ಬಳ್ಳಾರಿಯಲ್ಲಿ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ: ಐವರ ವಿರುದ್ಧ ಎಫ್ಐಆರ್
ಬಳ್ಳಾರಿ, ಅಕ್ಟೋಬರ್ 12: ವೈದ್ಯಕೀಯ ಪದವಿ ಪಡೆಯದ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ಬಳ್ಳಾರಿ ತಾಲೂಕು ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, ಐದು ಕ್ಲಿನಿಕ್ಗಳನ್ನು ಸೀಜ್ ಮಾಡಿ ಎಫ್ಐಆರ್ ದಾಖಲು ಮಾಡಿದ್ದಾರೆ.
ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ-2007ರ ಅಡಿಯಲ್ಲಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿ ಅನುಮತಿ ಪಡೆದುಕೊಂಡು ಕಾರ್ಯ ಆರಂಭ ಮಾಡಬೇಕು. ಒಂದು ವೇಳೆ ಅನುಮತಿ ಪಡೆಯದೆ ಆರಂಭಿಸಿದರೆ ತಕ್ಷಣ ಸ್ಥಗಿತಗೊಳಿಸಿ ಅನುಮತಿ ಪಡೆಯಬೇಕು. ಅದರಲ್ಲೂ ವೈದ್ಯರು ಅಲ್ಲದವರು ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಕಾನೂನು ರೀತಿಯಲ್ಲಿ ಎಫ್ಐಅರ್ ದಾಖಲಿಸಲಾಗುವುದು ಎಂದು ಬಳ್ಳಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನ ಕುಮಾರಿ ತಿಳಿಸಿದರು.

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ ಯಾವುದೇ ಕ್ಲಿನಿಕ್ ಹೆಸರಿನ ಬೋರ್ಡ್ಗಳಿಲ್ಲ 04 ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ಮಾಡಿ, ಸೀಜ್ ಮಾಡಲಾಗಿದ್ದು, ನಕಲಿ ವೈದ್ಯರಾದ ಕರೀಮ್, ಗೋವಿಂದ್, ಜಾವೀದ್, ಶಬಾನಾ ವಿರುದ್ದ, ಕೌಲ್ ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವೈದ್ಯ ವೃತ್ತಿ ಮಾಡುವವರಿಗೆ ಬಾಡಿಗೆ ಕೊಡುವಾಗ ಅಂಗಡಿಗಳ ಮಾಲಿಕರು ಸದರಿಯವರ ಮಾಹಿತಿ ಪಡೆದು ಬಾಡಿಗೆ ನೀಡಬೇಕು. ಇಲ್ಲಿ ಮಾಲೀಕರ ಲೋಪವು ಇದೆ ಎಂದು ತಿಳಿಸಿದರು. ವೈದ್ಯ ಪದವಿ ಪಡೆಯದವರು ಗೊತ್ತಿಲ್ಲದ ಔಷಧಿಗಳನ್ನು ಜನತೆಗೆ ನೀಡುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದು. ಅದರಲ್ಲೂ ಜೀವದ ಪ್ರಶ್ನೆ ಇರುವ ಆರೋಗ್ಯ ಸೇವೆಗಳನ್ನು ನೀಡುವಾಗ ಅಧಿಕೃತವಾಗಿ ನೋಂದಣೆ ಮಾಡಿಸಬೇಕು.

ನೊಂದಣಿ ಮಾಡಿಸದೆ ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಅಂತವರ ವಿರುದ್ದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ-2007 ಅಡಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕೆಪಿಎಂಎ ತಂಡದ ಅರುಣ್ ಕುಮಾರ್ ಮತ್ತು ಗೋಪಾಲ್ ಹೆಚ್ ಕೆ.ಕೌಲ್ ಬಜಾರ್ ಪೊಲೀಸ್ ಸ್ಟೇಷನ್ ಸಿಬ್ಬಂದಿ ಕೂಡ ಸಾಥ್ ನೀಡಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications