Breaking: ಅನ್ನಭಾಗ್ಯ ಅಕ್ಕಿ ಕಳ್ಳಸಾಗಾಣೆ:ಶಾಸಕರಿಂದ ಪತ್ತೆ
ಬಳ್ಳಾರಿ, ಜುಲೈ 24: ಬಡಜನರಿಗಾಗಿ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದ ಜಾಲ ಒಂದು ಶಾಸಕರ ದಾಳಿಯಿಂದ ಪತ್ತೆಯಾದ ಘಟನೆ ಶನಿವಾರ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ.
ಕಂಪ್ಲಿ ಶಾಸಕರಾದ ಜೆ. ಎನ್. ಗಣೇಶ್ ಶನಿವಾರ ತಡರಾತ್ರಿ ದಾಳಿ ಮಾಡಿ 400 ಚೀಲ ಅಕ್ಕಿ ಸಾಗಿಸತ್ತಿದ್ದ ಲಾರಿಯನ್ನು ಪತ್ತೆ ಮಾಡಿದ್ದಾರೆ. ಇದೇ ರೀತಿ ದಂಧೆಕೋರರು ನಿತ್ಯ ಕಂಪ್ಲಿಯಿಂದ ತಮಿಳುನಾಡು ಸೇರಿದಂತೆ ಇನ್ನಿತರ ನೆರೆಯ ರಾಜ್ಯಗಳಿಗೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.
400 ಅಕ್ಕಿ ಚೀಲ ಸಾಗಿಸತ್ತಿದ್ದ ಲಾರಿಯ ಮೂಲಕ ನಿತ್ಯ ಒಂದೂವರೆ ಲಕ್ಷ ಲಾಭ ಪಡೆಯಲಾಗುತ್ತಿತ್ತು. ಇದಕ್ಕೆ ಕಾರಣರಾದವರು ಯಾರು?, ಅದರ ಹಿಂದಿರುವ ಪ್ರಭಾವಿ ನಾಯಕ ಯಾರು? ಎಂಬುದು ಪತ್ತೆ ಆಗಬೇಕಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಾಸಕರ ತಂಡಕ್ಕೆ ನಾಲ್ವರು ಸಿಕ್ಕಿಬಿದ್ದಿದ್ದು, ಉಳಿದವರು ತಪ್ಪಿಸಿಕೊಂಡಿದ್ದಾರೆ.

ದಂಧೆಯಲ್ಲಿ ತೊಡಗಿಕೊಂಡಿದ್ದವರು ಸ್ಥಳೀಯರು ಅಲ್ಲ. ಸ್ಥಳೀಯ ನಿವಾಸಿಗಳು ಅಲ್ಲದ ಹಾಗೂ ಕನ್ನಡ ಭಾಷೆ ಬಾರದ ವ್ಯಕ್ತಿಗಳು ಈ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಅನ್ನ ಯೋಜನೆ ಅಕ್ಕಿಗೆ ಕನ್ನ ಹಾಕುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ನಿತ್ಯ ಇಷ್ಟು ಬೃಹತ್ ಪ್ರಮಾಣದಲ್ಲಿ ಅಕ್ಕಿ ಮೂಟೆಗಳನ್ನು ಸಾಗಿಸಲಾಗುತ್ತಿದೆ ಎಂದರೆ ದಂಧೆ ಹಿಂದೆ ಯಾರದ್ದೋ ಪ್ರಭಾವಿ ವ್ಯಕ್ತಿಗಳ ಕೈವಾಡ ಇರುವ ಅನುಮಾನ ವ್ಯಕ್ತವಾಗಿದೆ. ಆದರೆ ಇಲ್ಲಿ ಕೆಲಸ ಮಾಡುತ್ತಿದ್ದ ಸದ್ಯ ಬಂಧಿತರಾಗಿರುವ ಕಾರ್ಮಿಕರು ಯಾರು, ಯಾರ ಸೂಚನೆ ಮೇರೆಗೆ ಅವರು ಈ ದಂಧೆಯಲ್ಲಿ ತೊಡಗಿಕೊಂಡಿದ್ದರು ಎಂಬುದು ತಿಳಿಯಬೇಕಿದೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿರಾರು ಚೀಲ ಅಕ್ಕಿ, ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಎಲ್ಲವನ್ನೂ ವಶಪಡಿಸಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications