ಜನಾರ್ದನ ರೆಡ್ಡಿ ಸ್ನೇಹಕ್ಕೆ ಜೀವ ಕೊಡಲು ಸಿದ್ಧನಿದ್ದೇನೆ: ಸ್ನೇಹ ಮಂತ್ರ ಜಪಿಸಿದ ಶ್ರೀರಾಮುಲು
ಬಳ್ಳಾರಿ, ಡಿಸೆಂಬರ್ 8: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಬಂಡಾಯದ ಮುನ್ಸೂಚನೆ ನೀಡುತ್ತಿದ್ದಂತೆ ಸಚಿವ ಶ್ರೀರಾಮುಲು ಅವರು ಸ್ನೇಹದ ಮಂತ್ರ ಜಪಿಸಲು ಮುಂದಾಗಿದ್ದಾರೆ.
ಜನಾರ್ದನ ರೆಡ್ಡಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಫರ್ಧಿಸಲು ಸಿದ್ಧತೆ ಆರಂಭಿಸಿದ್ದು, ಬಿಜೆಪಿ ಬಗ್ಗೆ ಅಸಮಾಧಾನಗೊಂಡು ಹೊಸ ಪಕ್ಷ ಕಟ್ಟುತ್ತಾರೆ ಎನ್ನಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜನಾರ್ದನ ರೆಡ್ಡಿ, ಅಭಿಮಾನ ಅಂದರೆ ಬಿಜೆಪಿ, ನನ್ನ ಸಂಪೂರ್ಣ ರಾಜಕೀಯ ಜೀವನ ಅಂದರೆ ಅದು ಬಿಜೆಪಿ ಎಂದಿದ್ದರು.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಆಪ್ತಮಿತ್ರರಾಗಿದ್ದ ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದು, ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಇದೀಗ ಸಚಿವ ಶ್ರೀರಾಮುಲು ತಮ್ಮ ಹಾಗೂ ಜನಾರ್ದನ ರೆಡ್ಡಿ ಸ್ನೇಹದ ಬಗ್ಗೆ ಮಾತನಾಡಿದ್ದಾರೆ.

ಸ್ನೇಹ ಮತ್ತು ರಾಜಕಾರಣ ಎರಡೂ ಕೂಡ ಮುಖ್ಯ
ಬಳ್ಳಾರಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದಲ್ಲಿ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನವೊಲಿಸಿ, ಅವರ ಅಸಮಾಧಾನ ಹೋಗಲಾಡಿಸಲು ನಾನು ಸಿದ್ಧನಿದ್ದೇನೆ. ಅವರೊಂದಿಗಿನ ಸ್ನೇಹಕ್ಕೆ ಜೀವ ಕೊಡಲು ತಯಾರಿದ್ದೇನೆ" ಎಂದು ಶ್ರೀರಾಮುಲು ಹೇಳಿದ್ದಾರೆ.
"ಜನಾರ್ದನ ರೆಡ್ಡಿ ಅವರು ನನ್ನ ಆತ್ಮೀಯ ಸ್ನೇಹಿತರು, ಸ್ನೇಹ ಅಂದ್ರೆ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಎನ್ನುವಂತೆ ಎಲ್ಲರೂ ಮಾತಾಡುತ್ತಾರೆ. ಸ್ನೇಹಕ್ಕೆ ಪ್ರಾಣ ಕೊಡುವ ವ್ಯಕ್ತಿ ಶ್ರೀರಾಮುಲು. ಸ್ನೇಹ ಮತ್ತು ರಾಜಕಾರಣ ಎರಡೂ ಕೂಡ ಮುಖ್ಯ. ಬಿಜೆಪಿ ಪಕ್ಷ ನನಗೆ ತಾಯಿ ಸಮಾನ. ಸ್ನೇಹ ಮತ್ತು ಪಾರ್ಟಿ ವಿಚಾರ ಬಂದಾಗ ಎರಡನ್ನೂ ಕೂಡ ಸರಿದೂಗಿಸಿಕೊಂಡು ಹೋಗುವೆ ಎಂದು ಶ್ರೀರಾಮುಲು ತಮ್ಮ ನಡೆಯನ್ನು ತಿಳಿಸಿದ್ದಾರೆ.

ನನ್ನ ಸ್ನೇಹಿತ ಅಸಮಾಧಾನಗೊಳ್ಳದಂತೆ ನಾನು ಮಾತನಾಡುವೆ
"ರಾಜಕಾರಣ ವಿಚಾರ ಬಂದಾಗ ಜನಾರ್ದನ ರೆಡ್ಡಿ ಅವರ ಬಗ್ಗೆ ಅಲ್ಲಿಇಲ್ಲಿ ಸುದ್ದಿಗಳನ್ನು ಕೇಳುತ್ತಿದ್ದೇವೆ. ನಾನು ಇನ್ನೂ ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿಲ್ಲ. ಜನಾರ್ದನ ರೆಡ್ಡಿ ಅವರ ಸದ್ಯದ ರಾಜಕೀಯದ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಅವರು ನನಗೆ ಸಿಕ್ಕ ಬಳಿಕ ಅವರನ್ನು ಕೂರಿಸಿಕೊಂಡು ಮಾತಾಡುವೆ. ನನ್ನ ಸ್ನೇಹಿತ ಅಸಮಾಧಾನಗೊಳ್ಳದಂತೆ ನಾನು ಕೂರಿಸಿ ಮಾತಾಡುವೆ. ಅವರ ಮನವೊಲಿಸುವ ಕೆಲಸ ಮಾಡುವೆ. ಪಕ್ಷಕ್ಕೆ ಮುಜುಗರವಾಗದಂತೆ ಎಲ್ಲವನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವೆ ಎಂದು ಹೇಳಿದರು.

ಗದಗ ಶ್ರೀರಾಮುಲು ಮನೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ
ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಜೊತೆ ಬಿಜೆಪಿ ನಾಯಕರು ಕಾಣಿಸಿಕೊಂಡ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರೆಲ್ಲರೂ ಹನುಮ ಜಯಂತಿಗೆ ಬಂದಿದ್ದರು. ಸಾರ್ವಜನಿಕ ಕಾರ್ಯಕ್ರಮವಗಿರುವುದರಿಂದ ಎಲ್ಲರೂ ಪಕ್ಷಾತೀತವಾಗಿ ಬರುತ್ತಾರೆ. ಈ ಬಗ್ಗೆ ಅಪಾರ್ಥ ಕಲ್ಪಿಸುವುದು ಬೇಡ ಎಂದರು.
ಇನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ಗದಗಕ್ಕೆ ಭೇಟಿ ನೀಡಿದ್ದು, ಸಾರಿಗೆ ಸಚಿವ ಶ್ರೀರಾಮುಲು ಅವರ ನಿವಾಸಕ್ಕೂ ತೆರಳಿದ್ದರು. ಬಳಿಕ ಬಸವೇಶ್ವರ ಗಾರ್ಡನ್ಗೆ ಭೇಟಿ ನೀಡಿದ್ದರು.

ಗಂಗಾವತಿಯಲ್ಲಿ ಜನಾರ್ದನ್ ರೆಡ್ಡಿ ಸಂಚಾರ
ಗಾಲಿ ಜನಾರ್ದನ್ ರೆಡ್ಡಿ ಅವರ ಸದ್ಯ ರಾಜಕೀಯವಾಗಿ ಮುಂದಿನ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಇದೆ. ಈಗಾಗಲೇ ಜನರ ಜೊತೆ ಬೆರೆಯಲು ಜನಾರ್ದನ್ ರೆಡ್ಡಿ ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಚಾರ ಆರಂಭಿಸಿದ್ದಾರೆ. ಜನಾರ್ದನ್ ರೆಡ್ಡಿ ಗಂಗಾವತಿಯ ಐತಿಹಾಸಿಕ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ಕೆಲವು ಸಾರ್ವಜನಿಕ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತಿದ್ದಾರೆ. ಕೋರ್ಟ್ ಆದೇಶದಂತೆ ಬಳ್ಳಾರಿಯಿಂದ ದೂರಾಗಿರುವ ಜನಾರ್ದನ್ ರೆಡ್ಡಿ ಗಂಗಾವತಿಯಲ್ಲಿ ಮನೆ ಮಾಡಿದ್ದಾರೆ. ಇನ್ನು ಈವೆರೆಗೂ ಹೊಸ ಪಕ್ಷದ ವಿಚಾರವಾಗಿ ಯಾವುದೇ ಮಾತನಾಡದ ಅವರು, ಜನರ ಜೊತೆ ಸಂಪರ್ಕದಲ್ಲಿರಲು ಸಂಚಾರ ನಡೆಸುತ್ತಿದ್ದೇನೆ ಎಂದು ಈ ಹಿಂದೆ ತಿಳಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications