ಬಳ್ಳಾರಿ: ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ
ಬಳ್ಳಾರಿ ,ಮೇ 13: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ನೇತೃತ್ವದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನ ಭಾಗವಾಗಿ ತೋರಣಗಲ್ಲು, ಹೊಸಪೇಟೆ ಮತ್ತು ಹಂಪೆಯ ಅಂತಾರಾಷ್ಟ್ರೀಯ ದರ್ಜೆಯ ವಿವಿಧ ಹೋಟಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು.
ಅಂತಾರಾಷ್ಟ್ರೀಯ ದರ್ಜೆಯ ತೋರಣಗಲ್ಲು ವಿದ್ಯಾನಗರ ಹೋಟಲ್ ಹಯಾತ್, ರಾಕ್ ರೀಜೆನ್ಸಿ, ಹೊಸಪೇಟೆಯ ರಾಯಲ್ ಆರ್ಕಿಡ್, ಹಂಪೆಯ ವಿಜಯಶ್ರೀ ಹೆರಿಟೇಜ್ ಮತ್ತು ದರೋಜಿಯ ಎವಾಲ್ವ್ ಬ್ಯಾಕ್ ಹೋಟಲ್ನಲ್ಲಿ ಒಟ್ಟು 33 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲಾಗಿದೆ.

ವಿದ್ಯಾರ್ಥಿಗಳನ್ನು ತೋರಣಗಲ್ಲು, ಹೊಸಪೇಟೆ ಮತ್ತು ಹಂಪೆಯ ಹೋಟಲ್ಗಳಿಗೆ ಕರೆದುಕೊಂಡು ಬಂದು, ವೃತ್ತಿಪರರಿಂದಲೇ ಪ್ರಾಯೋಗಿಕ ತರಬೇತಿ ನೀಡಲಾಗಿದೆ.
ಹೋಟಲ್ ಹಯಾತ್ನ ಅಸಿಸ್ಟೆಂಟ್ ಜನರಲ್ ಮೇನೇಜರ್ ರವೀಂದ್ರನಾಥ್, ತರಬೇತಿ ಅಧಿಕಾರಿ ನೈಜಲ್ ನಾಯ್ಡು, ರಕ್ಷಿತ್ ಮತ್ತು ಶಂಪಾ ಅವರು, ವಿದ್ಯಾರ್ಥಿಗಳಿಗೆ ಹೋಟಲ್ನ ಕೋಣೆಗಳ ನಿರ್ವಹಣೆ, ಹೋಟಲ್ನಲ್ಲಿಯ ದೈನಂದಿನ ಚಟುವಟಿಕೆಗಳು, ಗ್ರಾಹಕರೊಂದಿಗಿನ ಆತ್ಮೀಯತೆ, ಶಿಸ್ತು-ಸಂಯಮ ಮತ್ತು ಇನ್ನಿತರೆಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್'ನ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನ ತರಬೇತುದಾರರಾದ ಅನಿಲ್ ಕನಗಿನಿ ಮತ್ತು ಅನು, ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯ ನೀಡಲು ಅಂತಾರಾಷ್ಟ್ರೀಯ ದರ್ಜೆಯ ಹೋಟಲ್ಗಳ ನಿರ್ವಹಣೆ ಮತ್ತು ದೈನಂದಿನ ಚಟುವಟಿಕೆಗಳ ಕುರಿತು ಪ್ರಾಯೋಗಿಕ ತರಬೇತಿ ಅಗತ್ಯವಾಗಿದೆ ಎಂದು ತಿಳಿಸಿದರು.

ಹೋಟಲ್ ಮ್ಯಾನೇಜ್ಮೆಂಟ್ ಕೋರ್ಸ್ನ ವಿದ್ಯಾರ್ಥಿಗಳಾದ ಎರ್ರಿಸ್ವಾಮಿ ನಾಯಕ್ ಮತ್ತು ಜಿ.ಜ್ಯೋತಿ , ಅಂತಾರಾಷ್ಟ್ರೀಯ ದರ್ಜೆಯ ಹೋಟಲ್ಗಳಲ್ಲಿಯ ದೈನಂದಿನ ನಿರ್ವಹಣೆ - ಚಟುವಟಿಕೆಗಳ ಕುರಿತು ಸಾಕಷ್ಟು ಮಾಹಿತಿ ಸಿಕ್ಕಿದೆ. ಕೋರ್ಸ್ ಪೂರ್ಣಗೊಂಡ ನಂತರ ಇಲ್ಲಿಯ ವಿದ್ಯಾರ್ಥಿಗಳಿಗೆ ಉದ್ಯಮದಲ್ಲಿ ಖಂಡಿತವಾಗಿಯೂ ಅಪಾರ ಬೇಡಿಕೆ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಡಿಸಿಸಿಐನ ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನ ಗೌಡ ಅವರು ಮಾತನಾಡಿ, ಹೋಟಲ್ಗಳ ನಿರ್ವಹಣೆಯಲ್ಲಿ ವೃತ್ತಿಪರತೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಹೋಟಲ್ ಮ್ಯಾನೇಜ್ಮೆಂಟ್ ಕೋರ್ಸ್ನ ತರಬೇತಿ ನೀಡಲಾಗುತ್ತಿದೆ. ಮೊದಲನೇ ಬ್ಯಾಚ್ನ ಕೌಶಲ್ಯತೆ ಆಧರಿಸಿ, ಎರಡನೇ ಬ್ಯಾಚ್ ಪ್ರಾರಂಭಿಸುತ್ತೇವೆ ಎಂದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications