ಪ್ರಚೋದನಾಕಾರಿ ಭಾಷಣ; ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್
ಬಳ್ಳಾರಿ, ಜನವರಿ 05: ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ಅವರು ಟೀಕೆಗೆ ಗುರಿಯಾಗಿದ್ದಾರೆ.
ಬಳ್ಳಾರಿಯ ಕಾಂಗ್ರೆಸ್ ನಾಯಕ ಪಿ. ವಿವೇಕ್ ನೀಡಿದ ದೂರಿನ ಅನ್ವಯ ಬಳ್ಳಾರಿಯ ಗಾಂಧಿನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಸೋಮಶೇಖರ ರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೂ ಮನವಿ ಮಾಡಿದೆ.
ಎಫ್ಐಆರ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಸೋಮಶೇಖರ ರೆಡ್ಡಿ ಮೊದಲ ಆರೋಪಿ. ಸಿಎಎ ಪರವಾದ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ 'ದೇಶಭಕ್ತ ನಾಗರಿಕ ವೇದಿಕೆ'ಯನ್ನು 2ನೇ ಆರೋಪಿಯನ್ನಾಗಿ ಮಾಡಲಾಗಿದೆ.
ಸೋಮಶೇಖರ ರೆಡ್ಡಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜವನ್ನು ಭಿತ್ತಿ ಜಗಳ ಹಚ್ಚುವಂತಹ ಹೇಳಿಕೆಗಳನ್ನು ನೀಡಿ ದೇಶ ಮತ್ತು ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡುವ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಪಿ. ವಿವೇಕ್ ಉಲ್ಲೇಖಿಸಿದ್ದರು.

ಇಂಥ ಹೇಳಿಕೆ ನೀಡಲು ನಾಚಿಕೆಯಾಗಬೇಕು
ಸೋಮಶೇಖರ ರೆಡ್ಡಿ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸೋಮಶೇಖರ ರೆಡ್ಡಿ ಅವರು ಬಿಜೆಪಿ ಮತ್ತು ಸಂಘಪರಿವಾರದ ಇನ್ನೊಂದು ಮುಖವನ್ನು ಅನಾವರಣ ಮಾಡಿದ್ದಾರೆ. ಜಾತ್ಯತೀತವಾದ, ಪಕ್ಷಾತೀತವಾದ ಪ್ರತಿಭಟನೆಗೆ ಧರ್ಮದ ಬಣ್ಣ ಬಳಿದು ಜನರ ದಿಕ್ಕು ತಪ್ಪಿಸಲು ಬಿಜೆಪಿ ಪಕ್ಷ ಪ್ರಯತ್ನಿಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಇಂಥ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು.
ಬೇಜವಾಬ್ದಾರಿ ಹೇಳಿಕೆ ನೀಡಿರುವ ಅವರು ಜನಪ್ರತಿನಿಧಿಯಾಗಲು ಖಂಡಿತ ಅರ್ಹರಲ್ಲ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಅವರನ್ನು ಮೊದಲು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಬೇಕು.
ಸಮಾಜ ಒಡೆಯುವವರ ಮಾತುಗಳಿಗೆ ಕಿವಿಗೊಡದೆ ಶಾಂತಿಯಿಂದ ವರ್ತಿಸೋಣ. ಕಾನೂನು ಹೋರಾಟದ ಮೂಲಕ ಇವರಿಗೆ ತಕ್ಕ ಉತ್ತರ ನೀಡೋಣ" ಎಂದು ಹೇಳಿದ್ದಾರೆ.

ಕಾಂಗ್ರೆಸ್ನಿಂದ ದೂರು
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಪ್ರಚೋದನಾಕಾರಿ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಿರುವ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಪೊಲೀಸ್ ಮಹಾ ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಮನವಿ ಸ್ವೀಕರಿಸಿದ್ದಾರೆ.

ಸೋಮಶೇಖರ ರೆಡ್ಡಿ ಹೇಳಿದ್ದೇನು?
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೋಮಶೇಖರ ರೆಡ್ಡಿ, "ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಬಂದೂಕಿನಿಂದ ಶೂಟ್ ಮಾಡಿದರೆ ಜನಸಂಖ್ಯೆಯಾದರೂ ಕಡಿಮೆಯಾಗುತ್ತಿತ್ತು. ನೀವು ಶೇ 17ರಷ್ಟು ಮಾತ್ರವಿದ್ದು, ಶೇ 80ರಷ್ಟು ನಾವು ಇದ್ದೇವೆ. ನಾವು ತಿರುಗಿ ಬಿದ್ದರೆ ನಿಮ್ಮ ಪರಿಸ್ಥಿತಿ ಏನಾಗಬೇಕು ಊಹಿಸಿಕೊಳ್ಳಿ" ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು.

ಯಾರು ಸೋಮಶೇಖರ ರೆಡ್ಡಿ?
ಸೋಮಶೇಖರ ರೆಡ್ಡಿ ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ. ಮಾಜಿ ಸಚಿವ, ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಸಹೋದರ. ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಲ್ಲಿದ್ದಾಗ ಕೆಎಂಎಫ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications