ಬಾಣಂತಿಯರ ಸಾವಿಗೆ ಮತ್ತೊಂದು ಶಾಕಿಂಗ್ ಕಾರಣ ಪತ್ತೆ ಹಚ್ಚಿದ ಮಹಿಳಾ ಆಯೋಗ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಇದೀಗ ಎಲ್ಲೆಡೆ ಚರ್ಚೆಯಲ್ಲಿದೆ. ಈ ಬಗ್ಗೆ ಹಲವು ಅನುಮಾನಗಳು ಕೂಡ ವ್ಯಕ್ತವಾಗಿದ್ದು, ತನಿಖೆಗೆ ಸರ್ಕಾರ ಆದೇಶಿಸಿದೆ. ಈ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಕೂಡ ಎಂಟ್ರಿ ನೀಡಿದ್ದು, ಬಾಣಂತಿಯರ ಸಾವಿಗೆ ಮತ್ತೊಂದು ಶಾಕಿಂಗ್ ಕಾರಣ ಪತ್ತೆ ಹಚ್ಚಿದೆ ಎನ್ನಲಾಗಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಈಗಾಗಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅಲ್ಲಿನ ಮಹಿಳೆಯರ ಸಾವಿಗೆ ಸಂಬಂಧಿಸಿದಂತೆ ಪರಿಶೀಲನೆಯೂ ನಡೆಸಿದ್ದಾರೆ. ಇನ್ನು ಮೇಲ್ನೋಟಕ್ಕೆ ಮೊದಲಿಗೆ ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ಈಗಾಗಲೇ ಬಹಿರಂಗವಾಗಿದೆ. ಇದರ ಜೊತೆಗೆ ಆಪರೇಷನ್ ಕೊಠಡಿಗಳಲ್ಲಿನ ಅಸ್ವಚ್ಛತೆ ಕೂಡ ಈ ಸಾವುಗಳಿಗೆ ಕಾರಣ ಆಗಿರಬಹುದು ಎಂದು ನಾಗಲಕ್ಷ್ಮಿ ಚೌಧರಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಹೌದು, ಇತ್ತೀಚೆಗೆ ಸಂಭವಿಸಿದ ಸಾವುಗಳಿಗೆ ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರವಲ್ಲದೆ, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿ, ಹೆರಿಗೆ ವಾರ್ಡ್ ಹಾಗೂ ಅಲ್ಲಿಗೆ ಬರುವ ನೀರಿನ ಟ್ಯಾಂಕರ್ಗಳ ಸ್ವಚ್ಛತೆಯನ್ನು ಸಹ ಪರಿಶೀಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು ಬಾಣಂತಿಯರ ಸಾವಾಗಿದ್ದ ಹಿನ್ನೆಲೆ, ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಘಟನೆ ಸಂಬಂಧಿಸಿದ ವರದಿ ಕಲೆಹಾಕಿದ್ದೇವೆ. ಆಪರೇಷನ್ ಥಿಯೇಟರ್ನ ಸ್ವಚ್ಚತೆ, ಶೌಚಾಲಯ, ಕುಡಿಯುವ ನೀರಿನ ಪೂರೈಕೆ ಹಾಗೂ ಶುಚಿತ್ವದ ಕುರಿತು ಪರಿಶೀಲನೆ ನಡೆಸಿದ್ದೇವೆ. ಈ ಸಂಪೂರ್ಣ ವರದಿಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಡಿಮೆ ವೆಚ್ಚದ ಟೆಂಡರ್ಗಳನ್ನ ಕರೆಯಬಾರದು, ಜೀವಹಾನಿಗಳ ಜತೆಗೆ ಯಾವುದೇ ರಾಜಿ ಮಾತಿಲ್ಲ. ಬಾಣಂತಿಯರಿಗೆ ಸೂಕ್ತ ಪರಿಹಾರ, ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ಸರ್ಕಾರ ಜವಾಬ್ದಾರಿವಹಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ಏನಿದು ಪ್ರಕರಣ?: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಬಾಣಂತಿಯರ ಸರಣಿ ಸಾವು ಸಂಭವಿಸಿತ್ತು. ಐದು ಮಂದಿ ಬಾಣಂತಿಯರು ಮೃತಪಟ್ಟ ಘಟನೆಯು ಸಂಚಲನ ಮೂಡಿಸಿತ್ತು. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ನೀಡುವ ಪರಿಹಾರದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಮೊದಲಿಗೆ ಪರಿಹಾರ ಮೊತ್ತವನ್ನು 2 ಲಕ್ಷ ರೂಪಾಯಿ ಎಂದು ಸರ್ಕಾರ ಘೋಷಿಸಿತ್ತು.
ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಎಂಬುವವರನ್ನು ಸಸ್ಪೆಂಡ್ ಮಾಡಿದ್ದು, ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅದರ ವಿರುದ್ಧ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗಿದೆ. ಈ ಸಂಬಂಧ ಈಗ ಮಹಿಳಾ ಆಯೋಗ ಕೂಡ ವರದಿ ಸಲ್ಲಿಸಲು ಮುಂದಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications