ಬಳ್ಳಾರಿಯಲ್ಲಿ ಅಕ್ರಮವಾಗಿ ಅದಿರು ಸಾಗಿಸುತ್ತಿದ್ದ 20 ಲಾರಿ ವಶ
ಬಳ್ಳಾರಿ, ಜೂನ್ 20: ಅಕ್ರಮ ಅದಿರು ಸಾಗಾಣಿಕೆಯಲ್ಲಿ ತೊಡಗಿದ್ದ 20 ಲಾರಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿಯಿಂದ ಆಂಧ್ರ ಪ್ರದೇಶಕ್ಕೆ ಈ ಅಕ್ರಮ ಅದಿರನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಬಳ್ಳಾರಿ ನಗರದಿಂದ ಪ್ರತಿನಿತ್ಯ ನೂರಾರು ಲಾರಿಗಳಲ್ಲಿ ಆಂಧ್ರ ಪ್ರದೇಶದ ಕೃಷ್ಣಾಪಟ್ಟಣಂಗೆ ಕಬ್ಬಿಣದ ಅದಿರನ್ನು ಸಾಗಿಸುವುದು ನಡೆಯುತ್ತಲೇ ಇದೆ. ಈ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಭಾನುವಾರ 20 ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2007-08ನೇ ಸಾಲಿನಲ್ಲಿ ರಾಜ್ಯದಲ್ಲೇ ಬಳ್ಳಾರಿ ಜಿಲ್ಲೆಯು ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣಿಕೆಯಿಂದಲೇ ಹೆಸರುವಾಸಿಯಾಗಿತ್ತು. ಅಂದಿನಿಂದಲೂ ಜಿಲ್ಲೆಯು ಒಂದಿಲ್ಲಾ ಒಂದು ವಿಷಯದಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಇದೀಗ ಅದೇ ಬಳ್ಳಾರಿ ಜಿಲ್ಲೆಯು ಮತ್ತೊಮ್ಮೆ ಅಕ್ರಮ ಅದಿರು ಸಾಗಾಣಿಕೆಯಲ್ಲಿ ಸುದ್ದಿಯಾಗಿದೆ.

20 ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸ್:
ರಾಜ್ಯದಿಂದ ಅದಿರು ರಪ್ತು ಮಾಡುವುದನ್ನು 2010 ರಿಂದ ನಿಷೇಧ ಮಾಡಲಾಗಿದೆ. ಇದರ ಹೊರತಾಗಿಯೂ ಬಳ್ಳಾರಿ ಜಿಲ್ಲೆಯಲ್ಲಿ ರಾಕ್ ಡಸ್ಟ್ ಸಾಗಾಣಿಕೆ ಹೆಸರಲ್ಲಿ ಅಕ್ರಮವಾಗಿ ಅದಿರು ಸಾಗಾಟ ದಂಧೆ ನಡೆಸುತ್ತಿದ್ದ 20 ಲಾರಿಗಳನ್ನು ಬಳ್ಳಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳ್ಳ ಮಾರ್ಗದ ಮೂಲಕ ಬಳ್ಳಾರಿ ಜಿಲ್ಲೆಯಿಂದ ಆಂದ್ರ ಪ್ರದೇಶಕ್ಕೆ ಅಕ್ರಮ ಅದಿರು ಸಾಗಾಟ ಮಾಡುತ್ತಿರುವುದನ್ನು ಬಳ್ಳಾರಿ ಗ್ರಾಮೀಣ ಪೋಲಿಸರು ಪತ್ತೆ ಮಾಡಿದ್ದಾರೆ. ಡಸ್ಟ್ ಹೆಸರಲ್ಲಿ ಉತ್ಕೃಷ್ಟ ಗ್ರೇಡ್ ನ ಕಬ್ಬಿಣದ ಅದಿರನ್ನು ಹೊತ್ತ ಲಾರಿ ಸಹಿತ ಚಾಲಕರನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡಾವತ್ ತಿಳಿಸಿದ್ದಾರೆ.

"ಆಂಧ್ರಪ್ರದೇಶದ ಕೃಷ್ಣಾಪಟ್ಟಣಂ ಪೋರ್ಟ್ ಗೆ ಈ ಅದಿರನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ನಿತ್ಯ ನೂರಕ್ಕೂ ಹೆಚ್ಚು ಲಾರಿಗಳಲ್ಲಿ ಡಸ್ಟ್ ಹೆಸರಲ್ಲಿ ಸಾಗಾಟವಾಗುತ್ತಿತ್ತು. ಬಳ್ಳಾರಿ ಇಸ್ಪಾತ್ ಕಂಪನಿ ಹೆಸರಲ್ಲಿ 20 ಲಾರಿಗಳನ್ನು ಲೋಡ್ ಮಾಡಿ ಕಳಿಸಲಾಗಿದೆ. 20 ಲಾರಿ, ಚಾಲಕರು ಮತ್ತು ಲೋಡ್ ಮಾಡಿದವರನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ," ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡಾವತ್ ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications