು ವೆಬ್‌ಸೈಟ್, ಮೊಬೈಲ್ ನೆಟ್ಟಗಿಲ್ಲ! ಗ್ರಾಹಕರ ಬೇಸರಆನ್‌ಲೈನ್‌ನಿಂದ ಮಾವು ಖರೀದಿಸಲು ವೆಬ್‌ಸೈಟ್, ಮೊಬೈಲ್ ನೆಟ್ಟಗಿಲ್ಲ! ಗ್ರಾಹಕರ ಬೇಸರ

ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಬಿ. ಶ್ರೀರಾಮುಲು, "ಬಳ್ಳಾರಿಯಲ್ಲಿ ಇನ್ನುಮುಂದೆ ಪ್ರತಿವರ್ಷ ಮಾವು ಮೇಳ ಆಯೋಜಿಸಲಾಗುವುದು. ಪ್ರತಿ ವರ್ಷ ಮೇಳ ನಡೆಸಲು ಅಧಿಕಾರಿಗಳಿಗೆ ಸೂಚಿಸುವುದರೊಂದಿಗೆ, ತೋಟಗಾರಿಕಾ ಸಚಿವರ ಬಳಿಯೂ ಮಾತನಾಡುವುದಾಗಿ" ಭರವಸೆ ನೀಡಿದರು.

ನೈಸರ್ಗಿಕವಾಗಿ ಮಾವು ಮಾಗಿಸಲು ರೈತರಿಗೆ ಸಲಹೆಗಳು ನೈಸರ್ಗಿಕವಾಗಿ ಮಾವು ಮಾಗಿಸಲು ರೈತರಿಗೆ ಸಲಹೆಗಳು

ಸೋಮವಾರದಿಂದ ಆರಂಭವಾಗಿರುವ ಮಾವು ಮೇಳದಲ್ಲಿ 300ಕ್ಕೂ ಹೆಚ್ಚು ಮಾವಿನ ಹಣ್ಣಿನ ತಳಿಗಳ ಪ್ರದರ್ಶನ ಗಮನಸೆಳೆಯುತ್ತಿದೆ. 'ಬೆನೆಶಾನ್' ಮಾವಿನ ಹಣ್ಣಿನ ತಳಿಯ ಸ್ವಾದ ಮಾತ್ರ ಸವಿದಿರುವ ಗಣಿನಾಡಿನ ಜನರಿಗೆ ವೈವಿಧ್ಯಮಯ ಮಾವಿನ ತಳಿಗಳ ಸ್ವಾದ ಸವಿಯಲು ಭಾಗ್ಯ ಲಭಿಸಿದೆ.

ರಾಮನಗರ ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!ರಾಮನಗರ ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

100 ಟನ್ ಮಾವು ಮಾರಾಟ ನಿರೀಕ್ಷೆ

100 ಟನ್ ಮಾವು ಮಾರಾಟ ನಿರೀಕ್ಷೆ

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶರಣಪ್ಪ ಭೋಗಿ ಮಾತನಾಡಿ, "ಬಳ್ಳಾರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಮಾವು ಮೇಳದಲ್ಲಿ ಮೂರು ದಿನಗಳಲ್ಲಿ 100 ಟನ್ ಮಾವು ಮಾರಾಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ" ಎಂದರು.

ಮೊದಲ ದಿನ ಮೇಳಕ್ಕೆ ಆಗಮಿಸಿದ್ದ ಜನರು ಅಲ್ಪೇನ್ಸೋ, ರತ್ನಗಿರಿ, ಕೇಸರ್, ಬೆನೆಶಾನ್, ತೋತಾಪೂರಿ, ರಸಪೂರಿ, ಸಿಂಧೂರ್ ಸೇರಿದಂತೆ ವೈವಿಧ್ಯಮಯ ಮಾವಿನ ಹಣ್ಣುಗಳನ್ನು ಜನರು ಅತ್ಯಂತ ಕುತೂಹಲದಿಂದ ವೀಕ್ಷಿಸಿದರು.

ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳು

ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳು

ಕೋಲಾರ, ಧಾರವಾಡ, ಹಾವೇರಿ, ಗಂಗಾವತಿ, ಕೊಪ್ಪಳ, ಶಿರಸಿ, ಅನಂತಪುರ, ಹರಪನಹಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ರೈತರು ರಾಸಾಯನಿಕ ಮುಕ್ತ ವೈಜ್ಞಾನಿಕವಾಗಿ, ನೈಸರ್ಗಿಕವಾಗಿ ಮಾಗಿದ ಮಾವಿನ ಹಣ್ಣುಗಳನ್ನು ಪ್ರದರ್ಶನದಲ್ಲಿಟ್ಟು ಮಾರಾಟ ಮಾಡುತ್ತಿದ್ದಾರೆ.

ವಿವಿಧೆಡೆಯಿಂದ ಆಗಮಿಸಿದ್ದ ರೈತರಿಗೆ 35 ಮಳಿಗೆಗಳನ್ನು ಒದಗಿಸಲಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ ಇನ್ನೊಂದು ದಿನ ಮೇಳ ವಿಸ್ತರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

300 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ

300 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕೇವಲ 300 ಹೆಕ್ಟೇರ್ ಮಾತ್ರ ಮಾವು ಬೆಳೆಯಲಾಗುತ್ತದೆ. ಜನರಿಗೆ ನೇರವಾಗಿ ನೈಸರ್ಗಿಕವಾಗಿ ಮಾಗಿಸಿದ ಮಾವುಗಳನ್ನು ಒದಗಿಸಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಾರಾಟಕ್ಕಿಡಲಾಗಿರುವ ಎಲ್ಲವೂಗಳು ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳಾಗಿದ್ದು,ಈ ಕುರಿತು ಇಲಾಖೆಯಿಂದಲೇ ಪರಿಶೀಲನೆ ನಡೆಸಲಾಗಿದೆ.

ಸದ್ಯ ಮಾರುಕಟ್ಟೆಯಲ್ಲಿ ಕ್ಯಾಲ್ಸಿಯಂ ಕಾರ್ಬೋಹೈಡ್ರೆಡ್ ರಾಸಾಯನಿಕ ಸಿಂಪಡಿಸಿ ಮಾವುಗಳನ್ನು ಹಣ್ಣುಗಳನ್ನಾಗಿ ಮಾರಾಟ ಮಾಡಲಾಗುತ್ತಿದೆ. ಅವುಗಳನ್ನು ತಿಂದಲ್ಲಿ ಕ್ಯಾನ್ಸರ್ ಸೇರಿದಂತೆ ನಾನಾ ರೋಗಗಳಿಗೆ ಆಹ್ವಾನ ಮಾಡಿಕೊಟ್ಟಂತಾಗಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Recommended Video

Monalisa ಚಿತ್ರದ ಮೇಲೆ ಆ ವ್ಯಕ್ತಿ Cake ಬಳಿದದ್ದೇಕೆ | #World | OneIndia Kannada
ರೈತರಿಗೆ ಉತ್ತಮ ಬೆಲೆ ಸಿಗಲಿದೆ

ರೈತರಿಗೆ ಉತ್ತಮ ಬೆಲೆ ಸಿಗಲಿದೆ

ಮಾವು ಮೇಳದ ಇನ್ನೊಂದು ವಿಶೇಷ ಎಂದರೆ ರೈತರಿಂದ ನೇರವಾಗಿ ಗ್ರಾಹಕರಿಗೆ ಹಣ್ಣುಗಳು ತಲುಪಿಸುವುದುದ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮಾವು ಸಿಗುತ್ತದೆ. ವೈಜ್ಞಾನಿಕವಾಗಿ, ನೈಸರ್ಗಿಕವಾಗಿ ಮಾಗಿದ ಹಲವು ತಳಿಗಳ ಮಾವಿನ ಹಣ್ಣುಗಳನ್ನು ಮೇಳದಲ್ಲಿ ಲಭ್ಯವಿದೆ. ರಾಜ್ಯ ಮಟ್ಟದ ಮಾವು ಮೇಳದಂತೆ ಅಂತರರಾಜ್ಯ ಮಟ್ಟದ ಬೇರೆ ಬೇರೆ ಹಣ್ಣುಗಳ ಮೇಳವು ನಡೆಸಬೇಕಿದೆ. ಇದರಿಂದ ಬೇರೆ ಬೇರೆ ರಾಜ್ಯದ ವಿವಿಧ ತಳಿಗಳ ಹಣ್ಣುಗಳು ಜನರಿಗೆ ಲಭ್ಯವಾಗಲಿದೆ ಎಂದು ಜನರು ಮನವಿ ಮಾಡಿದ್ದಾರೆ.

English summary
Horticulture department organized Mango mela in Ballari for first time. Around 300 varieties of Mango available in the market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X