'ಮುತ್ತಿನ ಗಂಟಿನ' ಬಗ್ಗೆ ಮೈಲಾರ ಕಾರ್ಣಿಕ ಭವಿಷ್ಯ
ಹೂವಿನ ಹಡಗಲಿ(ಬಳ್ಳಾರಿ), ಫೆ.6: ರಾಜ್ಯ ಮತ್ತು ರಾಷ್ಟ್ರದ ಬೆಳೆ, ಜನಜೀವನ, ರಾಜಕೀಯ ಸ್ಥಿತಿಗತಿಗಳ ಮುನ್ನೋಟವನ್ನೇ ಬಿಂಬಿಸುವ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರನ 115ನೇ ಕಾರ್ಣಿಕೋತ್ಸವ ಗುರುವಾರ ನಡೆಯಿತು.
ಸುಕ್ಷೇತ್ರ ಡೆಂಕನಮರಡಿಯಲ್ಲಿ ಕಾರ್ಣಿಕದ ಗೊರವಯ್ಯ ಮಂಜಪ್ಪ, ಕಾರ್ಣಿಕ ನುಡಿಯಲೆಂದೇ 11 ದಿನಗಳ ಕಠಿಣ ಉಪವಾಸ ವ್ರತ ಆಚರಿಸಿದರು. ವಂಶಪಾರಂಪರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಕುದುರೆ ಏರಿ ಬಂದು ಒಂದು ಸುತ್ತು ಪ್ರದಕ್ಷಿಣೆ ಹಾಕಿ, ಕಾರ್ಣಿಕ ನುಡಿಯುವ ಗೊರವಯ್ಯ ಅವರಿಗೆ ಆಶೀರ್ವದಿಸಿದರು.
ಮುಸ್ಸಂಜೆ ವೇಳೆಗೆ ತುಪ್ಪ ಹಚ್ಚಿದ 20 ಅಡಿಯ ಬಿಲ್ಲು ಏರಿದರು. ಲಕ್ಷಾಂತರ ಭಕ್ತರು ಹಾಗೂ ದಶ ದಶದಿಕ್ಕುಗಳತ್ತ ದಷ್ಟಿ ಹಾಯಿಸಿದ ಗೊರವಯ್ಯ ಒಂದು ಬಾರಿ, ''ಸದ್ದಲೇ...'' ಎಂದರು. ಸುತ್ತ ನಿಶಬ್ದ ಮನೆ ಮಾಡಿತು. ''ಮುತ್ತಿನ ಗಂಟು ಮೂರಾದಿತಲೆ ಪರಾಕ್'' ಎಂದು ಕಾರ್ಣಿಕ ನುಡಿದ ಗೊರವಯ್ಯ ಕೆಳಗೆ ಬಿದ್ದರು. ನಂತರ ಏನಿದ್ದರೂ ಕಾರ್ಣಿಕ ನುಡಿದ ಭವಿಷ್ಯ ಅರ್ಥ ಹುಡುಕುವುದೇ ನೆರೆದಿದ್ದವರ ಕೆಲಸವಾಯಿತು.. ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವದ ಚಿತ್ರಗಳು ನಿಮ್ಮ ಮುಂದೆ...

ಮೈಲಾರಕ್ಕೆ ಲಕ್ಷಾಂತರ ಮಂದಿ ಭಕ್ತರ ಆಗಮನ
ಜಿಲ್ಲಾ ಮಟ್ಟದ ಅಧಿಕಾರಿಗಳು, 10 ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು, ಬಳ್ಳಾರಿ, ಗದಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಸೇರಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಜನಪ್ರತಿನಿಧಿಗಳು ಈ ಹೇಳಿಕೆಯನ್ನು ಅತ್ಯಂತ ಶ್ರದ್ಧೆ, ಭಕ್ತಿಯಿಂದ ಆಲಿಸುತ್ತಾರೆ. ಈ ಹೇಳಿಕೆ ಹೇಳುವ ಪೂರ್ವದಲ್ಲಿ ವ್ರತಧಾರಿ ಗೊರವಯ್ಯ ಬಿಲ್ಲನ್ನೇರಿ ಸದ್ದಲೇ...' ಎಂದಾಗ ಇಡೀ ಸಮೂಹದಲ್ಲಿ ಮೌನ ಆವರಿಸುತ್ತದೆ.ಧಾರ್ಮಿಕ ವಿಶ್ಲೇಷಕರು ಈ ಹೇಳಿಕೆಗಳನ್ನು ತಮ್ಮದೇ ಆದ ರೀತಿ - ನೀತಿಗಳಲ್ಲಿ ವಿಶ್ಲೇಷಿಸುತ್ತಾರೆ.

ಕಾರಣಿಕ ಭವಿಷ್ಯದ ಅರ್ಥವಾದರೂ ಏನು?
ನಾಡಿನ ಭವಿಷ್ಯವಾಣಿಯಾದ ಕಾರ್ಣಿಕ, ಈ ಬಾರಿ ಅಶುಭವಾಗಿದೆ. ರಾಜಕೀಯ, ಸಾಮಾಜಿಕ ಹಾಗೂ ಇತರ ಕ್ಷೇತ್ರಗಳ ಮೇಲೆ ಗಂಭೀರ ಪರಿಣಾಮ ಬೀರುವ ವಿಶ್ಲೇಷಣೆಗಳು, ವಿಶೇಷ ಅರ್ಥಗಳು ಕೇಳುತ್ತಿದ್ದು, ಪರಸ್ಪರ ಚರ್ಚೆಗಳಿಗೆ ಕಾರಣವಾಗಿದೆ.
ವ್ಯಾಪಾರದಲ್ಲಿ ಲಾಭ ನಷ್ಟ ಏರುಪೇರು, ರೈತರು ಈ ಬಾರಿ ಸಾಧಾರಣ ಮಳೆ, ರಾಜಕೀಯವಾಗಿ ಪಕ್ಷ ಒಡೆಯುವ ಸಂಭವ ಹೀಗೆ ಚರ್ಚೆಗಳು ಅರ್ಥಗಳು ನಡೆದಿವೆ.

ಗಣ್ಯಾತಿಗಣ್ಯರ ಆಗಮನ, ಗೊರವಯ್ಯನಿಗೆ ನಮನ
ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಜಿ.ಎಸ್.ಗಡ್ಡದ್ದೇವರಮಠ, ಕಾಗಿನೆಲೆ ಪೀಠದ ನಿರಂಜಾನಾನಂದ ಪುರಿ ಸ್ವಾಮೀಜಿ, ಲಿಂಗನಾಯಕನಹಳ್ಳಿ ಚನ್ನವೀರ ಸ್ವಾಮೀಜಿ, ಜಿ.ಪಂ. ಸದಸ್ಯರಾದ ಜಿ.ವಸಂತ, ಶೋಭಾ ಬೆಂಡಿಗೆರೆ,ಈಶಾನ್ಯ ವಲಯದ (ಕಲಬುರಗಿ) ಐಜಿಪಿ ಸುನಿಲ್ ಅಗರವಾಲ್, ಜಿಲ್ಲಾಧಿಕಾರಿ ಸಮೀರ್ ಶುಕ್ಲ, ಎಸ್ಪಿ ಚೇತನ್ಸಿಂಗ್ ರಾಠೋಡ್, ಎಎಸ್ಪಿ ವಿಜಯ ಡಂಬಳ, ತಹಸೀಲ್ದಾರ್ ಕೆ.ವಿಜಯಕುಮಾರ, ಡಿವೈಎಸ್ಪಿ ಆರ್.ಎಸ್.ಪಾಟೀಲ್, ತಾಲೂಕು ಪಂಚಾಯಿತಿ ಅಧ್ಯಕ್ಷ ಐಗೋಳ ಚಿದಾನಂದ, ಪುರಸಭೆ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಎಸ್ಪಿಬಿ ಮಹೇಶ, ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಸುತಗುಂಡಿ ಇತರರಿದ್ದರು.

ಮೈಲಾರ ಲಿಂಗ ಕ್ಷೇತ್ರ ತಲುಪುವುದು ಹೇಗೆ?
ಬಳ್ಳಾರಿ ಜಿಲ್ಲೆ ಹಡಗಲಿಗೆ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಸ್ ಸೌಕರ್ಯವಿದೆ. ಹಡಗಲಿಯಿಂದ ಈ ಕ್ಷೇತ್ರಕ್ಕೆ 40 ಕಿ.ಮೀ ಹಾಗೂ ರಾಣೆ ಬೆನ್ನೂರಿನಿಂಡ 34 ಕಿ.ಮೀ ಆಗುತ್ತದೆ.
ಗೊರವ ಸಮುದಾಯದ ಅಧಿದೇವತೆ ಪರಮ ಶಿವನನ್ನು ಇಲ್ಲಿ ಮೈಲಾರ ಲಿಂಗರೂಪಿಯಾಗಿ ಪೂಜಿಸಲಾಗುತ್ತದೆ. ಕಂಬಳಿ ಹೊದ್ದು, ಢಮರುಗ ಹಿಡಿದು ಹಣೆಯಲ್ಲಿ ಭಂಡಾರ ತೊಟ್ಟು ಮೈಲಾರಿ ವೇಷಧಾರಿಯಾಗಿ ಶಿವನನ್ನು ಪೂಜಿಸಲಾಗುತ್ತದೆ. ಮಲ್ಲಾಸುರ, ಮಣಿಕಾಸುರನನ್ನು ಮೈಲಾರ ರೂಪದಲ್ಲಿ ಅವತರಿಸಿದ ಶಿವ ಕೊಂದು ಹಾಕಿದ್ದು ಪೌರಣಿಕ ಕಥೆಗಳಲ್ಲಿ ಓದಬಹುದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications