ಬೇಕೇ ಬೇಕು ಬಾರ್ ಬೇಕು; ಸೋವೇನಹಳ್ಳಿಯಲ್ಲಿ ಮದ್ಯದಂಗಡಿಗೆ ಪ್ರತಿಭಟನೆ
ಬಳ್ಳಾರಿ, ಜುಲೈ 26: ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಿ ಎಂದು ಆಗ್ರಹಿಸಿದ ಸಾವಿರಾರು ಮಹಿಳೆಯರು ರಾಜಧಾನಿಗೆ ಬರಿಗಾಲ ಹೆಜ್ಜೆ ಹಾಕಿದ್ದು ಇನ್ನೂ ಹಸಿಹಸಿಯಾಗಿದೆ. ಹೀಗಿರುವಾಗಲೇ, ಮದ್ಯದಂಗಡಿ ಬೇಕೆಂದು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸುದ್ದಿ ಶುಕ್ರವಾರ ಹೊರಬಿದ್ದಿದೆ.
ಸಾರಾಯಿಯಿಂದ ಸಂಸಾರ ನಾಶವಾಗುತ್ತಿದೆ ಎಂದು ಪಾದಯಾತ್ರೆ ಕೈಗೊಂಡ ಮಹಿಳೆಯರ ಪೈಕಿ ಬಳ್ಳಾರಿಯವರೂ ಇದ್ದರು. ಆದರೆ ಈಗ ಅದೇ ಬಳ್ಳಾರಿಯಲ್ಲಿ, ಮಹಿಳೆಯರೂ ಸೇರಿದಂತೆ, ಒಂದು ವರ್ಗ ನಮ್ಮ ಹಳ್ಳಿಗೂ ಮದ್ಯದಂಗಡಿ ಬೇಕು ಎಂದು ಒತ್ತಾಯಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮಸ್ಥರು ಸಾರಾಯಿ ಅಂಗಡಿಗಾಗಿ ಪ್ರತಿಭಟನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತಿ ಮುಂಭಾಗ ಕುಳಿತು, ನಮ್ಮ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಬೇಕು ಎಂದು ನೂರಾರು ಮಹಿಳೆಯರು ಮತ್ತು ಪುರುಷರು ಪ್ರತಿಭಟನೆ ನಡೆಸಿದ್ದಾರೆ.

ಸೋವೇನಹಳ್ಳಿ ಗ್ರಾಮದಲ್ಲಿ ಮದ್ಯಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರ ಬೇಡಿಕೆಯಂತೆ ಎಂ.ಎಸ್.ಐ.ಎಲ್, ವೈನ್ ಶಾಪ್ ಪ್ರಾರಂಭಿಸಲು ಗ್ರಾಮಸ್ಥರೊಬ್ಬರಿಗೆ ಅಬಕಾರಿ ಇಲಾಖೆ ಪರವಾನಗಿ ನೀಡಿದ್ದರು. ಆದರೆ ಗ್ರಾಮದಲ್ಲಿ ವೈನ್ ಶಾಪ್ ಪ್ರಾರಂಭಿಸಿದರೆ ಮದ್ಯವ್ಯಸನಿಗಳು ಹೆಚ್ಚಾಗುತ್ತಾರೆ ಎಂದು ಕೆಲವರು ಬಾರ್ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಎಂಎಸ್ಐಎಲ್ ಕೌಂಟರ್ ಪ್ರಾರಂಭಕ್ಕೆ ವಿಳಂಬವಾಗಿತ್ತು. ಇದರಿಂದ ಬೇಸತ್ತು ಮೊನ್ನೆ ಸಂಜೆ ಗ್ರಾಮದ ಮಹಿಳೆಯರು ಹಾಗೂ ಪುರುಷರು ಗ್ರಾಮ ಪಂಚಾಯತಿ ಮುಂಭಾಗ ಸೇರಿದರು. ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೇಕೇ ಬೇಕು ಬಾರ್ ಬೇಕು ಎಂದು ಆಕ್ರೋಶದಿಂದ ಗ್ರಾಮಸ್ಥರು ಪಟ್ಟು ಹಿಡಿದಿರುವ ದೃಶ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.
ಇಂತಹದೊಂದು ಪ್ರತಿಭಟನೆಯನ್ನು ಪ್ರಾಯೋಜಿಸಿದವರು ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಲು ಕಷ್ಟವಲ್ಲದಿದ್ದರೂ, ಜನರ ಆಗ್ರಹಗಳಿಗೆ ಪ್ರತಿರೋಧವನ್ನು ಹೇಗೆ ಹುಟ್ಟುಹಾಕಲಾಗುತ್ತದೆ ಎಂಬುದಕ್ಕೆ ಜನರ ಈ ನಡವಳಿಕೆ ನಿದರ್ಶನವಾಗಿ ಕಣ್ಮುಂದಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications