ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್ ಪೇದೆ

|
Google Oneindia Kannada News

ಹೊಸಪೇಟೆ, ಜನವರಿ 22: ರೈಲ್ವೆ ನಿಲ್ದಾಣದಲ್ಲಿ ರೈಲಿನಿಂದ ಕೆಳಗೆ ಬೀಳುತ್ತಿದ್ದ ಪ್ರಯಾಣಿಕರನ್ನು ಸಾವಿನ ದವಡೆಯಿಂದ ರಕ್ಷಿಸಿ ಪೊಲೀಸ್ ಪೇದೆ ಸಿ ಹರೀಶ್ ಮಾನವೀಯತೆ ಮೆರೆದಿದ್ದಾರೆ.

ವಿದೇಶದಿಂದ ಮಗುವನ್ನು ನೋಡಲು ಬಂದಿದ್ದ ಟೆಕ್ಕಿ ರೈಲಿನಿಂದ ಬಿದ್ದು ಸಾವು ವಿದೇಶದಿಂದ ಮಗುವನ್ನು ನೋಡಲು ಬಂದಿದ್ದ ಟೆಕ್ಕಿ ರೈಲಿನಿಂದ ಬಿದ್ದು ಸಾವು

ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ರೈಲಿನಿಂದ ಇಳಿಯುವಾಗ ಪ್ರಯಾಣಿಕರೊಬ್ಬರು ಬೀಳುತ್ತಿದುದನ್ನು ನೋಡಿ ತಕ್ಷಣ ಸ್ಥಳೀಯ ಠಾಣೆಯ ಪೊಲೀಸ್ ಪೇದೆ ಸಿ ಹರೀಶ್ ಅವರು ಪಾರುಮಾಡಿದ್ದಾರೆ. ಗೌರವ್(55) ಪ್ರಾಣಾಪಾಯದಿಂದ ಪಾರಾದವರು, ಸ್ಥಳೀಯ ನಿಲ್ದಾಣದಿಂದ ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸಲು ಮುಂದಾಗುತ್ತಿದ್ದರು, ರೈಲು ಸ್ವಲ್ಪ ಮುಂದೆ ಹೋಗಿದೆ.

ರೈಲಿಂದ ಇಳಿಯುವಾಗ ಬಿದ್ದು, ಹೆತ್ತವರ ಕಣ್ಣೆದುರೇ ಪ್ರಾಣಬಿಟ್ಟ ಟೆಕ್ಕಿರೈಲಿಂದ ಇಳಿಯುವಾಗ ಬಿದ್ದು, ಹೆತ್ತವರ ಕಣ್ಣೆದುರೇ ಪ್ರಾಣಬಿಟ್ಟ ಟೆಕ್ಕಿ

ಈ ವೇಳೆ ಅವರು ರೈಲಿನ ಕೆಳಗೆ ಬೀಳುವಂತೆ ಬಾಗಿದ್ದಾರೆ. ಇದನ್ನು ಗಮನಿಸಿದ ಪೇದೆ ಹರೀಶ್ ಪ್ರಯಾಣಿಕನ ಕಡೆಗೆ ಧಾವಿಸಿ, ರೈಲಿನ ಚಕ್ರದಲ್ಲಿ ಸಿಲುಕಿತ್ತಿದ್ದ ಗೌರವ್ ಅವರನ್ನು ಮೇಲೆತ್ತಿ ಪ್ರಾಣಾಪಾಯದಿಂದ ತಕ್ಷಿಸಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Quick thinking of constable saves mans life at Hospet

ವಿದೇಶದಿಂದ ಮಗುವನ್ನು ನೋಡಲು ಬಂದಿದ್ದ ಟೆಕ್ಕಿ ರೈಲಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಇತ್ತೀಚೆಗೆ ವರದಿಯಾಗಿತ್ತು. ಹಾಗೆಯೇ ಪೋಷಕರನ್ನು ಊರಿಗೆ ಕಳುಹಿಸಲೆಂದು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಟೆಕ್ಕಿ ರೈಲು ಇಳಿಯುವಾಗ ಆಯತಪ್ಪಿ ಬಿದ್ದು ಪೋಷಕರೆದುರೇ ಪ್ರಾಣ ಬಿಟ್ಟಿದ್ದ ಘಟನೆಯೂ ಕೂಡ ನಡೆದಿತ್ತು.

English summary
Police constable saved railway passenger's life in Railway station. Passenger fell down from Rail while stepping down.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X