ಕೃಷಿ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಮಿಶ್ರಬೆಳೆ ಪದ್ಧತಿ ಸಹಕಾರಿ
ಬಳ್ಳಾರಿ, ಮೇ 06: ಬಳ್ಳಾರಿ ಜಿಲ್ಲೆಯ ಕೃಷಿ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಮಿಶ್ರಬೆಳೆ ಪದ್ಧತಿ ಅಳವಡಿಕೆ ಸಹಕಾರಿಯಾಗಿದೆ. ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಮಣ್ಣಿನ ಗುಣವನ್ನಾಧರಿಸಿ ರೈತರು ಬೆಳೆ ತೆಗೆಯಬೇಕು. ಈ ಕುರಿತು ರೈತರಿಗೆ ಮಾಹಿತಿ ಒದಗಿಸಿ ಎಂದು ಸಂಸದ ಈ. ತುಕಾರಾಮ್ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದ ಈ. ತುಕಾರಾಮ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಸಂಡೂರಿನ ನಂದಿಹಳ್ಳಿ ಪಿ. ಜಿ. ಹಳ್ಳಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಸಂಸದರು, "ಜಿಲ್ಲೆಯ 5 ತಾಲೂಕುಗಳಲ್ಲಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳುವ ಕುರಿತು ರೈತರಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಿ ಮಾಹಿತಿ ಒದಗಿಸಬೇಕು. ಈ ಕುರಿತು ಕೃಷಿ, ತೋಟಗಾರಿಕೆ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು" ಎಂದು ನಿರ್ದೇಶನ ನೀಡಿದರು.
"ಜಿಲ್ಲೆಯಲ್ಲಿ ವಿವಿಧೆಡೆ ಕೆಲ ರೀತಿಯ ಬೆಳೆ ಬೆಳೆಯುತ್ತಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಮಣ್ಣಿನ ಗುಣವನ್ನಾಧರಿಸಿ ರೈತರು ಬೆಳೆ ತೆಗೆಯಬೇಕು. ವಿವಿಧ ರೀತಿಯ ಸರ್ವ ರೀತಿಯ ಬೆಳೆ ಬೆಳೆಯಲು ಒಂದು ಮಾಸ್ಟರ್ ಪ್ಲಾನ್ ಮಾಡಬೇಕು. ಜಿಲ್ಲೆಯ ಯಾವ ಯಾವ ತಾಲೂಕಿನಲ್ಲಿ ಯಾವ ರೀತಿಯ ಮಣ್ಣು ಇದೆ?, ಯಾವ ಕಡೆಗೆ ಯಾವ ರೀತಿ ಬೆಳೆಯುತ್ತಾರೆ? ಎಂಬುದರ ಬಗ್ಗೆ ಅಧ್ಯಯನ ನಡೆಸಲು ಲ್ಯಾಬ್ ಆರಂಭಿಸುವ ಮೂಲಕ ಸಮಗ್ರ ವರದಿ ಸಂಗ್ರಹಿಸಬೇಕು" ಎಂದರು.
ಯಾವ ಮಣ್ಣಿನಲ್ಲಿ ಯಾವ ರೀತಿ ಬೆಳೆ ಬೆಳೆದರೆ ಹೆಚ್ಚು ಲಾಭವಾಗುತ್ತದೆ ಎಂಬುದರ ಬಗ್ಗೆ ಜಿಲ್ಲೆಯ ರೈತರಿಗೆ ಹೊಸದೊಂದು ಮಾರ್ಗದರ್ಶಿ ಯೋಜನೆ ರೂಪಿಸೋಣ ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೇರೀತಿಯಾಗಿ ಜಿಲ್ಲೆಯಲ್ಲಿ ಮುಂಬರುವ ಜೂನ್ನಿಂದ ಬಿತ್ತನೆ ಕಾರ್ಯಗಳು ಪ್ರಾರಂಭಗೊಳ್ಳಲಿವೆ. ಕಾಳಸಂತೆಯಲ್ಲಿ ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ರೈತರಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಮನವೊಲಿಸಬೇಕು. ಕೃಷಿ, ರೈತರ ವಿಷಯಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು. ತಾಲ್ಲೂಕುಗಳಲ್ಲಿ ವಿವಿಧೆಡೆ ಸಮರ್ಪಕ ಮೀನು ಮಾರುಕಟ್ಟೆಗಳಿಲ್ಲ, ಎಲ್ಲಿ ಬೇಕೆಂದರಲ್ಲಿ ಮಾರುವುದು ಕಂಡುಬರುತ್ತಿದ್ದು, ಅವರಿಗೆ ಪೂರಕವಾದ ಮೀನು ಮಾರುಕಟ್ಟೆ ಒದಗಿಸಬೇಕು ಎಂದು ಮೀನುಗಾರಿಕೆ ಉಪನಿರ್ದೇಶಕರಿಗೆ ಸೂಚಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೂ ಈ ವಿಷಯ ತಂದರು.
ಜಿಲ್ಲೆಯಲ್ಲಿ ಅಸ್ತಮಾ, ಕಿಡ್ನಿ, ಕ್ಯಾನ್ಸರ್ ಸೇರಿದಂತೆ ಇತರೆ ಖಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೇಕಾಗುವಂತಹ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಹಾಗೂ ಸಮುದಾಯ ಆಸ್ಪತೆಗಳನ್ನು ಮೇಲ್ದರ್ಜೆಗೇರಿಸಲು ಇರುವ ಮಾನದಂಡ, ಚಿಕಿತ್ಸೆಗೆ ಬೇಕಾಗುವ ಅತ್ಯಾಧುನಿಕ ಉಪಕರಣಗಳು ಸೇರಿದಂತೆ ಯಾವುದೇ ವೈದ್ಯಕೀಯ ಸೌಕರ್ಯಗಳು ಬೇಕಿದ್ದರೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
-
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications