ಗಣರಾಜ್ಯೋತ್ಸವ ದಿನಾಚರಣೆ 2021: ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆ
ಬಳ್ಳಾರಿ, ಜನವರಿ 23: ಈ ಬಾರಿಯ ನವದೆಹಲಿ ಗಣರಾಜ್ಯೋತ್ಸವ ದಿನಾಚರಣೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗೊಂಡಿದೆ.
ನವದೆಹಲಿಯ ರಾಜಪಥದಲ್ಲಿ ನಡೆಯುವ ಮೆರವಣಿಗೆಯಲ್ಲಿ ಕರ್ನಾಟಕದ ನೂತನ ಜಿಲ್ಲೆಯಾದ ವಿಜಯನಗರ ಸಾಮ್ರಾಜ್ಯದ ಇತಿಹಾಸವುಳ್ಳ ಚಿತ್ರ ಭಾಗವಹಿಸಲಿದೆ.
ದಖ್ಖನ್ ಪ್ರಸ್ಥಭೂಮಿಯ ತುಂಗಭದ್ರಾ ನದಿಯ ದಡದಲ್ಲಿ ಪ್ರವರ್ಧಮಾನಕ್ಕೆ ಬಂದ ವಿಜಯನಗರ ಸಾಮ್ರಾಜ್ಯದ ರಾಜಧಾನಿ ವಿಜಯನಗರ. ಸಂಗಮ ರಾಜವಂಶದ ಹರಿಹರ-1 ಮತ್ತು ಬುಕ್ಕರಾಯ-1 ಇಬ್ಬರು ಸೋದರರು ಈ ಸಾಮ್ರಾಜ್ಯವನ್ನು ಸ್ಥಾಪಿಸಿದರು. ಸಂಗಮ ವಂಶದವರು ತಮ್ಮ ಆಡಳಿತದ ಉತ್ತುಂಗದ ಅವಧಿಯಲ್ಲಿ ದಕ್ಷಿಣ ಭಾರತದ ಬಹುತೇಕ ಕುಟುಂಬಗಳು ಹಾಗೂ ಡೆಕ್ಕನ್ ಪ್ರಾಂತ್ಯದ ಸುಲ್ತಾನರನ್ನು ತಮ್ಮ ಅಧೀನಕ್ಕೆ ತೆಗೆದುಕೊಂಡಿದ್ದರು.

ವಿಜಯನಗರ ಇತಿಹಾಸ
ದಕ್ಷಿಣ ಭಾರತದ ಎಲ್ಲೆಡೆ ಬಹುತೇಕ ಸ್ಮಾರಕಗಳಿರುವ, ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವತಿಯಿಂದ ವಿಶ್ವ ಪರಂಪರೆಯ ಸ್ಥಳ ಎಂದು ಗುರುತಿಸಲ್ಪಟ್ಟಿರುವ, ಅತ್ಯಂತ ಪ್ರಸಿದ್ಧವಾದ ಹಾಗೂ ಇದೀಗ ಅವಶೇಷಗಳ ತಾಣವಾಗಿರುವ ಹಂಪಿ ಈ ಸಾಮ್ರಾಜ್ಯದ ಪರಂಪರೆಯಾಗಿದೆ.
ಐರೋಪ್ಯ ಹಾಗೂ ಪರ್ಷಿಯಾ ಪ್ರವಾಸಿಗರ ಕಥನಗಳು ಹಾಗೂ ಪುರಾತತ್ವ ಉತ್ಖನನಗಳು ವಿಜಯನಗರ ಸಾಮ್ರಾಜ್ಯದ ಶಕ್ತಿ ಮತ್ತು ಶ್ರೀಮಂತಿಕೆಯನ್ನು ಬಹಿರಂಗಪಡಿಸುತ್ತವೆ.

ಪರ್ಷಿಯಾ ಮತ್ತು ಪೋರ್ಚುಗಲ್ನಿಂದ ವ್ಯಾಪಾರಸ್ಥರನ್ನು ಆಕರ್ಷಿಸುತ್ತಿದ್ದ ಹಂಪಿ-ವಿಜಯನಗರವು, 1500ನೇ ಇಸವಿಯಲ್ಲಿ ಬೀಜಿಂಗ್ನ ನಂತರ, ವಿಶ್ವದ ಅತೀ ದೊಡ್ಡ ಹಾಗೂ ಭಾರತದ ಅತ್ಯಂತ ಸಿರಿವಂತ ಮಧ್ಯಕಾಲೀನ ಯುಗದ ನಗರಿಯಾಗಿತ್ತು.
ಹಂಪಿಯ ಕೇಂದ್ರ ಬಿಂದು ಎನಿಸಿರುವ ಉಗ್ರ ನರಸಿಂಹ, ಭಗವಾನ್ ಹನುಮನ ಜನ್ಮ ಸ್ಥಳ ಎಂದು ಹೇಳಲಾದ ಅಂಜನಾದ್ರಿ ಬೆಟ್ಟ, ವಿಜಯನಗರ ಸಾಮ್ರಾಜ್ಯದ ಸರ್ವಶ್ರೇಷ್ಠ ಸಾಮ್ರಾಟ ಶ್ರೀ ಕೃಷ್ಣದೇವರಾಯರ 1509ರಲ್ಲಿ ನಡೆದ ಪಟ್ಟಾಭಿಷೇಕ ಸಮಾರಂಭ ಹಾಗೂ ಹಜಾರರಾಮ ದೇವಾಲಯದ ಭಿತ್ತಿಚಿತ್ರಗಳನ್ನು ಈ ಸ್ತಬ್ದಚಿತ್ರವು ಬಿಂಬಿಸುತ್ತವೆ.
ಪ್ರಾಸಂಗಿಕವೋ ಎಂಬಂತೆ ಬಳ್ಳಾರಿ ಜಿಲ್ಲೆಯಿಂದ ಹೊರಹೊಮ್ಮಿದ ವಿಜಯನಗರವು ರಾಜ್ಯದ 31ನೇ ಜಿಲ್ಲೆಯಾಗಿ ಡಿಸೆಂಬರ್ 2020 ರಲ್ಲಿ ಕರ್ನಾಟಕ ಸರ್ಕಾರದಿಂದ ಅಧಿಸೂಚಿಸಲ್ಪಟ್ಟಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications