ಮಣ್ಣೆತ್ತಿನ ಅಮಾವಾಸ್ಯೆ : ಮಣ್ಣಿನ ಬಸವಣ್ಣನಿಗೆ ಭಾರೀ ಬೇಡಿಕೆ
ಬಳ್ಳಾರಿ, ಜುಲೈ 12 : ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಮಣ್ಣಿನಿಂದ ತಯಾರಿಸಿದ ಎತ್ತುಗಳ ವಿಗ್ರಹದ ಮಾರಾಟ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಭರ್ಜರಿಯಾಗಿ ನಡೆಯಿತು. ಶುಕ್ರವಾರ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬ ನಡೆಯಲಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಕಂಪಿಲರಾಯ (ನಡುವಲ ಮಸೀದಿ) ಬಳಿ ಮಣ್ಣೆತ್ತುಗಳ ಮಾರಾಟ ಮಾಡುವಲ್ಲಿ ಚಿತ್ರಗಾರ ಕುಟುಂಬದ ಸದಸ್ಯರು ಹಾಗೂ ಬೇರೆ ಊರಿನಿಂದ ಬಂದಂತಹ ಕುಂಬಾರ ಕುಟುಂಬದವರು ಪೈಪೋಟಿ ನಡೆಸಿ, ಗ್ರಾಹಕರ ಬಳಿ ಚೌಕಾಸಿ ನಡೆಸುತ್ತಿರುವುದು ಸಾಮಾನ್ಯವಾಗಿತ್ತು.
ಬಳ್ಳಾರಿ ಜಿಲ್ಲೆಯ ಹಲವೆಡೆ ಮಣ್ಣಿನಿಂದ ತಯಾರಿಸಿದ, ನೀರಿನಲ್ಲಿ ಕರಗುವ ಬಸವಣ್ಣಗಳ ಮಾರಾಟ ನಡೆದಿದೆ. ಬಣ್ಣವಿಲ್ಲದ ಹಸಿ ಮಣ್ಣಿನ ಒಂದು ಜೋಡಿ ಎತ್ತು ಮತ್ತು ಗೋದ್ಲಿಗಳನ್ನು 30 ರೂಪಾಯಿ ಬೆಲೆಗೆ, ಬಣ್ಣ ಹಚ್ಚಿದ ಜೋಡಿ ಎತ್ತು ಮತ್ತು ಗೋದ್ಲಿಯನ್ನು 40 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ಮಣ್ಣೆತ್ತಿನ ಬಸವಣ್ಣಗಳನ್ನು ಮಣ್ಣೆತ್ತಿನ ಅಮಾವಾಸ್ಯೆಯಾದ ಶುಕ್ರವಾರದಂದು ಮನೆಯ ಜಗುಲಿಯಲ್ಲಿ ಪ್ರತಿಷ್ಠಾಪಿಸಿ ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಪದಾರ್ಥಗಳ ನೈವೇದ್ಯ ಮಾಡುವುದು ಕೃಷಿಕ ಕುಟುಂಬಗಳ ಸಹಜ ಸಂಪ್ರದಾಯ.
ಈ ಹಬ್ಬದ ಆಚರಣೆಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಹಿನ್ನಲೆಯೂ ಇದೆ ಎಂದು ಹಿರಿಯರು ಹೇಳುತ್ತಾರೆ.
ಶುಕ್ರವಾರ ಸಂಜೆ ಈ ಬಸವಣ್ಣಗಳನ್ನು ಚಿಕ್ಕ ಮಕ್ಕಳು ಕೈಯಲ್ಲಿ ಹಿಡಿದುಕೊಂಡು ಸ್ಪರ್ಧೆಯಲ್ಲಿ ಓಡಿ, ಗುರಿ ತಲುಪುತ್ತಾರೆ. ದೊಡ್ಡ ಮಟ್ಟದಲ್ಲಿ ಒಲಂಪಿಕ್ನಂತೆ ಓಟದ ಸ್ಪರ್ಧೆಯೂ ಹಳ್ಳಿಗಳಲ್ಲಿ ನಡೆಯಲಿದೆ.

ಪೂಜೆ, ಆಟದ ನಂತರ ಮನೆಯ ಹಿರಿಯರು ಎತ್ತುಗಳನ್ನು ದನದ ಕೊಟ್ಟಿಗೆಯಲ್ಲಿ ಕಟ್ಟಿ, ಮುಂದಿನ ವರ್ಷದವರೆಗೆ ಕಾಪಾಡಿಕೊಂಡು ಬರುತ್ತಾರೆ ಅಥವಾ ನೀರಿಗೆ ಹಾಕುತ್ತಾರೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications