ಮೋದಿ, ಬಿಎಸ್ವೈ ಜೋಡೆತ್ತುಗಳು ಸರಿ ಇಲ್ಲ; ಪರಮೇಶ್ವರ ನಾಯ್ಕ್
ವಿಜಯನಗರ, ಜೂನ್ 13; ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಪಿ. ಟಿ. ಪರಮೇಶ್ವರ ನಾಯ್ಕ್ ಪ್ರತಿಭಟನೆ ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ದರ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ನಿಂದಾಗಿ ಇಡೀ ರಾಜ್ಯದ ಜನತೆ ಉದ್ಯೋಗವನ್ನು ಕಳೆದುಕೊಂಡು ಸಂಕಷ್ಟದಲ್ಲಿ ಮುಳುಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಜೇಬಿಗೆ ಕೈ ಹಾಕಿ ಸರ್ಕಾರ ಹಣವನ್ನು ಕಿತ್ತುಕೊಳ್ಳುತ್ತಿವೆ. ಜನರ ಬಗ್ಗೆ ಕಾಳಜಿ ಇಲ್ಲಾ, ಜನಸಾಮಾನ್ಯರ ಬದುಕು ದುಸ್ಥಾರವಾಗಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹೂವಿನಹಡಗಲಿ ಕ್ಷೇತ್ರದ ಶಾಸಕರು ಮಾತನಾಡಿದರು. ಸರ್ಕಾರಗಳನ್ನು ಟೀಕಿಸುವ ಬರದಲ್ಲಿ ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೇ ಆವೇಶದಲ್ಲಿ ಶಾಸಕರು ಭಾಷಣ ಮಾಡಿದರು. "ಈ ಎರಡು ಜೋಡೆತ್ತುಗಳು ಸರಿಯಾಗಿಲ್ಲ. ಅದರಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಏರು ಇಳಿವು ಕಾಣುತ್ತಿದೆ" ಎಂದು ವಾಗ್ದಾಳಿ ನಡೆಸಿದರು.
ಹಳ್ಳಿಯ ಸೊಗಡಿನ ಮಾತುಗಳಲ್ಲಿ ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. "ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಸುಳಿ ಸುಮಾರಿದೆ. ಈ ಎರಡೂ ಎತ್ತುಗಳು ಸರಿ ಇಲ್ಲಾ, ನಮ್ಮ ತಂದೆಯವರು ಈ ಹಿಂದೆ ಜಾತ್ರೆಗೆ ಹೋಗಿ ಎತ್ತು ಖರೀದಿ ಮಾಡುವಾಗ ಸುಳಿ, ಕೊಂಬು ಎಲ್ಲಾ ಚೆನ್ನಾಗಿದ್ದಾವಾ? ಅಂತ ನೋಡಿ ಎತ್ತುಗಳನ್ನು ಖರೀದಿ ಮಾಡುತ್ತಿದ್ದರು" ಎಂದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications