ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿದರೆ ಉತ್ತಮ: ಸೋಮಶೇಖರ್ ರೆಡ್ಡಿ
ಬಳ್ಳಾರಿ, ಫೆಬ್ರವರಿ 10: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದಿರೋದು ಬೇಸರವಿದೆ, ಇದು ಕೇವಲ ನನ್ನ ಬೇಡಿಕೆ ಅಲ್ಲಾ ಬದಲಿಗೆ ನಮ್ಮ ವಾಲ್ಮೀಕಿ ಸಮುದಾಯದ ಬೇಡಿಕೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಇಂದು ಮಾತನಾಡಿದ ಸೋಮಶೇಖರ್ ರೆಡ್ಡಿ ಅವರು, ಬಳ್ಳಾರಿ ಜಿಲ್ಲಾ ವಿಭಜನೆಯ ಬಗ್ಗೆ ಸಿಎಂ ಯಡಿಯೂರಪ್ಪನವರು ತೆಗೆದುಕೊಂಡ ನಿರ್ಧಾರವನ್ನು ನಾವು ಸ್ವಾಗತ ಮಾಡುತ್ತೇವೆ. ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವುದಿಲ್ಲ ಎಂಬ ಹೇಳಿಕೆ ನಮಗೆ ಸಂತೋಷವಾಗಿದೆ ಎಂದಿದ್ದಾರೆ.
ಇನ್ನು ಬಳ್ಳಾರಿಯ ಜಿಲ್ಲೆ ವಿಭಜನೆ ಮಾಡುವುದು ಸರಿಯಲ್ಲಾ, ಈ ಹಿಂದಿನಿಂದಲೂ ವಿಭಜನೆಗೆ ನಮ್ಮ ವಿರೋಧ ಇದೆ. ಹೀಗಾಗಿ ಜಿಲ್ಲಾ ವಿಭಜನೆ ಬೇಡ ಎಂದಿದ್ದೇವೆ. ಈಗಲೂ ನಾನು ಸಚಿವ ಆನಂದ ಸಿಂಗ್ ಅವರಲ್ಲಿ ಜಿಲ್ಲೆ ವಿಭಜನೆ ಮಾಡದೇ ನಾವೆಲ್ಲಾ ಅಣ್ಣ ತಮ್ಮಂದಿರು ಹಾಗೆ ಇರಬೇಕು ಎನ್ನುವ ಮನವಿ ಮಾಡುವೆ ಎಂದು ಹೇಳಿದರು.

ಇನ್ನು ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು ಎನ್ನುವ ಹೇಳಿಕೆ ನೀಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸೋಮಶೇಖರ್ ರೆಡ್ಡಿ, ಅವರು ಡಿಸಿಎಂ ಸ್ಥಾನವನ್ನು ಶ್ರೀರಾಮುಲು ಅವರಿಗೆ ನೀಡಬೇಕು, ಅದೇ ರೀತಿ ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನೂ ಶ್ರೀರಾಮುಲು ಅವರಿಗೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇನೆ ಎಂದರು.
ಆನಂದ್ ಸಿಂಗ್ ಅವರಿಗೆ ನೀಡಿದರೂ ನಾನು ಸಂತೋಷ ಪಡುತ್ತೇನೆ, ಲಕ್ಷ್ಮಣ ಸವದಿ ಜಿಲ್ಲಾ ಉಸ್ತುವಾರಿ ಆಗಿ ಮುಂದುವರೆದರೂ ನಮಗೆ ಸಂತೋಷ, ಆದರೆ ಹೆಚ್ಚು ದಿನಗಳ ಕಾಲ ಲಕ್ಷ್ಮಣ ಸವದಿ ಜಿಲ್ಲೆಯಲ್ಲಿ ಇರಬೇಕು ಎನ್ನುವ ಮನವಿ ಮಾಡುವೆ ಎಂದಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications