ಬಳ್ಳಾರಿಯ ವಿದ್ಯಾವರ್ಧಕ ಸಂಘದಲ್ಲಿ ಶಿಕ್ಷಣ ಪಡೆದಿದ್ದರು ಯು.ಆರ್. ರಾವ್
ಬಳ್ಳಾರಿ, ಜುಲೈ 24: ಸೋಮವಾರ ಬೆಳಗಿನ ಜಾವ ನಿಧನ ಹೊಂದಿದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೊದ ಮಾಜಿ ಅಧ್ಯಕ್ಷ ಪ್ರೊ ಯು.ಆರ್.ರಾವ್ ಅವರಿಗೂ ಬಳ್ಳಾರಿಗೂ ಹಾಗೂ ಇಲ್ಲಿನ ವೀರಶೈವ ವಿದ್ಯಾವರ್ಧಕ ಸಂಘಕ್ಕೂ ಅವಿನಾಭಾವ ಸಂಬಂಧ.
ಯಾಕೆ ಅಂತಿರಾ? ತಮ್ಮ ಸಂಬಂಧಿಕರ ಮನೆಯಲ್ಲಿದ್ದುಕೊಂಡು ರಾವ್ ಅವರು ತಮ್ಮ ಇಂಟರ್ ಮೀಡಿಯೆಟ್ ವಿದ್ಯಾಭ್ಯಾಸವನ್ನು ಮುಗಿಸಿದ್ದು ಇದೇ ಬಳ್ಳಾರಿಯ ವಿದ್ಯಾವರ್ಧಕ ಸಂಘದಲ್ಲಿ.

ಈ ಕಾರಣದಿಂದ ಖ್ಯಾತ ವಿಜ್ಞಾನಿ ಪ್ರೊ ರಾವ್ ಅವರು ಬಳ್ಳಾರಿಗೆ ಭೇಟಿ ನೀಡಿದಾಗ ಒಮ್ಮೆ ತಾವು ಅಭ್ಯಾಸ ಮಾಡಿದ ವೀರಶೈವ ಕಾಲೇಜಿಗೆ ಹೋಗುವುದನ್ನು ಎಂದಿಗೂ ಮರೆತಿರಲಿಲ್ಲ. ಅಲ್ಲದೆ ಪ್ರೊ. ರಾವ್ ಅವರು ಸಂಸ್ಥೆಯ ಹಳೆ ವಿದ್ಯಾರ್ಥಿ ಎಂಬ ಹೆಮ್ಮೆ ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯವರಿಗೆ ಇದೆ.

ಜೂನ್ 20, 2014ರಂದು ಪ್ರೊ ಯು.ಆರ್.ರಾವ್ ಅವರು ಬಳ್ಳಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು, ತಾವು ಬಾಲ್ಯದಲ್ಲಿ ಬಳ್ಳಾರಿಯಲ್ಲಿ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದರು. ಬಳ್ಳಾರಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಆಗ ಇಲ್ಲಿ ಕೋಟೆ ಪ್ರದೇಶವೇ ಕಾಲ ಕಳೆಯುವ ಸ್ಥಳವಾಗಿತ್ತು. ತಮ್ಮ ಈ ಬೆಳವಣಿಗೆಗೆ ವೀರಶೈವ ವಿದ್ಯಾವರ್ಧಕ ಸಂಘದ ಕೊಡುಗೆ ಅಪಾರವಾಗಿತ್ತು ಎಂದೂ ಅವರು ಅಂದು ಬಣ್ಣಿಸಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications