"ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೇ ಪರಾಕ್'! ಕಾರಣಿಕ ಭವಿಷ್ಯ ಹೀಗಿದೆ
Recommended Video
ಬಳ್ಳಾರಿ, ಫೆಬ್ರವರಿ 11: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕ ಫೆಬ್ರವರಿ 11ರಂದು ಹೊರಬಿದ್ದಿದ್ದು, "ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ ನುಡಿದಿದ್ದಾನೆ.
ಈಶ್ವರನೇ ಗೊರವಪ್ಪನ ರೂಪದಲ್ಲಿ ದೈವವಾಣಿ ನುಡಿಯುತ್ತಾನೆಂದೇ ಈ ಭಾಗದಲ್ಲಿ ನಂಬಲಾಗುವ ಈ ಕಾರ್ಣಿಕದ ನಿಜವಾದ ಅರ್ಥ ಏನೇ ಇರಲಿ, ಭಕ್ತರು ತಮಗೆ ಬೇಕಾದ ಹಾಗೇ ಅರ್ಥೈಸಿಕೊಳ್ಳುತ್ತಿರುವುದಕ್ಕೂ ದಶಕಗಳ ಇತಿಹಾಸವಿದೆ. ಮುಂದೆ ಓದಿ..
ಈ ಬಾರಿಯ ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಿರುವ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್, ರಾಜ್ಯದಲ್ಲಿ ಸಮೃದ್ಧವಾದ ಮಳೆ, ಬೆಳೆಯಾಗಲಿದ್ದು, ಜನ ನೆಮ್ಮದಿ, ಸಹಬಾಳ್ವೆಯಿಂದ ಬದುಕುತ್ತಾರೆ ಎಂದು ಅರ್ಥೈಸಬಹುದಾಗಿದೆ. ರಾಜಕೀಯವಾಗಿಯೂ ಎಲ್ಲ ಗೊಂದಲಗಳು ಮುಗಿದಿದ್ದು, ಸರ್ಕಾರ ಸುಸ್ಥಿರವಾಗಿ ಇರುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಸದ್ಯ ಅಧಿಕಾರ ನಡೆಸುವ ಪಕ್ಷಗಳಿಗೆ ವಿಘ್ನ ಇಲ್ಲ ಎಂದು ವಿಶ್ಲೇಸಿದ್ದಾರೆ.

ಮೈಲಾರಲಿಂಗೇಶ್ವರನಿಗೆ ನೈವೇದ್ಯ
ಕಾರ್ಣಿಕೋತ್ಸವಕ್ಕೆ ರಾಣೇಬೆನ್ನೂರು, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಮೂಲೆಗಳಿಂದ ಸಾಗರೋಪಾದಿಯಲ್ಲಿ ಭಕ್ತರು ಕಾರ್ಣಿಕ ಕೇಳಲು ಜಮಾಯಿಸಿದ್ದರು.
ಸುಕ್ಷೇತ್ರದ ದೇಗುಲ ಆವರಣ ಮತ್ತು ಡೆಂಕನಮರಡಿಯಲ್ಲಿ ಹರಕೆ ಹೊತ್ತ ಲಕ್ಷಾಂತರ ಭಕ್ತರು ವಿಶೇಷವಾಗಿ ಹಾಲು, ಬಾಳೆಹಣ್ಣು, ತುಪ್ಪ, ಹೋಳಿಗೆಯನ್ನು ಮೈಲಾರ ಲಿಂಗೇಶ್ವರನಿಗೆ ನೈವೇದ್ಯ ಮಾಡಿದರು.

ಗೊರವಯ್ಯ ನುಡಿಯುವ ಭವಿಷ್ಯ
ಗೊರವಯ್ಯ ನುಡಿಯುವ ಭವಿಷ್ಯ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ನೈಋತ್ಯಕ್ಕಿರುವ ಮೈಲಾರ ಲಿಂಗೇಶ್ವರ ದೇವಾಲಯಕ್ಕೆ ಶತ ಶತಮಾನಗಳ ಇತಿಹಾಸವಿದೆ. ತುಂಗಭದ್ರಾ ನದಿ ತಟದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಈ ದೇವಾಲಯದಲ್ಲಿ ಶಿವನನ್ನು ಆರಾಧಿಸಲಾಗುತ್ತದೆ. ಕುರುಬ ಗೌಡ ಸಮುದಾಯದರು ಆರಾಧಿಸುವ ಈ ಶಿವನ ಸನ್ನಿಧಿಯಲ್ಲಿ ನಡೆಯುವ ವಾರ್ಷಿಕ ಕಾರ್ಣಿಕೋತ್ಸವ ಜಗತ್ಪ್ರಸಿದ್ದ. ಹಾಗೇ, ಒಂದೇ ವಾಕ್ಯದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೂಡಾ ಅಷ್ಟೇ ಹೆಸರುವಾಸಿ.

ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ
ಭವಿಷ್ಯವಾಣಿ ನುಡಿಯುವ ಕಾರ್ಣಿಕೋತ್ಸವದ ಮೊದಲು ಗೊರವಯ್ಯ ಒಂಬತ್ತು ದಿನಗಳ ಕಟ್ಟುನಿಟ್ಟಿನ ಉಪವಾಸ, ಜಪ, ತಪದಲ್ಲಿರುತ್ತಾನೆ. ತದನಂತರ ಕ್ಷೇತ್ರದ ಧರ್ಮದರ್ಶಿ ಯವರೊಂದಿಗೆ ಮತ್ತು ವಿಜಯನಗರದ ಅರಸರು ಅರ್ಪಿಸಿದ್ದ ಮೂರ್ತಿಯೊಂದಿಗೆ ಕುದುರೆ ಏರಿ ಡಂಕನಮರಡಿ ಎನ್ನುವ ಸ್ಥಳಕ್ಕೆ ಬರುತ್ತಾರೆ. ಅಲ್ಲಿ ಧರ್ಮದರ್ಶಿಗಳಿಂದ ಬಂಡಾರದ ಆಶೀರ್ವಾದ ಪಡೆದು ಕ್ಷೇತ್ರದ ಪರಂಪರೆಯಂತೆ 15 ಅಡಿ ಎತ್ತರದ ಬಿಲ್ಲುಗಂಬವನ್ನು ಸರ ಸರನೇರಿ, ಆಕಾಶವನ್ನು ನೋಡುತ್ತಾ ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ.

ಮೈಲಾರ ಲಿಂಗ ಕ್ಷೇತ್ರ ತಲುಪುವುದು ಹೇಗೆ?
ಬಳ್ಳಾರಿ ಜಿಲ್ಲೆ ಹಡಗಲಿಗೆ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಸ್ ಸೌಕರ್ಯವಿದೆ. ಹಡಗಲಿಯಿಂದ ಈ ಕ್ಷೇತ್ರಕ್ಕೆ 40 ಕಿ.ಮೀ ಹಾಗೂ ರಾಣೆ ಬೆನ್ನೂರಿನಿಂಡ 34 ಕಿ.ಮೀ ಆಗುತ್ತದೆ. ಗೊರವ ಸಮುದಾಯದ ಅಧಿದೇವತೆ ಪರಮ ಶಿವನನ್ನು ಇಲ್ಲಿ ಮೈಲಾರ ಲಿಂಗರೂಪಿಯಾಗಿ ಪೂಜಿಸಲಾಗುತ್ತದೆ. ಕಂಬಳಿ ಹೊದ್ದು, ಢಮರುಗ ಹಿಡಿದು ಹಣೆಯಲ್ಲಿ ಭಂಡಾರ ತೊಟ್ಟು ಮೈಲಾರಿ ವೇಷಧಾರಿಯಾಗಿ ಶಿವನನ್ನು ಪೂಜಿಸಲಾಗುತ್ತದೆ. ಮಲ್ಲಾಸುರ, ಮಣಿಕಾಸುರನನ್ನು ಮೈಲಾರ ರೂಪದಲ್ಲಿ ಅವತರಿಸಿದ ಶಿವ ಕೊಂದು ಹಾಕಿದ್ದು ಪೌರಣಿಕ ಕಥೆಗಳಲ್ಲಿ ಓದಬಹುದು.
-
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications