ಬಿ.ಶ್ರೀರಾಮುಲು ವಿರುದ್ಧ ಜಾಮೀನು ರಹಿತ ವಾರೆಂಟ್
ಬೆಂಗಳೂರು, ಮಾರ್ಚ್ 04 : ಬಿಜೆಪಿ ಮುಖಂಡ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿಯಾಗಿರುವ ಶ್ರೀರಾಮುಲು ಅವರು ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದರಿಂದ ವಾರೆಂಟ್ ಜಾರಿಯಾಗಿದೆ.
ಬೆಂಗಳೂರಿನ
13ನೇ
ಎಸಿಎಂಎಂ
ನ್ಯಾಯಾಲಯ
ಶುಕ್ರವಾರ
ಶ್ರೀರಾಮುಲು
ಅವರ
ವಿರುದ್ಧ
ಬಂಧನದ
ವಾರೆಂಟ್
ಹೊರಡಿಸಿದೆ.
ಮಾರ್ಚ್
22ರಂದು
ಶ್ರೀರಾಮುಲು
ಅವರನ್ನು
ಕೋರ್ಟ್ಗೆ
ಹಾಜರುಪಡಿಸಿ
ಎಂದು
ನ್ಯಾಯಾಧೀಶೆ
ಸಿ.ಜೆ.ವಿಶಾಲಾಕ್ಷಿ
ಅವರು
ಪೊಲೀಸರಿಗೆ
ಆದೇಶಿಸಿದ್ದಾರೆ.
[ಶ್ರೀರಾಮುಲು
ವಿರುದ್ಧ
ಸರ್ಚ್
ವಾರೆಂಟ್]
ಎಲ್.ಸೋಮಣ್ಣ ಎಂಬುವವರು 2014ರಲ್ಲಿ ಶ್ರೀರಾಮುಲು ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಶ್ರೀರಾಮುಲು ಅವರು ನಿರಂತರವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. [ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಜೈ ಎಂದ ಮತದಾರ]
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪರಮಾಪ್ತರಾದ ಬಿ.ಶ್ರೀರಾಮುಲು ಅವರು ಬಿಜೆಪಿ ತೊರೆದು ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪನೆ ಮಾಡಿದ್ದರು. 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪುನಃ ಬಿಜೆಪಿ ಸೇರಿದ್ದರು. ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 85,144 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.