ಎಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ತಳ್ಳಿದ್ದು ಅಸ್ಪೃಶ್ಯತೆ ಸೂಚಕ: ರಾಮುಲು
ಬಳ್ಳಾರಿ, ಏಪ್ರಿಲ್ 15: ಎಚ್.ಆಂಜನೇಯ ಅವರನ್ನು ವೇದಿಕೆಯ ಮೇಲೆ ಸಿದ್ದರಾಮಯ್ಯ ಅವರು ಪಕ್ಕಕ್ಕೆ ತಳ್ಳಿದ್ದು ಅಸ್ಪೃಶ್ಯತೆಯನ್ನು ತೋರುತ್ತದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ವೇದಿಕೆ ಮೇಲೆ ರಾಹುಲ್ ಗಾಂಧಿ ಅವರನ್ನು ಮಾತನಾಡಿಸಲು ಬಂದ ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ಅವರು ಬದಿಗೆ ಸರಿಸಿ ರಾಹುಲ್ ಅವರನ್ನು ಮುಂದಕ್ಕೆ ಕರೆದೊಯ್ದರು.
ಸಿದ್ದರಾಮಯ್ಯ ಅವರು ಎಚ್.ಆಂಜನೇಯ ಅವರನ್ನು ತಳ್ಳಿದ್ದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಸಿದ್ದರಾಮಯ್ಯ ಅವರು ಆಂಜನೇಯ ಅವರನ್ನು ತಳ್ಳಿದ್ದನ್ನು ರಾಮುಲು ಅವರು ಆಕ್ಷೇಪಿಸಿದ್ದಾರೆ.

ದಲಿತ ಮುಖಂಡ ಎಚ್.ಆಂಜನೇಯ ಅವರನ್ನು ತಳ್ಳಿದ್ದು ಆ ಸಮುದಾಯಕ್ಕೆ ಮಾಡಿದ ಅವಮಾನ, ಸಿದ್ದರಾಮಯ್ಯ ಅವರ ಈ ನಡೆ ಅಸ್ಪಶ್ಯತೆಯನ್ನು ತೋರುತ್ತದೆ ಎಂದು ರಾಮುಲು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಅಹಂ, ಅಹಂಕಾರವನ್ನು ಇದು ತೋರಿಸುತ್ತದೆ. ರಾಜ್ಯದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರೂ ಇವರು ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರ ಮುಂದಿನ ದಿನಗಳು ಬಹಳ ಕೆಟ್ಟದಾಗಿ ಇರಲಿವೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಯಾರದೋ ಹೆಗಲಮೇಲೆ ಬಂದೂಕು ಇಟ್ಟು ಶೂಟ್ ಮಾಡೋದನ್ನು ಸಿದ್ದರಾಮಯ್ಯ ಬಿಡಬೇಕು.ಸಿದ್ದರಾಮಯ್ಯಗೆ ಕೆಟ್ಟ ದಿನಗಳು ಬರುತ್ತಿವೆ. ಲೋಕಸಭೆ ಚುನಾವಣೆ ಆದ ಬಳಿಕ ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ಆಗಲಿವೆ ಎಂದು ಶ್ರೀರಾಮುಲು ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications