ಬಳ್ಳಾರಿಯಲ್ಲಿ ರೆಡ್ಡಿ ಮಾಸ್ಟರ್ ಪ್ಲಾನ್, ಒಂದೇ ಕಲ್ಲಿಗೆ ಮೂರು ಹಕ್ಕಿ
Recommended Video

ಬಳ್ಳಾರಿ, ಏಪ್ರಿಲ್ 16: ಕಾಂಗ್ರೆಸ್ನ ನಿಷ್ಠಾವಂತ ಮತ್ತು ಮಾಜಿ ಸಂಸದ, ನಿವೃತ್ತ ನ್ಯಾಯಾಧೀಶ ಎನ್.ವೈ. ಗೋಪಾಲಕೃಷ್ಣ ಕುಟುಂಬದ ಎಲ್ಲಾ ಸದಸ್ಯರು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿ, ಕೂಡ್ಲಿಗಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾರೆ. ಮೊಳಕಾಲ್ಮೂರು ಮೂಲದ ಗೋಪಾಲಕೃಷ್ಣ 2014 ಉಪಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಕಾಂಗ್ರೆಸ್ ಅವರಿಗೆ ಎರಡೂ ಕಡೆಗಳಲ್ಲಿ ಟಿಕೆಟ್ ನೀಡಿರಲಿಲ್ಲ.
ಬೆಂಗಳೂರಿನಲ್ಲಿ ಸೋಮವಾರ ಇಡೀ ದಿನ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಜಿ. ಜನಾರ್ಧನ ರೆಡ್ಡಿ ಸಮ್ಮುಖದಲ್ಲಿ ವಿವಿಧ ಹಂತದ ಚರ್ಚೆಗಳು ನಡೆದಿದ್ದು, ಎನ್.ವೈ. ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು. ತಮಗೆ ಕ್ಷೇತ್ರ ಇಲ್ಲದಂತೆ ಮಾಡಿರುವ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸಲು ಅವರು ನಿರ್ಧಾರ ತೆಗೆದುಕೊಂಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಎನ್.ವೈ. ಕುಟುಂಬದ ಸದಸ್ಯರು ಬಿಜೆಪಿ ಸೇರಿದಲ್ಲಿ ಮೊಳಕಾಲ್ಮೂರು ಮತ್ತು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರ ಮತಗಳನ್ನು ಬಿಜೆಪಿ ಅಭ್ಯರ್ಥಿಗಳಿಗೆ ಹಾಕಿಸಬೇಕು. ಕೂಡ್ಲಿಗಿ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು. ಬಿ. ಶ್ರೀರಾಮುಲು, ಸಣ್ಣ ಫಕ್ಕೀರಪ್ಪ ಮತ್ತು ಎನ್.ವೈ. ಗೋಪಾಲಕೃಷ್ಣ ಗೆಲುವು ಸಾಧಿಸಬೇಕು ಎನ್ನುವುದು ಲೆಕ್ಕಾಚಾರವಾಗಿದೆ.
ಒಂದು ಹಂತದಲ್ಲಿ ಎಸ್. ತಿಪ್ಪೇಸ್ವಾಮಿ (ಮೊಳಕಾಲ್ಮೂರು ಟಿಕೆಟ್ ವಂಚಿತ ಬಿಜೆಪಿ ಹಾಲಿ ಶಾಸಕ)ಯನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಇದೇ ವೇಳೆಗೆ ಬಿಜೆಪಿಗೆ ಎನ್.ವೈ. ಗೋಪಾಲಕೃಷ್ಣ ಅವರನ್ನು ಕರೆಯಿಸಿಕೊಂಡು, ಪುನಃ ರಾಜಕೀಯ ಪುನರುಜ್ಜೀವನ ನೀಡಲು ನಿರ್ಧರಿಸಿರುವುದು ಡಿಕೆಶಿ ಏಟಿಗೆ ರೆಡ್ಡಿ ತಿರುಗೇಟು ನೀಡಿದಂತೆ ಆಗಿದೆ.
ಟಿಕೆಟ್ ಇಲ್ಲದೆ ಮೂಲೆ ಗುಂಪಾಗುತ್ತಿದ್ದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಕೂಡ್ಲಿಗಿಯಿಂದ ಕಣಕ್ಕಿಳಿಸಿ, ಮೊಳಕಾಲ್ಮೂರು ಮತ್ತು ಬಳ್ಳಾರಿ ಗ್ರಾಮೀಣದ ಮೇಲೆ ಜಿ. ಜನಾರ್ದನ ರೆಡ್ಡಿ ಕಣ್ಣಿಟ್ಟಿದ್ದಾರೆ. ಶ್ರೀರಾಮುಲು, ರೆಡ್ಡಿ ಮತ್ತು ಬಿಜೆಪಿಯ ಈ ಲೆಕ್ಕಾಚಾರ ಬಹುತೇಕ ಯಶಸ್ಸನ್ನು ಸಾಧಿಸುವ ಸಾಧ್ಯತೆಗಳಿವೆ. ಹೀಗೆ ಒಂದೇ ಏಟಿಗೆ ಮೂರು ಹಕ್ಕಿ ಹೊಡೆಯಲು ರೆಡ್ಡಿ ಹೊರಟಿದ್ದಾರೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications