ಪದ್ಮಾವತಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ರೆಡ್ಡಿ ವಿರುದ್ಧ ಆರೋಪ
ಬಳ್ಳಾರಿ, ಮೇ 1 : ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆ ಪದ್ಮಾವತಿ ಯಾದವ್ ಕೊಲೆ ಪ್ರಕರಣ ಹೊಸ ತಿರುವು ಪಡೆದಿದೆ. ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ವಿರುದ್ಧ ಆರೋಪ ಕೇಳಿ ಬರುತ್ತಿದೆ.
ಕೊಲೆಯಾಗಿರುವ ಪದ್ಮಾವತಿ ಸಹೋದರ ಜಿಲ್ಲಾ ಪೊಲೀಸ್ ಗೆ ಲಿಖಿತ ದೂರು ನೀಡಿದ್ದು, ಚುನಾವಣಾ ಸಂದರ್ಭದಲ್ಲಿ ವಿಷಯ ಸಾಕಷ್ಟು ಮಹತ್ವ ಪಡೆದಿದೆ. ಏಪ್ರಿಲ್ 30 ರ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್ ಅವರಿಗೆ ಸುಬ್ಬಾರಾಯುಡು ಪತ್ರ ಸಲ್ಲಿಸಿದ್ದಾರೆ.
ಪದ್ಮಾವತಿ ಯಾದವ್ ಕೊಲೆ ಪ್ರಕರಣದಲ್ಲಿ ಜಿ. ಜನಾರ್ದನರೆಡ್ಡಿ ಹೆಸರು ಇದುವರೆಗೆ ತಳುಕು ಹಾಕಿಕೊಂಡಿರಲಿಲ್ಲ. ಪ್ರಕರಣದಲ್ಲಿ ಕೊಲೆ ಆರೋಪಿಗಳು ಪತ್ತೆಯಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಿ ರಿಪೋಟ್ ಸಲ್ಲಿಸಿದ್ದರು.

ಈಗ ದೂರುದಾರ ಜಿ. ಜನಾರ್ದನರೆಡ್ಡಿ ಅವರನ್ನೇ ಆರೋಪಿ ಮಾಡಿ, ಮುಂದಿನ ತನಿಖೆಗೆ ಮನವಿ ಸಲ್ಲಿಸಿರುವುದು ಅನೇಕರಲ್ಲಿ ಅಚ್ಚರಿಯ ಕುತೂಹಲ ಮೂಡಿಸಿದೆ.
ಫೆ.4, 2010 ರಂದು ಪದ್ಮಾವತಿ ಯಾದವ್ ಅವರು ನಿರ್ಮಾಣ ಹಂತದಲ್ಲಿದ್ದ ಅವರ ಹೊಸ ಮನೆಯಂಗಳದಲ್ಲಿಯೇ ಭರ್ಬರವಾಗಿ ಹತ್ಯೆಗೀಡಾಗಿದ್ದರು.
ಪ್ರಕರಣವನ್ನು ಸಿಐಡಿ ತನಿಖೆ ಮಾಡಿ, ಐದು ವರ್ಷಗಳಾದರೂ ನ್ಯಾಯಲಯಕ್ಕೆ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸದೇ ಇದ್ದಾಗ ದೂರುದಾರ ಸುಬ್ಬರಾಯುಡು, ಹೈಕೋರ್ಟ್ ಮೊರೆ ಹೋಗಿದ್ದರು.

ಆಗ, ಕೇವಲ ಮೂರು ತಿಂಗಳಲ್ಲೇ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ 2015 ಡಿಸೆಂಬರ್ ನಲ್ಲಿ ಕೋರ್ಟ್ ಸಿಐಡಿಗೆ ಆದೇಶ ನೀಡಿತ್ತು.
ಆರೋಪಿಗಳು ಪತ್ತೆಯಾಗಿಲ್ಲ ಎಂದು 2016 ಸೆಪ್ಟೆಂಬರ್ ನಲ್ಲಿ ಸಿಐಡಿ ಬಳ್ಳಾರಿಯ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿತ್ತು. ಸಿಐಡಿ ತನಿಖೆಯ ವರದಿಯನ್ನು ಪ್ರಶ್ನಿಸಿ ಸುಬ್ಬುರಾಯುಡು, ಎಸ್ ಐ ಟಿ ತನಿಖೆಗೆ ಒಪ್ಪಿಸಬೇಕು. ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ಪಡೆದಿಲ್ಲ ಎಂದು ಆರೋಪಿಸಿ ನ್ಯಾಯಾಲಯದ ಮೊರೆಹೋಗಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications