ಈ ಬಾರಿಯ ಹಂಪಿ ಉತ್ಸವ ಆಚರಣೆಗೆ ನೀತಿ ಸಂಹಿತೆ ಅಡ್ಡಿ?
ಬಳ್ಳಾರಿ, ಅಕ್ಟೋಬರ್ 10 : ವಿಜಯನಗರದ ವೈಭವ ಸಾರುವ ಹಂಪಿ ಉತ್ಸವ ಆಚರಣೆ ಕುರಿತು ಈ ವರ್ಷವೂ ಚರ್ಚೆಗಳು ಆರಂಭವಾಗಿವೆ. ನವೆಂಬರ್ನಲ್ಲಿ ನಡೆಯಬೇಕಿದ್ದ ಉತ್ಸವ ಈ ಬಾರಿ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ಉಪ ಮುಖ್ಯಮಂತ್ರಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ನವೆಂಬರ್ನಲ್ಲಿ ಹಂಪಿ ಉತ್ಸವ ನಡೆಸುವುದಾಗಿ ಹೇಳಿದ್ದರು. ಆದರೆ, ಉಪ ಚುನಾವಣೆಯ ಕಾರಣ ಉತ್ಸವದ ದಿನಾಂಕ ಬದಲಾಗಲಿದೆ ಎಂಬ ಚರ್ಚೆ ಆರಂಭವಾಗಿದೆ.
ವಿಜಯನಗರ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಕ್ಷೇತ್ರಕ್ಕೆ ಡಿಸೆಂಬರ್ 5ರಂದು ಉಪ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ನವೆಂಬರ್ 11ರಿಂದ ನೀತಿ ಸಂಹಿತೆ ಜಾರಿಗೆ ಬರುವುದರಿಂದ ಹಂಪಿ ಉತ್ಸವ ಡಿಸೆಂಬರ್ನಲ್ಲಿ ನಡೆಯಬಹುದು ಎಂಬುದು ಲೆಕ್ಕಾಚಾರವಾಗಿದೆ.

"ನವೆಂಬರ್ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಆದ್ದರಿಂದ ಹಂಪಿ ಉತ್ಸವ ನಡೆಸುವುದು ಕಷ್ಟ. ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಉತ್ಸವ ನಡೆಸಬಹುದು" ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಹೇಳಿದ್ದಾರೆ.
ಬಳ್ಳಾರಿ ಬಿಜೆಪಿ ಸಂಸದ ವೈ. ದೇವೇಂದ್ರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, "ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ಹಂಪಿ ಉತ್ಸವ ನಡೆಸಲು ಮನವಿ ಮಾಡುತ್ತೇನೆ" ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಹಂಪಿ ಉತ್ಸವ ಆಚರಣೆ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಬರದ ಹಿನ್ನಲೆಯಲ್ಲಿ ಉತ್ಸವ ಆಚರಣೆ ಬೇಡ ಎಂದು ಹೇಳಿದ್ದರು. ಆಗ ಪ್ರತಿಭಟನೆಗಳು ನಡೆದಿದ್ದವು. ಅಂತಿಮವಾಗಿ ಸರ್ಕಾರ ಮಾರ್ಚ್ ತಿಂಗಳಿನಲ್ಲಿ ಸರಳವಾಗಿ ಹಂಪಿ ಉತ್ಸವ ಆಚರಣೆ ಮಾಡಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಬಳ್ಳಾರಿ ಪ್ರಕರಣ: ಮಕ್ಕಳ ಬಾಲ್ಯ ಅತ್ಯಂತ ಸೂಕ್ಷ್ಮವಾದದ್ದು ಕೀಟಲೆ, ಏಕಾಂಗಿತನದ ಬಗ್ಗೆ ಇರಲಿ ಎಚ್ಚರ: ವಸುಧೇಂದ್ರ ಬರಹ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications