'ಕೈ' ಟಿಕೇಟ್ ಕೈತಪ್ಪಿದ್ದಕ್ಕೆ ಶಾಸಕ ನಾಗರಾಜ ಅಭಿಮಾನಿ ಆತ್ಮಹತ್ಯೆಗೆ ಯತ್ನ
ಸಿರುಗುಪ್ಪ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಎಂ.ನಾಗರಾಜ ಅವರಿಗೆ ಟಿಕೇಟ್ ನೀಡದಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿರುಗುಪ್ಪದಲ್ಲಿ ಸೋಮವಾರ ತೀವ್ರ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಯುವ ಮುಖಂಡ ಪವನಕುಮಾರ ದೇಸಾಯಿ ಆತ್ಮಹತ್ಯೆಗೆ ಮುಂದಾಗಿದ್ದಾರೆ.
ತಮ್ಮ ನೆಚ್ಚಿನ ನಾಯಕ ಬಿ.ಎಂ. ನಾಗರಾಜ ಅವರಿಗೆ ಟಿಕೇಟ್ ಕೈತಪ್ಪಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅವರನ್ನು ನೆರೆದಿದ್ದ ನಾಯಕರು ಸಮಾಧಾನಪಡಿಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ನಾಗರಾಜ ಅವರಿಗೆ ಟಿಕೇಟ್ ಕೈತಪ್ಪಲು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರೇ ಕಾರಣ. ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಸರ್ವನಾಶ ಮಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
ಸಂತೋಷ ಲಾಡ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ, ಪೊರಕೆಯಿಂದ ಭಾವಚಿತ್ರಕ್ಕೆ ಹಿಗ್ಗಾಮುಗ್ಗಾ ಹೊಡೆಯುತ್ತ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ,
ಗಾಂಧೀ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರ್ ಗಳಿಗೆ ಬೆಂಕಿ ಹಚ್ಚಿ, ಸಂತೋಷ ಲಾಡ್ ಪ್ರತಿಕೃತಿ ದಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ ಮಾತನಾಡಿ, ಗಣಿಧಣಿಗಳ ಪ್ರಭಾವ ಇದ್ದರೂ ತಮ್ಮ ಜನಪ್ರಿಯತೆ, ಸರಳತೆ ಹಾಗೂ ಸಮಾಜ ಮುಖಿ ಸೇವೆಯಿಂದ ಪ್ರಬಲ ಬಿಜೆಪಿ ಅಭ್ಯರ್ಥಿ ವಿರುದ್ಧ 23 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು ಎಂದರು.
ಹಿರಿಯ ಮುಖಂಡ ಮುತ್ಯಾಲಯ್ಯಶೆಟ್ಟಿ ಮಾತನಾಡಿ, ಕುಡಿಯುವ ನೀರಿನ ಕೆರೆ ನಿರ್ಮಾಣ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸ್ಥಳೀಯರಿಗೆ ಟಿಕೇಟ್ ನೀಡದೆ ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೇಟ್ ನೀಡಿದ್ದು, ಪಕ್ಷದ ಗೆಲುವಿಗೆ ಅಡ್ಡಿಯಾಗಲಿದೆ. ಬಿ.ಎಂ. ನಾಗರಾಜ ಅವರಿಗೆ ಟಿಕೇಟ್ ಘೋಷಿಸದೆ ಇದ್ದಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾದ ತಾಪಂ, ಜಿಪಂ, ಗ್ರಾಪಂ, ಪಪಂ, ನಗರಸಭೆ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನೆ ಹಿನ್ನಲೆಯಲ್ಲಿ ಒಂದು ತಾಸುಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಬಿ.ಎಂ.ನಾಗರಾಜರಿಗೆ ಟಿಕೇಟ್ ತಪ್ಪಿದ್ದೇಕೆ?
ಹಾಲಿ ಶಾಸಕ ಬಿ.ಎಂ. ನಾಗರಾಜ್ ಅವರಿಗೆ ಸ್ವತಃ ಮುಖ್ಯಮಂತ್ರಿಗಳೇ ಟಿಕೇಟ್ ನೀಡುವ ಭರವಸೆ ನೀಡಿದ್ದರೂ ಅವರ ಬದಲು ಹೊಸಮುಖ, ರಾಜಕೀಯ ಶಾಲೆಯ ಹೊಸ ಸ್ಟೂಡೆಂಟ್ ಮುರಳಿಕೃಷ್ಣಗೆ ಟಿಕೇಟ್ ಸಿಕ್ಕಿರುವುದದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಹುಟ್ಟುಹಾಕಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ನಾಗರಾಜ್ ಅವರ ಕುರಿತು ಕ್ಷೇತ್ರದಲ್ಲಿ ಮಿಶ್ರ ಅಭಿಪ್ರಾಯವಿದೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇವರೇ ಸ್ಪರ್ಧಿಸಿದಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆಲ್ಲಲಿದೆ ಎನ್ನುವ ಸಾಮಾನ್ಯ ಅಭಿಪ್ರಾಯ ಮೂಡಿತ್ತು. ಒಂದು ಮಾಹಿತಿ ಪ್ರಕಾರ ಬಿ.ಎಂ. ನಾಗರಾಜ್ ಟಿಕೇಟ್ ಗಾಗಿ ಬೆಂಗಳೂರು - ದೆಹಲಿಗೆ ಸುತ್ತಲಿಲ್ಲ. ಒಂದಿಬ್ಬರು ಮುಖಂಡರ ಮಾತುಗಳನ್ನೇ ನಂಬಿ ಮನೆಯಲ್ಲೇ ಉಳಿದು, ನನಗಲ್ಲದೇ ಇನ್ಯಾರಿಗೆ ಟಿಕೇಟ್? ಎಂದು ಮಾತನಾಡಿದ್ದರಂತೆ.

ಮುಖ್ಯಮಂತ್ರಿ ಒಮ್ಮೆ ಬೆಂಗಳೂರಿಗೆ ಬಂದು ಹೋಗಯ್ಯಾ, ಟಿಕೇಟ್ ನಿನಗೇ ಗ್ಯಾರಂಟಿ ಎಂದು ಮೊಬೈಲ್ ನಲ್ಲಿ ಸ್ವತಃ ಕರೆದಿದ್ದರೂ, ಅವರು ಬೆಂಗಳೂರಿಗೆ ಹೋಗಲು ಮೀನಮೇಷ ಎಣಿಸಿ ಕೊನೆಗೆ ಬೇಕು ಬೇಕಿಲ್ಲದಂತೆ ಬೆಂಗಳೂರಿಗೆ ಹೋಗಿ ಬಂದಿದ್ದರು.
ಅಲ್ಲಲ್ಲಿ, ನನಗೆ ಟಿಕೇಟ್ ಬೇಕಿಲ್ಲ, ಪಾರ್ಟಿ ತಾನಾಗಿಯೇ ಕೊಟ್ಟಲ್ಲಿ, ನಾನು ಸ್ಪರ್ಧಿಸುತ್ತೇನೆಎಂದು ಮಾತನಾಡಿದ್ದರು ಎಂದು ಹೇಳಲಾಗುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications