ಗಣರಾಜ್ಯೋತ್ಸವ ಸ್ತಬ್ಧಚಿತ್ರ ಮೆರವಣಿಗೆ: ರಾಜಪಥ್ನಲ್ಲಿ ವಿಜಯನಗರ ವೈಭವ
ಕರ್ನಾಟಕ, ಜನವರಿ 26: ಈ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಪ್ರದರ್ಶನಗೊಂಡಿತು.
ನವದೆಹಲಿಯ ರಾಜಪಥ್ ನಲ್ಲಿ ನಡೆದ ಮೆರವಣಿಗೆಯಲ್ಲಿ ಕರ್ನಾಟಕದ ನೂತನ ಜಿಲ್ಲೆಯಾದ ವಿಜಯನಗರದಿಂದ ವಿಜಯನಗರ ಸಾಮ್ರಾಜ್ಯದ ಇತಿಹಾಸವುಳ್ಳ ಚಿತ್ರ ಭಾಗವಹಿಸಿತ್ತು.
ಹಂಪಿಯ ಕೇಂದ್ರ ಬಿಂದು ಎನಿಸಿರುವ ಉಗ್ರ ನರಸಿಂಹ, ಭಗವಾನ್ ಹನುಮನ ಜನ್ಮ ಸ್ಥಳ ಎಂದು ಹೇಳಲಾದ ಅಂಜನಾದ್ರಿ ಬೆಟ್ಟ, ವಿಜಯನಗರ ಸಾಮ್ರಾಜ್ಯದ ಸರ್ವಶ್ರೇಷ್ಠ ಸಾಮ್ರಾಟ ಶ್ರೀ ಕೃಷ್ಣದೇವರಾಯರ 1509ರಲ್ಲಿ ನಡೆದ ಪಟ್ಟಾಭಿಷೇಕ ಸಮಾರಂಭ ಹಾಗೂ ಹಜಾರರಾಮ ದೇವಾಲಯದ ಭಿತ್ತಿಚಿತ್ರಗಳನ್ನು ಈ ಸ್ತಬ್ಧಚಿತ್ರವು ಬಿಂಬಿಸಿತು.

ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಪ್ರತಿನಿಧಿಸುವ ರಾಜ್ಯದ ಹೆಸರನ್ನು ಹಿಂದಿಯಲ್ಲಿ ಬಳಸಲಾಗಿತ್ತು. ಟ್ಯಾಬ್ಲೋ ಕರ್ನಾಟಕ ಎಂದು ಹಿಂದಿಯಲ್ಲಿ ಬರೆದಿದ್ದರೆ, ಟ್ಯಾಬ್ಲೋ ಪಕ್ಕದಲ್ಲಿ ಕರ್ನಾಟಕ ಎಂದು ಕನ್ನಡದಲ್ಲಿ ಬರೆಯಲಾಗಿತ್ತು.

72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಒಟ್ಟಿನಲ್ಲಿ ಸರಳವಾಗಿ ಹಾಗೂ ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ನವದೆಹಲಿಯ ರಾಜಪಥ್ ನಲ್ಲಿ ವಿಜಯನಗರ ವೈಭವದ ಇತಿಹಾಸವನ್ನು ಹೇಳುವ ಸ್ತಬ್ಧಚಿತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ವಿವಿಧ ಗಣ್ಯರು ಕಣ್ತುಂಬಿಕೊಂಡರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications