ಸಂಕ್ರಾಂತಿ ಪ್ರಯುಕ್ತ ಪಂಪಾ ಕ್ಷೇತ್ರಕ್ಕೆ ಹರಿದು ಬಂದ ಜನಸಾಗರ
ಬಳ್ಳಾರಿ, ಜನವರಿ 15: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಹಂಪಿಯ ಪಂಪಾ ಕ್ಷೇತ್ರಕ್ಕೆ ತಂಡೋಪತಂಡವಾಗಿ ಭಕ್ತರು ಆಗಮಿಸಿದ್ದಾರೆ.
ಶ್ರೀ ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯ ಸೇರಿದಂತೆ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ್ದ ನೂರಾರು ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ದೇವರ ಕೃಪೆಗೆ ಪಾತ್ರರಾದರು.
ಆದರೆ ಕಳೆದ ವರ್ಷ ತುಂಗಭದ್ರಾ ನದಿಯಲ್ಲಿ ನೀರು ಇರಲಿಲ್ಲ. ಅಳಿದು ಉಳಿದ ನೀರಿನಲ್ಲಿ ಸ್ನಾನ ಮಾಡಿದ್ರು . ಆದ್ರೆ ಈ ವರ್ಷ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಇದೇ ಕಾರಣಕ್ಕೆ ಈ ವರ್ಷ ಅತೀ ಹೆಚ್ಚು ಜನ ನದಿಯಲ್ಲಿ ಸ್ನಾನ ಮಾಡಿದ್ದಾರೆ.

ಮಕರ ಸಂಕ್ರಾಂತಿ ನಿಮಿತ್ತ ಶ್ರೀ ವಿರೂಪಾಕ್ಷೇಶ್ವರ ದೇವರಿಗೆ ರುದ್ರಾಭಿಷೇಕ ಸೇರಿ ನಾನಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸುತ್ತಲಿನ ಪ್ರದೇಶಕ್ಕೆ ಹೋಲಿಸಿಕೊಂಡರೆ, ಹಂಪಿಗೆ ಅತೀ ಹೆಚ್ವು ಜನ ಬರುತ್ತಾರೆ.

ಕಾರಣ ದೇವರ ದರ್ಶನದ ಜೊತೆಯಲ್ಲಿ ಒಂದು ಫ್ಯಾಮಿಲಿ ಟ್ರಿಪ್ ಕೂಡಾ ಆಗತ್ತೆ. ತುಂಗಭದ್ರಾ ನದಿಯ ಸ್ನಾನ ಮಾಡಿಕೊಂಡು ದೇವರ ದರ್ಶನ ಪಡೆದ ಬಳಿಕ ಸುತ್ತಲಿನ ಪ್ರವಾಸಿ ಸ್ಥಳಗಳನ್ನು ನೋಡಬಹುದಾಗಿದೆ. ಜೊತೆಯಲ್ಲಿ ಹಂಪಿಯಲ್ಲಿ ಹೊಸದಾಗಿ ನಿರ್ಮಾಣವಾದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಸಹ ನೋಡಬಹುದು. ಹೀಗಾಗಿ ಸಂಕ್ರಾಂತಿ ಇರಲಿ, ಫ್ಯಾಮಿಲಿ ಟ್ರಿಪ್ ಇರಲಿ ಅದಕ್ಕೆ ಹಂಪಿ ಸೂಕ್ತವಾಗಿದೆ ಎನ್ನಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications