ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದ ಪಿ.ಟಿ. ಪರಮೇಶ್ವರನಾಯ್ಕ ಅಭಿಮಾನಿ
ಬಳ್ಳಾರಿ, ಜೂನ್. 11 : ಹೂವಿನಹಡಗಲಿಯ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದಲ್ಲಿ ಊರಿನ ತೇರು ಹನುಮಪ್ಪ ಸ್ವಾಮಿಗೆ ದೀಡ ನಮಸ್ಕಾರ ಹಾಕುವುದಾಗಿ ಹರಕೆ ಹೊತ್ತಿದ್ದ ಶಾಸಕರ ಅಭಿಮಾನಿ, ತೇರು ಹನುಮಪ್ಪ ಸ್ವಾಮಿಯ ಭಕ್ತ, ಕಡ್ಲಬಾಳು ಯಮನಪ್ಪ ಅವರು ಶಾಸಕರ ಸಮ್ಮುಖದಲ್ಲಿಯೇ ದೀಡ್ ನಮಸ್ಕಾರ ಹಾಕಿ, ಹರಕೆ ತೀರಿಸಿದ್ದಾರೆ.
ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಪಿ.ಟಿ. ಪರಮೇಶ್ವರನಾಯ್ಕ ಅವರ ಗೆಲುವು ಕಷ್ಟಕರವಾಗಿತ್ತು. ಪಕ್ಷೇತರ ಅಭ್ಯರ್ಥಿ ಓದೋ ಗಂಗಪ್ಪ ಮತ್ತು ಬಿಜೆಪಿ ಅಭ್ಯರ್ಥಿ ತೀವ್ರ ಸ್ಪರ್ಧೆ ನೀಡಿ, ಹಾಲಿ ಶಾಸಕರ ಗೆಲುವು ದೊಡ್ಡ ಸವಾಲಾಗಿತ್ತು. ಅಲ್ಲದೇ, ಅವರ ಗೆಲುವು ಕಷ್ಟಕರವಾಗಿದೆ ಎಂದೇ ರಾಜಕೀಯವಾಗಿ ವಿಶ್ಲೇಷಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಕಡ್ಲಬಾಳು ಯಮನಪ್ಪ ಅವರು ಪಿ.ಟಿ. ಪರಮೇಶ್ವರನಾಯ್ಕ ಅವರ ಗೆಲುವಿಗಾಗಿ ಹಡಗಲಿಯ ಎಂ.ಪಿ. ಪ್ರಕಾಶ ನಗರದ ತೇರು ಹನುಮಪ್ಪ ಸ್ವಾಮಿಗೆ ಹರಕೆ ಹೊತ್ತು, ಶ್ರದ್ಧೆಯಿಂದ ಸಂಕಲ್ಪತೊಟ್ಟಿದ್ದರು.

ಚುನಾವಣೆಯ ಫಲಿತಾಂಶ ಬಂದ ಕೂಡಲೇ ಹರಕೆ ತೀರಿಸಲು ಅವರು ನಿರ್ಧರಿಸಿದ್ದರು. ಆದರೆ, ಶಾಸಕರ ಲಭ್ಯತೆ ಇಲ್ಲದ ಕಾರಣ ಅನಿವಾರ್ಯವಾಗಿ ಹರಕೆ ತೀರಿಸುವುದನ್ನು ಮುಂದೂಡಿದ್ದರು.
ಹೂವಿನಹಡಗಲಿಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ತೇರು ಹನುಮಪ್ಪ ಸ್ವಾಮಿ ದೇವಸ್ಥಾನದವರೆಗೆ ಕಡ್ಲಬಾಳು ಯಮುನಪ್ಪ ಅವರು ಶಾಸಕರ ಸಮ್ಮುಖದಲ್ಲಿಯೇ ದೀಡ್ ನಮಸ್ಕಾರ ಹಾಕುವ ಮೂಲಕ, ಹರಕೆ ತೀರಿಸಿದ್ದಾರೆ.
ಅಷ್ಟೇ ಅಲ್ಲ, ಹರಕೆ ಹೊತ್ತಿದ್ದನ್ನು ಪೂರ್ಣಗೊಳಿಸಿದ್ದಕ್ಕಾಗಿ ಊರಿನ ತುಂಬ ಎಲ್ಲರಿಂದ ಪ್ರಶಂಸೆಗೆ ಒಳಪಟ್ಟಿದ್ದಾರೆ.
ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಎಲಿಗಾರ ಸಂಘದ ಅಧ್ಯಕ ಅನಂತಪುರ ಖಾಜಾಹುಸೇನ್, ಹುಲಿಗಿ ಬಾಷಾಸಾಬ್, ಸಮೃದ್ ಸಾಬ್, ಮುಕ್ತುಂಸಾಬ್, ಸೊಪ್ಪಿನ ಮಲ್ಲಿಕಾರ್ಜುನ, ಸೋಗಿ ಅಜಮತುಲ್ಲಾ, ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಎಸ್.ರಹಿಮಾನ್, ಪುರಸಭೆ ಸದಸ್ಯ ಊಳಿಗದ ಹನುಮಂತಪ್ಪ, ಟಿ.ಮಹಾಂತೇಶ ಈ ಸಂದರ್ಭದಲ್ಲಿ ಹಾಜರಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications