ಬಳ್ಳಾರಿಯಲ್ಲಿ ರೆಡ್ಡಿ ಪಾಳಯ ಪ್ರಾಬಲ್ಯ: ಬುಡಾ ಅಧ್ಯಕ್ಷರ ಮರು ನೇಮಕ
ಬಳ್ಳಾರಿ, ಮೇ 22: ಲಾಕ್ ಡೌನ್ ನಡುವೆಯೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಮ್ಮೂರು ಶೇಖರ್ ಅವರನ್ನು ಮರು ನೇಮಕಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಈಗ ಮತ್ತೆ ವಿವಾದ ಸೃಷ್ಠಿಯಾಗುವ ಸಾಧ್ಯತೆ ದಟ್ಟವಾಗಿದೆ.
ಈ ಹಿಂದೆ ರೆಡ್ಡಿ ಸಹೋದರರ ಪರಮಾಪ್ತರಾಗಿದ್ದ ದಮ್ಮೂರು ಶೇಖರ್ ಅವರನ್ನು ನೇಮಕಗೊಳಿಸಿದ್ದರಿಂದ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದಿಯಾಗಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆಯ ಪ್ರಹಸನಕ್ಕೂ ಸಾಕ್ಷಿಯಾಗಿತ್ತು.

ಇದರಿಂದ ಗಲಿಬಿಲಿಗೊಂಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೂಡಲೇ ಬುಡಾ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಆದೇಶವನ್ನು ರದ್ದುಪಡಿಸಿದ್ದರು. ಇದೀಗ ಮತ್ತೊಮ್ಮೆ ದಮ್ಮೂರು ಶೇಖರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದಮ್ಮೂರು ಶೇಖರ್ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ ಪರಮಾಪ್ತ ಎಂದು ಹೇಳಲಾಗುತ್ತಿದೆ.

ಆದೇಶ ಹೀಗಿದೆ
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯಿದೆ, 1987 ರ ಕಲಂ 3(3 X ಎ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಮ್ಮೂರು ಶೇಖರ್ ಅವರನ್ನು ಈ ತತ್ ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications