ಯಾರ ಪರವಾಗಿಯೂ ಸಹಿ ಮಾಡಿಲ್ಲ; ಕರುಣಾಕರ ರೆಡ್ಡಿ
ವಿಜಯನಗರ, ಜೂನ್ 10; "ನಾನು ಯಾರ ಪರವಾಗಿಯೂ ಸಹಿ ಮಾಡಿಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ. ನಮ್ಮ ನಾಯಕರು ಸಿಎಂ ಯಡಿಯೂರಪ್ಪನವರೇ" ಎಂದು ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.
ಬಳ್ಳಾರಿಯಲ್ಲಿ ಶಾಸಕರ ಮಾಧ್ಯಮಗಳ ಜೊತೆ ಮಾತನಾಡಿದರು. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಸಬೇಕೆಂಬ ಪ್ರಯತ್ನಕ್ಕೆ ಸ್ವ ಪಕ್ಷದವರಿಂದಲೇ ಅಪಸ್ವರ ಕೇಳಿ ಬರುತ್ತಿದೆ. ಕೆಲ ಶಾಸಕರು ಸಿಎಂ ಹುದ್ದೆಯಿಂದ ಕಳಗೆ ಇಳಿಸುವುದಕ್ಕೆ ಸಹಿ ಮಾಡಿದ್ದಾರೆ ಎಂಬ ಮಾತುಗಳು ಹಬ್ಬಿವೆ.
ಈ ಕುರಿತು ಮಾತನಾಡಿದ ಶಾಸಕರು, "ಯಾರ ಪರವಾಗಿ ನಾನು ಸಹಿ ಮಾಡಿಲ್ಲ ಅದು ನನಗೆ ಗೊತ್ತಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.

"ಯಡಿಯೂರಪ್ಪನವರೇ ನಮ್ಮ ನಾಯಕರು ಯಾವುದೇ ಅನುಮಾನ ಬೇಡ. ಬಿಜೆಪಿ ಪಕ್ಷದಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅದರ ಬಗ್ಗೆ ನಮ್ಮದು ಯಾವುದೇ ತಕರಾರು ಇಲ್ಲ" ಎಂದರು.
"ಯಡಿಯೂರಪ್ಪನವರೇ ಸ್ವತಃ ಹೇಳಿದ್ದಾರೆ. ಹೈ ಕಮಾಂಡ್ ಎಲ್ಲಿಯವರೆಗೆ ಸಿಎಂ ಆಗಿರೋಕೆ ಅವಕಾಶ ನಿಡುತ್ತದೆಯೋ ಅಲ್ಲಿಯವರೆಗೆ ಇರ್ತನೆ ಎಂದು. ಅವರೇ ಹೀಗೆ ಹೇಳಿದ ಮೇಲೆ ಬೇರೆ ರೀತಿಯ ಚರ್ಚೆ ಮಾಡುವ ಅಗತ್ಯವಿಲ್ಲ" ಎಂದು ಹೇಳಿದರು.
"ಪಕ್ಷದ ಮುಂದೆ ಎಲ್ಲರು ಒಂದೇ. ಯಾರು ದೊಡ್ಡವರಲ್ಲ, ನನ್ನನ್ನು ಒಳಗೊಂಡಂತೆ ಹೈ ಕಮಾಂಡ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಪಕ್ಷದ ಪರವಾಗಿ ಇಂದು ಇರುತ್ತೇನೆ ಮತ್ತು ಮುಂದೆಯೂ ಇರುತ್ತೇನೆ" ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications