ಪದ್ಮಾವತಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ರೆಡ್ಡಿ ವಿರುದ್ಧ ಆರೋಪ
ಬಳ್ಳಾರಿ, ಮೇ 1 : ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆ ಪದ್ಮಾವತಿ ಯಾದವ್ ಕೊಲೆ ಪ್ರಕರಣ ಹೊಸ ತಿರುವು ಪಡೆದಿದೆ. ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ವಿರುದ್ಧ ಆರೋಪ ಕೇಳಿ ಬರುತ್ತಿದೆ.
ಕೊಲೆಯಾಗಿರುವ ಪದ್ಮಾವತಿ ಸಹೋದರ ಜಿಲ್ಲಾ ಪೊಲೀಸ್ ಗೆ ಲಿಖಿತ ದೂರು ನೀಡಿದ್ದು, ಚುನಾವಣಾ ಸಂದರ್ಭದಲ್ಲಿ ವಿಷಯ ಸಾಕಷ್ಟು ಮಹತ್ವ ಪಡೆದಿದೆ. ಏಪ್ರಿಲ್ 30 ರ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್ ಅವರಿಗೆ ಸುಬ್ಬಾರಾಯುಡು ಪತ್ರ ಸಲ್ಲಿಸಿದ್ದಾರೆ.
ಪದ್ಮಾವತಿ ಯಾದವ್ ಕೊಲೆ ಪ್ರಕರಣದಲ್ಲಿ ಜಿ. ಜನಾರ್ದನರೆಡ್ಡಿ ಹೆಸರು ಇದುವರೆಗೆ ತಳುಕು ಹಾಕಿಕೊಂಡಿರಲಿಲ್ಲ. ಪ್ರಕರಣದಲ್ಲಿ ಕೊಲೆ ಆರೋಪಿಗಳು ಪತ್ತೆಯಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಿ ರಿಪೋಟ್ ಸಲ್ಲಿಸಿದ್ದರು.

ಈಗ ದೂರುದಾರ ಜಿ. ಜನಾರ್ದನರೆಡ್ಡಿ ಅವರನ್ನೇ ಆರೋಪಿ ಮಾಡಿ, ಮುಂದಿನ ತನಿಖೆಗೆ ಮನವಿ ಸಲ್ಲಿಸಿರುವುದು ಅನೇಕರಲ್ಲಿ ಅಚ್ಚರಿಯ ಕುತೂಹಲ ಮೂಡಿಸಿದೆ.
ಫೆ.4, 2010 ರಂದು ಪದ್ಮಾವತಿ ಯಾದವ್ ಅವರು ನಿರ್ಮಾಣ ಹಂತದಲ್ಲಿದ್ದ ಅವರ ಹೊಸ ಮನೆಯಂಗಳದಲ್ಲಿಯೇ ಭರ್ಬರವಾಗಿ ಹತ್ಯೆಗೀಡಾಗಿದ್ದರು.
ಪ್ರಕರಣವನ್ನು ಸಿಐಡಿ ತನಿಖೆ ಮಾಡಿ, ಐದು ವರ್ಷಗಳಾದರೂ ನ್ಯಾಯಲಯಕ್ಕೆ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸದೇ ಇದ್ದಾಗ ದೂರುದಾರ ಸುಬ್ಬರಾಯುಡು, ಹೈಕೋರ್ಟ್ ಮೊರೆ ಹೋಗಿದ್ದರು.

ಆಗ, ಕೇವಲ ಮೂರು ತಿಂಗಳಲ್ಲೇ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ 2015 ಡಿಸೆಂಬರ್ ನಲ್ಲಿ ಕೋರ್ಟ್ ಸಿಐಡಿಗೆ ಆದೇಶ ನೀಡಿತ್ತು.
ಆರೋಪಿಗಳು ಪತ್ತೆಯಾಗಿಲ್ಲ ಎಂದು 2016 ಸೆಪ್ಟೆಂಬರ್ ನಲ್ಲಿ ಸಿಐಡಿ ಬಳ್ಳಾರಿಯ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿತ್ತು. ಸಿಐಡಿ ತನಿಖೆಯ ವರದಿಯನ್ನು ಪ್ರಶ್ನಿಸಿ ಸುಬ್ಬುರಾಯುಡು, ಎಸ್ ಐ ಟಿ ತನಿಖೆಗೆ ಒಪ್ಪಿಸಬೇಕು. ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ಪಡೆದಿಲ್ಲ ಎಂದು ಆರೋಪಿಸಿ ನ್ಯಾಯಾಲಯದ ಮೊರೆಹೋಗಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications