ಬಳ್ಳಾರಿಯಲ್ಲಿ ತಗ್ಗುತ್ತಿರುವ ರೆಡ್ಡಿ ಬ್ರದರ್ಸ್ ಪ್ರಾಬಲ್ಯ: ಶರಣರ ವಚನದೊಂದಿಗೆ ಕಾಂಗ್ರೆಸ್ ಲೇವಡಿ
ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ದಿನದ ಹಿಂದೆ ಕೆಪಿಸಿಸಿ ಅಧ್ಯಕ್ಷರನ್ನು ರೌಡಿ ಕೊತ್ವಾಲನ ಶಿಷ್ಯ ಎಂದು ಬಿಜೆಪಿ ಲೇವಡಿ ಮಾಡಿತ್ತು.
ಕಾಂಗ್ರೆಸ್ ಯುವ ಮೋರ್ಚಾ ಅಧ್ಯಕ್ಷ ಸ್ಥಾನದ ಗೊಂದಲದ ಬಗ್ಗೆ ಬಿಜೆಪಿ ಟ್ವೀಟ್ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಮೊದಲು ನಿಮ್ಮ ಮನೆಯನ್ನು ಸರಿಯಾಗಿ ಇಟ್ಟುಕೊಳ್ಳಿ ಎಂದು ಲೇವಡಿ ಮಾಡಿದೆ.
ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊಹಮ್ಮದ್ ನಳಪಾಡ್ ಅತಿಹೆಚ್ಚು ಮತಗಳಿಸಿದ್ದರೂ, ಎರಡನೇ ಸ್ಥಾನ ಪಡೆದುಕೊಂಡಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಈ ವಿಚಾರದ ಬಗ್ಗೆ ಬಿಜೆಪಿ ಟ್ವೀಟ್ ಮಾಡಿತ್ತು.
ಇನ್ನು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಸಚಿವ ಆನಂದ್ ಸಿಂಗ್ ಅವರ ಪ್ರಾಬಲ್ಯ ಹೆಚ್ಚುತ್ತಿದ್ದು, ರೆಡ್ಡಿ ಬ್ರದರ್ಸ್ ಹವಾ ಕಮ್ಮಿಯಾಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಘಟಕ ಲೇವಡಿ ಮಾಡಿದೆ.

ಬಳ್ಳಾರಿಯಲ್ಲಿ ಆನಂದ್ ಸಿಂಗ್ ಪ್ರಾಬಲ್ಯ
ಬಳ್ಳಾರಿಯಲ್ಲಿ ಆನಂದ್ ಸಿಂಗ್ ಪ್ರಾಬಲ್ಯದ ಬಗ್ಗೆ ಕಾಂಗ್ರೆಸ್ ಮಾಡಿದ ಟ್ವೀಟ್ ಹೀಗಿದೆ, "ತನ್ನ ಮನೆಯೊಳಗಣ ಕಿಚ್ಚು ತನ್ನ ಮನೆಯ ಸುಡುವುದಲ್ಲದೆ ನೆರೆಮನೆಯ ಸುಡುವುದೆ ಕೂಡಲಸಂಗಮದೇವಾ. ಶರಣರ ಈ ಮಾತಿನಂತೆ, ಸಮನ್ವಯತೆ ಇಲ್ಲದ ಈ ಸರ್ಕಾರದೊಳಗಿನ ಕಿಚ್ಚು ರಾಜ್ಯದ ಅಭಿವೃದ್ಧಿ, ಹಿತಕ್ಕೆ ಮಾರಕವಾಗಿ ಪರಿಣಮಿಸಿದೆ. @BJP4Karnataka ಸರ್ಕಾರ ಭ್ರಷ್ಟಾಚಾರ, ಪ್ರತಿಷ್ಠೆ, ಅಧಿಕಾರದ ಕಿತ್ತಾಟದಲ್ಲಿ ಕಾಲ ಕಳೆಯುತ್ತಾ ರಾಜ್ಯದ ಹಿತ ಮರೆತಿದೆ".

ಸಿದ್ದರಾಮಯ್ಯ ಮತ್ತು ಡಿಕೆಶಿ ಬಣ
ಕೆಪಿಸಿಸಿ ಯುವ ಅಧ್ಯಕ್ಷ ಸ್ಥಾನದ ಬಗ್ಗೆ ಬಿಜೆಪಿ ಈ ರೀತಿ ಟ್ವೀಟ್ ಮಾಡಿತ್ತು, "ಸೋತವರನ್ನು ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬಾರದು - @siddaramaiah ಬಣ ಅತೀ ಹೆಚ್ಚು ಮತ ಪಡೆದವರನ್ನು ಸ್ಥಾನಮಾನ ನೀಡದೇ ದೂರವಿರಿಸುವುದು ಸರಿಯಲ್ಲ - @DKShivakumar ಬಣ @INCKarnataka, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರಿಗಾಗಿಯೇ ಪ್ರತ್ಯೇಕ ಕಾರ್ಯಾಧ್ಯಕ್ಷ ಸ್ಥಾನ ಸೃಷ್ಟಿಸಿ. ಏಕೆಂದರೆ ನಿಮ್ಮಲ್ಲಿರುವವರೆಲ್ಲರವರೇ!".

ಬಿಜೆಪಿಯ ವ್ಯಂಗ್ಯ
ಬಿಜೆಪಿಯ ವ್ಯಂಗ್ಯಕ್ಕೆ ಕೆಪಿಸಿಸಿ ಕೌಂಟರ್ ಕೊಟ್ಟಿದ್ದು ಹೀಗೆ, "@BJP4Karnataka ಯತ್ನಾಳ್, ಸಂತೋಷ್, ಸುನಿಲ್ ಕುಮಾರ್, ಅತೃಪ್ತರು, ಸಂತೃಪ್ತರು ಅಂತೆಲ್ಲ ಬಣಗಳಾಗಿ ನಿಮ್ಮೊಳಗಿನ ಬೆಂಕಿ ನಿಮ್ಮನ್ನಲ್ಲದೆ ರಾಜ್ಯವನ್ನೂ ಸುಡುತ್ತಿದೆ. ನಮ್ಮ ಪಕ್ಷದ ಬಗ್ಗೆ ಚಿಂತಿಸುವುದ ಬಿಟ್ಟು, ಅಡಳಿತದತ್ತ ಗಮನಹರಿಸಿದರೆ ರಾಜ್ಯಕ್ಕೆ ಕ್ಷೇಮ. ಅಂದಂಗೆ ನಿಮಗೆ "ಬ್ಲೂಬಾಯ್ಸ್ ಮೋರ್ಚಾ" ಎನ್ನುವುದೊಂದು ಅಗತ್ಯವಿದೆ, ಚಿಂತಿಸಿ!".
|
ರೌಡಿ ಕೊತ್ವಾಲನ ಶಿಷ್ಯನಿಗೆ ಕೆಪಿಸಿಸಿ ಪಟ್ಟ
"ರೌಡಿ ಕೊತ್ವಾಲನ ಶಿಷ್ಯನಿಗೆ @INCKarnataka ಪಟ್ಟ. ಸ್ವತಃ ರೌಡಿ ಆಗಿರುವವರಿಗೆ @IYCKarnataka ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ. ಹೆಚ್ಚು ಮತ ಪಡೆದರೂ ಆತನಿಗೆ ಸೋಲು, ಈಗ ಅದೇ ರೌಡಿ ನಾಯಕನಿಗೆ ಕಾರ್ಯಾಧ್ಯಕ್ಷ ಎಂಬ ಪಟ್ಟ ಕಟ್ಟಲು ಉತ್ಸಾಹ. ಕಾಂಗ್ರೆಸ್ ಪಕ್ಷದವರು ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದ್ದಾರೆ?" ಎಂದು ಬಿಜೆಪಿ ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications