Get Updates
Get notified of breaking news, exclusive insights, and must-see stories!

ಬಳ್ಳಾರಿ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡ ರೆಡ್ಡಿ ಬ್ರದರ್ಸ್‌ & ಟೀಮ್‌: ಗಣಿ ಸಾಮ್ರಾಜ್ಯದ ಮಹಾಪತನ

ಬಳ್ಳಾರಿ, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಘಾತಕಾರಿ ಫಲಿತಾಂಶ ಹೊರಬಂದಿದೆ. ಪ್ರಮುಖವಾಗಿ ಬಿಜೆಪಿಗೆ ಭಾರೀ ಹಿನ್ನೆಡೆಯಾಗಿದೆ. ಹಿಂದೊಮ್ಮೆ ಬಳ್ಳಾರಿಯಲ್ಲಿ ಬಿಜೆಪಿಯ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಯಶಸ್ವಿಯಾಗಿದ್ದ ರೆಡ್ಡಿ ಬ್ರದರ್ಸ್‌ & ಟೀಮ್‌ ಹೀನಾಯವಾಗಿ ಸೋತಿದೆ. ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ರೆಡ್ಡಿ ಬ್ರದರ್ಸ್‌ & ಟೀಮ್‌ಗೆ ನಷ್ಟವಾಗಲಿದೆ.

 ballari election results

2008 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಅವಿಭಜಿತ ಬಳ್ಳಾರಿ ಜಿಲ್ಲೆಯ ಒಂಬತ್ತು ಸ್ಥಾನಗಳಲ್ಲಿ 8 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಳ್ಳಾರಿಯ ಎಲ್ಲಾ ಐದು ಸ್ಥಾನಗಳನ್ನು ಮತ್ತು ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಯಲ್ಲಿ ಎರಡು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಬಿಜೆಪಿಗೆ ಕೇವಲ ಒಂದು ಸ್ಥಾನ ಮಾತ್ರ ಸಿಕ್ಕಿದೆ.

ಬಳ್ಳಾರಿ ಜಿಲ್ಲೆ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ 1999ರ ಲೋಕಸಭೆ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸಿದ್ದರು. ನಂತರ ರೆಡ್ಡಿ ಸಹೋದರರು ಜಿಲ್ಲೆಯಲ್ಲಿ ಪ್ರಬಲರಾದರು, ಇದು 2008 ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡಿತು.

ಗಣಿಗಾರಿಕೆಯು ಪ್ರವರ್ಧಮಾನಕ್ಕೆ ಬರುತ್ತಿತ್ತು ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಸಹೋದರರಾದ ಸೋಮಶೇಖರ್ ರೆಡ್ಡಿ ಮತ್ತು ಕರುಣಾಕರ್ ರೆಡ್ಡಿ ಮತ್ತು ನಿಕಟವರ್ತಿ ಬಿ ಶ್ರೀರಾಮುಲು ಅವರೊಂದಿಗೆ ಪಕ್ಷವನ್ನು ಮತ್ತು ತಮ್ಮದೇ ಆದ ವರ್ಚಸ್ಸನ್ನು ಬಲಪಡಿಸಿದರು.

 ballari election results

ಇದರ ಫಲವಾಗಿ 2008ರ ಚುನಾವಣೆಯಲ್ಲಿ ಜಿಲ್ಲೆಯ ಒಂಬತ್ತು ಸ್ಥಾನಗಳ ಪೈಕಿ ಎಂಟರಲ್ಲಿ ಬಿಜೆಪಿ ಗೆದ್ದು ಕಾಂಗ್ರೆಸ್‌ಗೆ ಒಂದು ಸ್ಥಾನ ಮಾತ್ರ ಉಳಿದಿತ್ತು. 2013ರ ಚುನಾವಣೆಯಲ್ಲಿ ರಾಜಕೀಯ ಸಮೀಕರಣವೇ ಬದಲಾಯಿತು. ಜನಾರ್ದನರೆಡ್ಡಿ ಜೈಲಿಗೆ ಹೋದರು. ಬಿಎಸ್ ಯಡಿಯೂರಪ್ಪ ಮತ್ತು ಬಿ ಶ್ರೀರಾಮುಲು ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸಿದರು. ಈ ಎಲ್ಲ ಅಂಶಗಳು ಬಳ್ಳಾರಿಯಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸಿದವು.

2013ರ ಚುನಾವಣೆಯಲ್ಲಿ ಒಂಬತ್ತು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನ ಸಂಖ್ಯೆಯನ್ನು ಸುಧಾರಿಸಿಕೊಂಡಿತು. ಬಿಎಸ್‌ಆರ್‌ ಕಾಂಗ್ರೆಸ್‌ ಎರಡು, ಬಿಜೆಪಿ ಮತ್ತು ಜೆಡಿಎಸ್‌ಗೆ ತಲಾ ಒಂದು ಸ್ಥಾನಗಳಲ್ಲಿ ಗೆದ್ದವು.

2018 ರ ಚುನಾವಣೆಯಲ್ಲಿ, ಎಲ್ಲಾ ಅತೃಪ್ತ ನಾಯಕರು ಮತ್ತೆ ಬಿಜೆಪಿಗೆ ಬಂದರು. ಇದು ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಐದು ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿತು. ನಂತರ ಜಿಲ್ಲೆ ಇಬ್ಭಾಗವಾದಾಗ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ತಲಾ ಐದು ಸ್ಥಾನಗಳು ಬಂದವು.

 ballari election results

ಆದರೆ, ಐದು ವರ್ಷಗಳ ಅವಧಿಯಲ್ಲಿ ಎಲ್ಲವೂ ಬದಲಾಗಿದೆ. ಇದೀಗ ಬಳ್ಳಾರಿಯ ಐದೂ ಹಾಗೂ ವಿಜಯನಗರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದೆರಡು ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥ ವಶಪಡಿಸಿಕೊಂಡಿದ್ದಾರೆ.

ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ಗಾಲಿ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಹಾಗೂ ಬಿ ಶ್ರೀರಾಮುಲು ಸೋತಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಸ್ಪರ್ಧಿಸಿದ್ದ ಗಾಲಿ ಜನಾರ್ದನರೆಡ್ಡಿ ಮಾತ್ರ ಗೆದ್ದಿದ್ದಾರೆ. ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿರುವುದರಿಂದ ರೆಡ್ಡಿಗಳ ಗತವೈಭವ ಮರುಕಳಿಸುವ ಸಾಧ್ಯತೆಗಳು ಕಮರಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+