ಟಪಾಲ್ ಗಣೇಶ್ ಹತ್ಯೆಗೆ ಸುಪಾರಿ ಆರೋಪ, ಸುರೇಶ್ ಬಾಬು ಹೇಳುವುದೇನು?
ಬಳ್ಳಾರಿ, ಆಗಸ್ಟ್. 23 : 'ಟಪಾಲ್ ಗಣೇಶ್ ಅವರನ್ನು ನಾನು ಇದುವರೆಗೆ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಲು ನನಗೂ ಅವರಿಗೂ ಏನು ಸಂಬಂಧ?. ಅವರ ಆರೋಪದ ಬಗ್ಗೆ ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ' ಎಂದು ಕಂಪ್ಲಿ ಶಾಸಕ ಸುರೇಶ್ ಬಾಬು ಹೇಳಿದರು.
ಟಪಾಲ್ ಗಣೇಶ್ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸುರೇಶ್ ಬಾಬು, 'ನಾನೇನು ಗಣಿ ಹೊಂದಿಲ್ಲ. ಟ್ರಾನ್ಸ್ಪೋರ್ಟ್ ಉದ್ಯಮವಿಲ್ಲ, ಅವರೊಡನೆ ಯಾವುದೇ ವ್ಯವಹಾರವಿಲ್ಲ. ಅವರ ಹತ್ಯೆ ಮಾಡಿಸಿದರೆ ನನಗೆ ಸಿಗುವುದು ಏನು?' ಎಂದು ಪ್ರಶ್ನಿಸಿದರು.

'ಅವರು ನನ್ನ ಮೇಲೆ ಮಾಡಿರುವ ಆರೋಪದ ಬಗ್ಗೆ ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಾಗಿದ್ದೇನೆ. ಸುಪಾರಿ ಕೊಟ್ಟಿರುವುದು ಖಚಿತವಾದರೆ ಯಾರಿಗೆ ಕೊಟ್ಟಿದ್ದೇನೆ ಎಂದು ಪೊಲೀಸರಿಗೆ ಹೇಳಲಿ. ಆ ಬಗ್ಗೆ ತನಿಖೆಗಳು ನಡೆಯಲಿ' ಎಂದು ಸವಾಲು ಹಾಕಿದರು.
'ಚುನಾವಣೆಗಳು ಹತ್ತಿರವಾಗುತ್ತಿವೆ, ಕ್ಷೇತ್ರದಲ್ಲಿ ನಾನು ಉತ್ತಮ ಕೆಲಸಗಳನ್ನು ಮಾಡುತ್ತಿದ್ದೇನೆ. ರಾಜಕೀಯವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಇಂತಹ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಬರುತ್ತಿರುವುದರಿಂದ ಅವರಿಗೂ ಪ್ರಚಾರ ಬೇಕಾಗಿದೆ. ಅದಕ್ಕಾಗಿ ಇಂತಹ ಹೇಳಿಕೆ ಕೊಡುತ್ತಿದ್ದಾರೆ' ಎಂದು ದೂರಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications