ಒಂದೇ ಒಂದು ಕರೆಗೆ ಬಂತು ಔಷಧಿ: ಉಳಿಯಿತು ಬಳ್ಳಾರಿ ಕ್ಯಾನ್ಸರ್ ರೋಗಿ ಜೀವ
ಬಳ್ಳಾರಿ, ಏಪ್ರಿಲ್ 29: ಬಳ್ಳಾರಿಯ ತುಂಬೆಲ್ಲಾ ಹುಡುಕಾಡಿದರೂ ಸಿಗದ ಔಷಧಿಯೊಂದು ಕ್ಯಾನ್ಸರ್ ರೋಗಿಯೊಬ್ಬರಿಗೆ ಬರೀ ಒಂದು ಫೋನ್ ಕರೆಯ ಮೂಲಕ ಸಕಾಲದಲ್ಲಿ ದೊರೆತು ಅತ್ಯಮೂಲ್ಯ ಜೀವ ಉಳಿಸಿದೆ.
Recommended Video
ಹೌದು, ಈ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಅದ್ಹೇಗೆ ಇವರಿಗೆ ಔಷಧಿ ದೊರಕಿತು ಅಂತ ನಿಮ್ಮ ಪ್ರಶ್ನೆಯಾದರೆ, ಬೆಂಗಳೂರು ಉತ್ತರ ಪೂರ್ವ ವಲಯದ ಕಚೇರಿಯಲ್ಲಿ ಸ್ಥಾಪಿಸಿದ ಸಹಾಯವಾಣಿಯೇ ಉತ್ತರವಾಗಿದೆ. ಈ ಸಹಾಯವಾಣಿಗೆ ನಿನ್ನೆ ಸಂಜೆ ಕರೆ ಮಾಡಿದ ಬಳ್ಳಾರಿಯ ಕ್ಯಾನ್ಸರ್ ರೋಗಿಯೊಬ್ಬರಿಗೆ ಇಂದು ಮಧ್ಯಾಹ್ನದೊಳಗೆ ಬೆಂಗಳೂರಿನಿಂದ ಔಷಧಿ ತಲುಪಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ಔಷಧಿ
ಬೆಂಗಳೂರಿನಿಂದ ಬಳ್ಳಾರಿಗೆ ತಮ್ಮ ಮೋಟಾರ್ ಸೈಕಲ್ಗಳ ಮೂಲಕ ಆಗಮಿಸಿದ ಬೆಂಗಳೂರು ರೈಡ್ಸ್ ರಿಪಬ್ಲಿಕ್ ಮೋಟಾರ್ ಸೈಕಲ್ ಕ್ಲಬ್ನ ಮೋಹನ್ ಮಲ್ಲಪ್ಪ, ಶ್ರೀಧರ್ ಮತ್ತು ಮೋಹನ್ ಕೃಷ್ಣ ಅವರು ಬಳ್ಳಾರಿಯ ಕ್ಯಾನ್ಸರ್ ರೋಗಿ ಮನೆಗೆ ನೇರವಾಗಿ ತೆರಳಿ ಅತ್ಯಮೂಲ್ಯ ಜೀವ ಉಳಿಸುವ ಔಷಧಿ ನೀಡಿ ಧನ್ಯತೆ ಮೆರೆದಿದ್ದಾರೆ. ಔಷಧಿ ಸ್ವೀಕರಿಸಿದ ಕ್ಯಾನ್ಸರ್ ರೋಗಿ, ಜೀವಕ್ಕೆ ಅಗತ್ಯವಿದ್ದ ಔಷಧಿ ಒದಗಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ತಂಡವನ್ನು ಶ್ಲಾಘಿಸಿದ ಐಜಿಪಿ
ನಂತರ ಇಲ್ಲಿನ ಐಜಿಪಿ ನಂಜುಂಡಸ್ವಾಮಿ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ಮರಳಿದ್ದಾರೆ. ಐಜಿಪಿ ನಂಜುಂಡಸ್ವಾಮಿ ಅವರು ಸಹ ರೈಡ್ಸ್ ರಿಪಬ್ಲಿಕ್ ಮೋಟಾರ್ಸೈಕಲ್ ಕ್ಲಬ್ ಕರ್ನಾಟಕ ಪೊಲೀಸ್ ತಂಡದೊಂದಿಗೆ ಮಾಡುತ್ತಿರುವ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸೇವೆಗೆ ಜೊತೆಯಾದ ತಂಡ
ಬೆಂಗಳೂರು ಉತ್ತರ ಪೂರ್ವ ವಲಯದ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, (ಸಹಾಯವಾಣಿ ಸಂಖ್ಯೆ: 080-49778888, 08049777888, 08042240048) ಈ ಸಹಾಯವಾಣಿಗೆ ಕ್ಯಾನ್ಸರ್ ರೋಗಿ ತಮ್ಮ ಔಷಧಿಯ ಅಗತ್ಯತೆ ಕುರಿತು ಕೇಳಿಕೊಂಡಿದ್ದರು. ಕರ್ನಾಟಕ ಪೊಲೀಸ್ ಹಾಗೂ ರೈಡ್ಸ್ ರಿಪಬ್ಲಿಕ್ ಮೋಟಾರ್ ಸೈಕಲ್ ಕ್ಲಬ್ ಬೆಂಗಳೂರು ಸೇವೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡಿದೆ.

ಸಕಾಲಕ್ಕೆ ಔಷಧಿ ತಲುಪಿಸುವ ಕಾರ್ಯ
ಸಹಾಯವಾಣಿಗೆ ಕರೆ ಬಂದಾಗ ರೋಗಿಗಳಿಗೆ ಅತ್ಯವಶ್ಯಕವಿರುವ ಔಷಧಿ ಹೆಸರು ಬರೆದುಕೊಂಡು, ನಂತರ ತಮ್ಮಲ್ಲಿಯೇ ಇರುವ ವೈದ್ಯರ ತಂಡವೊಂದಕ್ಕೆ ಪರಿಶೀಲನೆಗೆ ಕಳುಹಿಸಲಾಗುತ್ತದೆ. ಈ ಔಷಧಿ ಬೆಂಗಳೂರು ಹೊರತುಪಡಿಸಿ ಬೇರೆಡೆ ಸಿಗುವುದಿಲ್ಲ ಎಂದು ವೈದ್ಯರ ತಂಡ ತಿಳಿಸಿದರೆ ರೈಡ್ಸ್ ರಿಪಬ್ಲಿಕ್ ಮೋಟಾರ್ ಸೈಕಲ್ ಕ್ಲಬ್ ಸದಸ್ಯರು ಸಂಬಂಧಿಸಿದ ರೋಗಿಯ ವಿಳಾಸಕ್ಕೆ ಔಷಧಿಯನ್ನು ಸಕಾಲದಲ್ಲಿ ತಲುಪಿಸುತ್ತಾರೆ ಎಂದು ಬೆಂಗಳೂರು ಉತ್ತರ ಪೂರ್ವ ವಲಯದ ಡಿಸಿಪಿ ಭೀಮಾಶಂಕರ ಗುಳೇದ ತಿಳಿಸಿದರು.
ಅದರಂತೆ ಬಳ್ಳಾರಿಯ ಕ್ಯಾನ್ಸರ್ ರೋಗಿ ಕೂಡ ನಮ್ಮ ಸಹಾಯವಾಣಿಗೆ ಕರೆ ಮಾಡಿದ್ದರು. ಅದನ್ನು ಪರಿಶೀಲಿಸಿ ಔಷಧಿಯನ್ನು ಕಳುಹಿಸಿಕೊಡಲಾಗಿದ್ದು, ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications