ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಶೌಚಾಲಯ ನಿರ್ಮಾಣ ಮಾಡಿಲ್ಲ- ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಶೌಚಾಲಯ ನಿರ್ಮಾಣ ಮಾಡಿಲ್ಲ. ಈಗ ಗ್ಯಾರೆಂಟಿ ಕಾರ್ಡ್ ಕೊಡಲು ಬಂದಿದ್ದಾರೆ ಎಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಳ್ಳಾರಿ, ಮಾರ್ಚ್ 22: ಕಾಂಗ್ರೆಸ್ನವರಿಗೆ ದೇಶದಲ್ಲಿ 70 ವರ್ಷದ ಆಡಳಿತದಲ್ಲಿ ಹೈವೈ ಹಾಗೂ ರೈಲ್ವೆ ಲೈನು ಮಾಡಲು ಆಗಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಶೌಚಾಲಯ ನಿರ್ಮಾಣ ಮಾಡಿಲ್ಲ. ಈಗ ಗ್ಯಾರೆಂಟಿ ಕಾರ್ಡ್ ಕೊಡಲು ಬಂದಿದ್ದಾರೆ ಎಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕುರುಗೋಡು ಪಟ್ಟಣದಲ್ಲ ಮಂಗಳವಾರ ಸಂಜೆ ಏರ್ಪಡಿಸಿದ್ದ ಯುವ ಚೈತನ್ಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಿನ್ನೆ ಬೆಳಗಾವಿಯಲ್ಲಿ ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ. ಕೊಡುವುದಾಗಿ ಹೇಳಿದರು. ರಾಹುಲ್ ಗಾಂಧಿ ಅವರ ಹೇಳಿಕೆ ಕೇಳಿ ನನಗೆ ಆಶ್ಚರ್ಯ ಆಯ್ತು ಎಂದು ಹೇಳಿದರು.

ಮಾತು ಮುಂದುವರಿಸಿದ ಸಂಸದ ತೇಜಸ್ವಿ ಸೂರ್ಯ, ದೇಶದಲ್ಲಿ ಸ್ವಾಭಿಮಾನಿ ಯುವಕರು ಭಿಕ್ಷೆ ಬೇಡುವುದಿಲ್ಲ. ರಾಹುಲ್ ಗಾಂಧಿ ಜೀವನದಲ್ಲಿ ಸಂಬಳಕ್ಕೆ ಹೋಗಿಲ್ಲ. ಇನ್ನೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಲ್ಲಿ ಪಾಕೆಟ್ ಹಣ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರದ್ಧ ವ್ಯಂಗ್ಯವಾಡಿದರು.
ಯುವಕರ ಸ್ವಾವಲಂಬನೆ ಜೀವನಕ್ಕೆ ಮುದ್ರಾ ಯೋಜನೆ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಗ್ಯಾರೆಂಟಿ ಇಲ್ಲ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗಕ್ಕೆ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ನೂರಕ್ಕೂ ನೂರಕ್ಕೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಪಕ್ಷ ಬಿಜೆಪಿ
ಯುವ ಚೈತನ್ಯ ಸಮಾವೇಶದಲ್ಲಿ ಉಪಸ್ಥಿತರಿದ್ದ ಮಾಜಿ ಶಾಸಕ ಟಿ. ಎಚ್.ಸುರೇಶ್ ಬಾಬು ಮಾತನಾಡಿ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಪಕ್ಷ ಬಿಜೆಪಿ. ನಾನು 25 ವರ್ಷದ ಯುವಕನಾಗಿದ್ದಾಗ ಬಿಜೆಪಿ ಟಿಕೆಟ್ ನೀಡಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಡುಕ ಶುರುವಾಗಿದೆ ಎಂದು ಹೇಳಿದರು.
ಇವತ್ತು ನಮ್ಮ ಬಿಜೆಪಿ ಸರ್ಕಾರ ಇದೆ. ನಾವು ಯಾವತ್ತೂ ದೌರ್ಜನ್ಯ ಮಾಡುವುದಿಲ್ಲ. ಕಾಂಗ್ರೆಸ್ನವರು ನಮ್ಮ ಬ್ಯಾನರ್ಗಳನ್ನು ತೆಗೆಸಿದ್ದಾರೆ. ನಾನು ಶಾಸಕನಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿದ ಟಿ. ಎಚ್.ಸುರೇಶ್ ಬಾಬು ಈಗಿನ ನಮ್ಮ ಬಿಜೆಪಿ ಸರ್ಕಾರ ಕೂಡ ಕಂಪ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದೆ. ದೊಡ್ಡ ಬಸವೇಶ್ವರ ದೇವಸ್ಥಾನ ಬಳಿ ಈ ಬಗ್ಗೆ ಚರ್ಚೆಗೆ ಬರಲು ನಾನು ಸಿದ್ಧ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಸವಾಲು ಹಾಕಿದರು.
ಮಾತು ಮುಂದುವರಿಸಿದ ಅವರು, ಬಿಜೆಪಿ ಅವರು ಕಂಪ್ಲಿ ಕ್ಷೇತ್ರಕ್ಕೆ ಅನುದಾನ ಕೊಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಕಂಪ್ಲಿ ಕ್ಷೇತ್ರವನ್ನು ಈಗ ಕಮಿಷನ್ ಕ್ಷೇತ್ರ ಅಂತಾ ಕರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರ ವಿರುದ್ಧ ವ್ಯಂಗ್ಯವಾಡಿದರು. ಕುರುಗೋಡು, ಕಂಪ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ಹೇಳಿದ ಸುರೇಶಬಾಬು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆ ಭೂಮಿಪೂಜೆ ಮಾಡಿದ್ದರು. ಆದರೂ ಕಾಂಗ್ರೆಸ್ ಶಾಸಕ ಗಣೇಶ್ ಮತ್ತೆ ಪೂಜೆ ಮಾಡಿದ್ದಾರೆ ಎಂದು ಕಿಡಿಕಾರಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications