ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರು, ಕುಚುಕುಗಳ ನಡುವೆ ಮನಸ್ತಾಪ?
ಬಳ್ಳಾರಿ, ಡಿಸೆಂಬರ್, 04: ಎರಡು ದೇಹ ಒಂದೇ ಜೀವದಂತಿದ್ದ ಆಪ್ತ ಸ್ನೇಹಿತರಾದ ಸಚಿವ ಶ್ರೀರಾಮುಲು, ಮಾಜಿ ಸಚಿವ ಜನಾರ್ದನರೆಡ್ಡಿ ನಡುವೆ ಬಿರುಕು ಕಾಣಿಸಿಕೊಂಡಂತಿದೆ. ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದು, ಇದು ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ.
ಸಾಮಾನ್ಯವಾಗಿ ಜನಾರ್ದನ ರೆಡ್ಡಿ ಅವರ ಯಾವುದೇ ಕಾರ್ಯಕ್ರಮವಿದ್ದರೂ ಶ್ರೀ ರಾಮುಲು ಸ್ವಂತ ಸಹೋದರನಂತೆ ಹಾಜರಾಗುತ್ತಿದ್ದರು. ಯಾರಿಗೆ ಆಹ್ವಾನವಿಲ್ಲದಿದ್ದರೂ ಶ್ರೀರಾಮುಲುಗೆ ಆಹ್ವಾನ, ಪ್ರಮುಖ್ಯತೆ ಇದ್ದೇ ಇರುತ್ತಿತ್ತು. ಆದರೆ ಇತ್ತೀಚೆಗೆ ನಡೆದ ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣ ಕಾರ್ಯಕ್ರಮಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದಾರೆ. ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪ ಹೋದರೂ ಶ್ರೀರಾಮುಲು ಹೋಗಿಲ್ಲ. ಹೀಗಾಗಿ ಆಪ್ತ ಗೆಳೆಯರ ಮಧ್ಯೆ ಮುನಿಸು ಉಂಟಾಗಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ. ಜನಾರ್ದನ ರೆಡ್ಡಿಯಿಂದ ಆಪ್ತ ಸ್ನೇಹಿತ ಸಚಿವ ಶ್ರೀರಾಮುಲು ಅಂತರ ಕಾಯ್ದುಕೊಂಡಿದ್ದು ಏಕೆ? ಎನ್ನುವ ಪ್ರಶ್ನೆಗಳು ಎದ್ದಿವೆ.
ಬಿಜೆಪಿಯಲ್ಲಿ ಮನ್ನಣೆ ಸಿಗದ ಹಿನ್ನೆಲೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಯೋಜನೆ ರೂಪಿಸಿದ್ದಾರೆ. ಹೀಗಾಗಿ ಸಚಿವ ಬಿ.ಶ್ರೀರಾಮುಲು ಜನಾರ್ದನ ರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆಯಾ?. ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಹೋದರರು ಮಾತ್ರ ಹಾಜರಾಗಿದ್ದಾರೆ. ಆದರೆ ಸಚಿವ ಶ್ರೀರಾಮುಲು ಗೈರು ನಂತರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗಳು ಶುರುವಾಗಿವೆ.

ಬಿಜೆಪಿ ವಿರುದ್ಧ ರೆಡ್ಡಿ ಮುನಿಸಿದ್ದೇಕೆ?
ಕಾಂಗ್ರೆಸ್ಗಿಂತ ಬಿಜೆಪಿ ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ. ನಾನು ಬೆಳೆಸಿದ ಪಕ್ಷದವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಹೇಳುವ ಮೂಲಕ ಈ ಹಿಂದೆ ಸಮಾರಂಭವೊಂದರಲ್ಲಿ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ವೇಳೆ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುವ ಬಗ್ಗೆಯೂ ಸುಳಿವು ನೀಡಿದ್ದರು.

ರಾಮುಲು ಜೊತೆಗೂ ಚರ್ಚೆ ನಡೆಸಿದ್ರಾ?
ಅದರಂತೆಯೇ ಅಸಮಾಧಾನಿತ ಹಾಗೂ ಟಿಕೆಟ್ ಗೊಂದಲದಲ್ಲಿರುವವರ ಜೊತೆ ಜನಾರ್ದನ ರೆಡ್ಡಿ ಸಪರ್ಕದಲ್ಲಿದ್ದಾರೆ. ಈ ಹಿಂದೆ ಶ್ರೀರಾಮುಲು ಜೊತೆಗೂ ಚರ್ಚೆ ನಡೆದಿದೆ. ಆದರೆ ರಾಮುಲು ಇದಕ್ಕೆ ಮಣೆ ಹಾಕಿಲ್ಲ. ಹೀಗಾಗಿ ಇವರಿಬ್ಬರ ನಡುವೆ ಮುನಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗೈರಾದ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು?
ಇನ್ನು ಕಾರ್ಯಕ್ರಮಕ್ಕೆ ಭೇಟಿ ನೀಡದ ಸಂಬಂಧ ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. "ಸ್ವಾಮೀಜಿಯೊಬ್ಬರ ತಂಗಿ ಮದುವೆಗೆ ಜೈಪುರಕ್ಕೆ ಹೋಗಿದ್ದೆ. ಹಾಗಾಗಿ ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಹೋಗಿಲ್ಲ. ಈ ವಿಚಾರದಲ್ಲಿ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕೀಯ ಹೊರತುಪಡಿಸಿ ನಾನು, ಜನಾರ್ದನ ರೆಡ್ಡಿ ಉತ್ತಮ ಸ್ನೇಹಿತರಾಗಿದ್ದಾರೆ. ಹೊಸ ಪಕ್ಷ ಕಟ್ಟುವ ವಿಚಾರ ಜನಾರ್ದನ ರೆಡ್ಡಿ ವಿವೇಚನೆಗೆ ಬಿಟ್ಟಿದ್ದು. ಪಕ್ಷ ಕಟ್ಟುವ ವಿಚಾರವನ್ನು ಜನಾರ್ದನ ರೆಡ್ಡಿ ನನ್ನ ಜೊತೆ ಚರ್ಚಿಸಿಲ್ಲ. ರಾಜಕೀಯವಾಗಿ ಎಲ್ಲೇ ಇದ್ದರೂ ಜನಾರ್ದನ ರೆಡ್ಡಿಗೆ ಒಳ್ಳೆಯದಾಗಲಿ. ಕೆಲವು ವಿಚಾರದಲ್ಲಿ ಬಿಜೆಪಿ ಮೇಲೆ ಜನಾರ್ದನ ರೆಡ್ಡಿಗೆ ಬೇಸರ ಆಗಿದೆ. ಅವರು ಹೊಸ ಪಕ್ಷದ ಬಗ್ಗೆ ನನಗೆ ಮಾಹಿತಿ ಇಲ್ಲ. ರೆಡ್ಡಿ ಅಸಮಾಧಾನದ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಅಂತಾ," ಹೇಳಿದ್ದಾರೆ.

ಚರ್ಚೆಗೆ ಕಾರಣವಾಯ್ತ ಕುಚುಕುಗಳ ಮನಸ್ತಾಪ?
ರೆಡ್ಡಿ ಶ್ರೀರಾಮುಲು ಎಂಬ ಇಬ್ಬರು ಕುಚುಕು ಗೆಳೆಯರ ನಡುವೆ ಈಗ ಮನಸ್ತಾಪ ಉಂಟಾಗಿದೆ ಅನ್ನುವುದು ಗಣಿನಾಡಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸ್ನೇಹಿತರ ನಡುವಿನ ಈ ಬಿರುಕು ಮುಂದೆ ರಾಜಕೀಯವಾಗಿ ಯಾವ ತಿರುವು ಪಡೆದುಕೊಳ್ಳುತ್ತದೆ ಅನ್ನುವುದನ್ನು ಕಾದುನೋಡಬೇಕಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications