ಅಕ್ರಮ ಗಣಿಗಾರಿಕೆ: ಗಾಲಿ ರೆಡ್ಡಿ ಆಪ್ತ ಶ್ರೀನಿವಾಸ ರೆಡ್ಡಿ ಬಂಧನ
ಬಳ್ಳಾರಿ, ಅಕ್ಟೋಬರ್ 03: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಒಎಂಸಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರನ್ನು ವಿಶೇಷ ತನಿಖಾ ದಳ (ಎಸ್ ಐಟಿ) ಬಂಧಿಸಿದೆ.
ಮಾಜಿ ಸಚಿವ ಜರ್ನಾರ್ದನ ರೆಡ್ಡಿ ಅವರ ಆಪ್ತ, ಸಂಬಂಧಿ ಬಿ.ವಿ. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರಿನ ಸಂರಕ್ಷಿತ ಅರಣ್ಯ ಪ್ರದೇಶ ಸಿದ್ದಾಪುರದಲ್ಲಿ ಶೇಖ್ಸಾಬ್ ಎಂಬುವವರಿಗೆ ಸೇರಿದ ಗಣಿಯನ್ನು ಶ್ರೀನಿವಾಸ ರೆಡ್ಡಿ ಅವರು ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದರು.
ಶೇಖ್ಸಾಬ್ ಎಂಬುವರಿಗೆ ಸೇರಿದ ಭೂಮಿಯನ್ನು ಒಎಂಸಿ ಸಂಸ್ಥೆ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದರು. ಶೇಖ್ಸಾಬ್ ಸಂಬಂಧಿ ಅಲಿಖಾನ್(ಗಾಲಿ ರೆಡ್ಡಿ ಆಪ್ತ) ನೊಂದಿಗೆ ಶ್ರೀನಿವಾಸ್ ರೆಡ್ಡಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು ಎಂಬ ಆರೋಪವಿದೆ. ಓಎಂಸಿ, ಎಎಂಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದಿನ ಚಂಚಲಗುಡ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಾಲಿ ಜನಾರ್ದನ ರೆಡ್ಡಿ ಶಿಕ್ಷೆ ಅನುಭವಿಸಿದ್ದಾರೆ. ಈ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಮುಂದಿದೆ...

ಗಾಲಿ ರೆಡ್ಡಿಯನ್ನು ಬಿಡದೆ ಕಾಡುತ್ತಿರುವ ಒಎಂಸಿ
ಓಬಳಾಪುರಂ ಗಣಿ ಸಂಸ್ಥೆ(ಓಎಂಸಿ) ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿತ್ತು. ಈ ಹಿಂದೆ ಓಎಂಸಿ ಪ್ರಕರಣದಲ್ಲಿ ಗಾಲಿ ರೆಡ್ಡಿ ಪಡೆದಿದ್ದ ಜಾಮೀನನ್ನು ನಾಂಪಲ್ಲಿ ಸಿಬಿಐ ಕೋರ್ಟ್ ಆದೇಶ ನೀಡಿತ್ತು. ಒಟ್ಟಾರೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದರೂ ಚಂಚಲಗುಡ ಜೈಲು ಬಾಗಿಲು ರೆಡ್ಡಿಗಾಗಿ ಸದಾ ತೆರೆದಿರುತ್ತದೆ. ಜಾಮೀನು ಪಡೆದರೂ ಜೈಲಿನಲ್ಲೇ ಉಳಿಯಬೇಕಾದ ಪರಿಸ್ಥಿತಿ ರೆಡ್ಡಿ ಅವರದ್ದಾಗಿತ್ತು. ನಂತರ ಜಾಮೀನು ಸಿಕ್ಕರೂ ಅನೇಕ ಷರತ್ತುಗಳಿಂದ ರೆಡ್ಡಿ ಆವರಿಗೆ ನಿರ್ಬಂಧ ಹೆಚ್ಚಾಗಿತ್ತು.

ಸರ್ಕಾರಕ್ಕೆ ಎಷ್ಟು ನಷ್ಟವಾಗಿದೆ?
ಕರ್ನಾಟಕ ಹಾಗೂ ಆಂಧ್ರಪ್ರದೇಶ ಗಣಿಯಿಂದ ಸುಮಾರು 1 ಲಕ್ಷದ 48 ಸಾವಿರ ಮೆಟ್ರಿಕ್ ಟನ್ಅದಿರನ್ನು ಕಾನೂನು ಬಾಹಿರವಾಗಿ ಸಾಗಿಸಲಾಗಿತ್ತು. ಇದರಿಂದ ಸರ್ಕಾರಕ್ಕೆ ಸುಮಾರು 37 ಸಾವಿರ ಕೋಟಿ ರೂ. ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿದೆ.
ಇದೇ ರೀತಿ ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ರಾಜ್ಯದಿಂದ 80 ಲಕ್ಷ ಟನ್ ಕಬ್ಬಿಣದ ಅದಿರನ್ನು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಕುಟುಂಬ ಅಕ್ರಮವಾಗಿ ಸಾಗಿಸಿದೆ. ಇದರಿಂದ ಸುಮಾರು 2,800 ಕೋಟಿ ರೂಪಾಯಿಗೂ ಹೆಚ್ಚು ನಿವ್ವಳ ಲಾಭ ಪಡೆದುಕೊಂಡಿದೆ ಎಂದು ಸಿಬಿಐ ದಾಖಲೆಗಳು ಹೇಳಿವೆ.

ಲಾಭ ಹಂಚಿಕೆ ಹೇಗೆ ನಡೆಯಿತು
ಸ್ಥಗಿತ ಗಣಿಗಳ ಹೆಸರಿನಲ್ಲಿ ನಡೆಯುವ ವಹಿವಾಟಿನಲ್ಲಿ ಶೇಕಡ 75ರಷ್ಟು ಲಾಭಾಂಶ ಜನಾರ್ದನ ರೆಡ್ಡಿ ಅವರಿಗೆ ಸಂದಾಯವಾಗುತ್ತಿತ್ತು. ಸ್ಥಗಿತ ಗಣಿಗಳ ಹೆಸರಿನಲ್ಲಿ ಅಕ್ರಮ ವ್ಯವಹಾರಕ್ಕೆ ಸಹಕಾರ ನೀಡಿದ ಗಣಿ ಮಾಲೀಕರಿಗೆ ಶೇ 25ರಷ್ಟು ಪಾಲು ದೊರೆಯುತ್ತಿತ್ತು. ನೋಂದಾಯಿತ ಮಾರಾಟಗಾರರ ಮೂಲಕ ನಡೆಯುವ ವ್ಯವಹಾರದಲ್ಲಿ ಶೇ 90ರಷ್ಟು ಲಾಭ ರೆಡ್ಡಿ ಅವರ ಪಾಲಾದರೆ, ಶೇ 10ರಷ್ಟು 'ಬೇನಾಮಿ' ಮಾರಾಟಗಾರರ ಹೆಸರಿನ ರೆಡ್ಡಿ ಸಹಚರರಿಗೆ ತಲುಪುತ್ತಿತ್ತು. ಹೀಗಾಗಿ ಲಾಭ ನಷ್ಟ ಎಲ್ಲವೂ ರೆಡ್ಡಿ ಬಿಟ್ಟು ಬೇರೆಯವರಿಗೆ ಸಿಗುತ್ತಿರಲಿಲ್ಲ.

ಮಾಸ್ಟರ್ ಮೈಂಡ್ ಅಲಿ ಖಾನ್
ಸ್ಥಗಿತ ಗಣಿಗಳ ಮಾಲೀಕರು ಮತ್ತು ನೋಂದಾಯಿತ ಮಾರಾಟಗಾರರ ಬ್ಯಾಂಕ್ ಖಾತೆಗಳಿಂದ ಈ ಲಾಭಾಂಶದ ಮೊತ್ತ ಹಲವು ಖಾತೆಗಳನ್ನು ದಾಟಿಕೊಂಡು, ಜನಾರ್ದನ ರೆಡ್ಡಿ ಮತ್ತು ಒಎಂಸಿ ಒಡತಿ ಗಾಲಿ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅರುಣಾ ಅವರ ಖಾತೆ ಸೇರುತ್ತಿತ್ತು. ನಂತರ ರೆಡ್ಡಿ ದಂಪತಿ ಸ್ವಂತ ಚೆಕ್ಕುಗಳ ಮೂಲಕವೇ ಹಣವನ್ನು ಡ್ರಾ ಮಾಡುತ್ತಿದ್ದರು. ಹೀಗೆ 2,800 ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಅವರ ಖಜಾನೆಗೆ ಬಂದಿದೆ. ಬಳ್ಳಾರಿ ಮತ್ತು ಹೊಸಪೇಟೆಯ ಎಕ್ಸಿಸ್ ಬ್ಯಾಂಕ್, ವಿಕಾಸ್ ಸೌಹಾರ್ದ ಸಹಕಾರಿ ಬ್ಯಾಂಕ್ ಮತ್ತು ಲಕ್ಷ್ಮಿ ವಿಲಾಸ ಬ್ಯಾಂಕ್ ಶಾಖೆಗಳ ಮೂಲಕ ಈ ವ್ಯವಹಾರ ನಡೆದಿದೆ. ಈ ಎಲ್ಲ ವ್ಯವಹಾರವನ್ನೂ ರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ನಿರ್ವಹಿಸಿ, ನಿಯಂತ್ರಿಸುತ್ತಿದ್ದ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications