ಕಿತ್ತು ತಿನ್ನುವ ಬಡತನ: ಎರಡು ಪುಟ್ಟ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
ಬಳ್ಳಾರಿ, ಜನವರಿ 24: ಮನೆಯಲ್ಲಿ ಬಡತನ, ಮೂರು ಹೊತ್ತು ಸರಿಯಾಗಿ ಊಟಮಾಡಲಾಗದ ಪರಿಸ್ಥಿತಿ ಮಕ್ಕಳ ಸಾಕುವ ಚಿಂತೆ ಹಾಗಾಗಿ ಎರಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕೊಟ್ಟೂರು ಬಳಿಯ ರಾಂಪುರ ಗ್ರಾನದ ನಿವಾಸಿ ಮಂಜಕ್ಕ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.

ಮಂಜಕ್ಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಸುಟ್ಟ ಗಾಯಗಳಿಂದ ಒದ್ದಾಡುತ್ತಿದ್ದ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಆಸ್ಪತ್ರೆಯಲ್ಲಿ ಐದು ವರ್ಷದ ಬಸವರಾಜ್ ಮೃತಪಟ್ಟಿದ್ದು, ಮೂರು ವರ್ಷದ ನಾಗಮ್ಮ ನ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications