ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ; ಸಚಿವ ಪ್ರಲ್ಹಾದ್ ಜೋಶಿ
"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ".
ಬಳ್ಳಾರಿ, ಮಾರ್ಚ್ 07: ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ತೀವ್ರ ಟೀಕೆ ಮಾಡುತ್ತಿದ್ದಾರೆ. ಇದರ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಿಡಿ ಕಾರಿದ್ದು, "ಬ್ರಿಟನ್ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.
ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಪ್ ಥ್ಯಾಂಕ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಷ ಮಾತನಾಡಲು ಸಮಯದ ಅವಕಾಶವಿತ್ತು. ಆದರೆ, ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ದರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ ಎಂದು ಸದನದಲ್ಲಿ ಪ್ರತಿಪಕ್ಷಗಳ ಗದ್ದಲವನ್ನು ವಿವರಿಸಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಮುಂದುವರಿದು, "ಭಾರತ್ ಜೋಡೋ ವೇಳೆ ಭಯೋತ್ಪಾದಕರ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಸಂಶಯ ಬಂದಿದ್ದರೇ ಆಗ ಏಕೆ ದೂರು ನೀಡಲಿಲ್ಲ. ಇವರ ತಂದೆಯ ಹತ್ಯೆಗೆ ಭಯೋತ್ಪಾದಕರೆ ಕಾರಣ ಅನ್ನೋದನ್ನ ರಾಹುಲ್ ಗಾಂಧಿ ಮರೆಯದಿರಲಿ" ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇನ್ನು, ಚನ್ನಗಿರಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದ ವಿಚಾರದಲ್ಲಿ ಪಕ್ಷ ಸೂಕ್ತ ತನಿಖೆ ನಡೆಸುತ್ತಿದೆ. ರಾಷ್ಟ್ರೀಯ ನಾಯಕರು ಪ್ರಕರಣವನ್ನು ಸೂಕ್ಷವಾಗಿ ಗಮನಿಸುತ್ತಿದ್ದು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications