ಮುಲಾಲಿ ಕೈಯ್ಯಲ್ಲಿ ಮತ್ತೋರ್ವ ರಾಜಕಾರಣಿಯ ಸಿಡಿ: ಅಪರಿಚಿತರಿಂದ ಬೆದರಿಕೆ
ಬಳ್ಳಾರಿ, ಮೇ. 06 : ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಎಚ್.ವೈ. ಮೇಟಿ ಸಿಡಿ ಸುದ್ದಿ ಜನರಿಂದ ಮರೆ ಆಗುವ ಮುನ್ನವೇ ಮತ್ತೋರ್ವ ರಾಜಕಾರಣಿಯ ಸಿಡಿ ಆರ್ ಟಿಐ ಕಾರ್ಯಕರ್ತ, ಅಣ್ಣಾ ಫೌಂಡೇಶನ್ ನ ಸಂಚಾಲಕ ರಾಜಶೇಖರ ಮುಲಾಲಿ ಅವರ ಮನೆ ಸೇರಿದೆ.
ಇಂದಿಲ್ಲ ನಾಳೆ, ಅದು ಮಾಧ್ಯಮಗಳಲ್ಲಿ ಫ್ಲಾಶ್ ನ್ಯೂಸ್, ಬ್ರೇಕಿಂಗ್ ನ್ಯೂಸ್ ಆಗುವ ಸಾಧ್ಯತೆಗಳಿವೆ. ಇದನ್ನು ತಿಳಿದವರು ಮುಲಾಲಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಜೀವ ಬೆದರಿಕೆ ಇರುವುದಾಗಿ ತಿಳಿಸಿದ್ದಾರೆ
ಇದನ್ನು ಅರಿತ ಮುಲಾಲಿ ಅವರು, ಕುಟುಂಬದ ಸದಸ್ಯರ ಮೇಲೆ ಒಡ್ಡಿರುವ ಬೆದರಿಕೆ, ಯಾವುದೇ ಕ್ಷಣದಲ್ಲಾದರೂ ನಡೆಯಬಹುದಾದ ದಾಳಿಯ ಕುರಿತು ಸೂಕ್ತ ಭದ್ರತೆ ಒದಗಿಸಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ರಾಜಶೇಖರ ಮುಲಾಲಿ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನನಲ್ಲಿ ವಿವರ ಹೀಗಿದೆ...ಗುರುವಾರ ಅನಾಮಧೇಯ ಕೈ ಬರಹದ ಪತ್ರದ ಜೊತೆ ಓರ್ವ ರಾಜಕಾರಣಿಯ ಅನೈತಿಕ ಸಂಬಂಧದ ಸಿಡಿ ಪ್ಯಾಕೆಟ್ ಅನ್ನು ಅಪರಿಚಿತರು ನಮ್ಮ ಮನೆಯ ಕಾಂಪೌಂಡಿನೊಳಗೆ ಎಸೆದಿದ್ದಾರೆ.
ಅದರಲ್ಲಿ ನನ್ನ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಜೀವಬೆದರಿಕೆ ಹಾಕಿರುವ ಕೈಬರಹದ ಪತ್ರವನ್ನು ಇರಿಸಲಾಗಿದೆ.
ನಿವೃತ್ತ ಸೈನಿಕರ ತಂಡದ ಜೊತೆಯಲ್ಲಿ ಮೇ 03 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ನಮ್ಮ ಮನೆಯಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣೆಯ ವಿಷಯದ ಕುರಿತು ಔಪಚಾರಿಕವಾಗಿ ಚರ್ಚೆ ಮಾಡುತ್ತಿದ್ದಾಗ ಏಕಾಏಕಿ ಓರ್ವ ಅಪರಿಚಿತ ಬೈಕ್ ನಲ್ಲಿ ಏಕಾಏಕಿ ನಮ್ಮ ಮನೆಗೆ ಬಂದು, ಪ್ಯಾಕ್ ಮಾಡಿದ ಕವರ್ ಅನ್ನು ಮನೆಯ ಗೇಟ್ ಮುಂದೆ ಬಿಸಾಕಿ ಭಯ, ಆತಂಕದಿಂದ ಪರಾರಿಯಾದ ಎಂದು ತಿಳಿಸಿದ್ದಾರೆ.
ಹಾಗೆಯೇ ಏನಾದರೂ ಈ ಪತ್ರವನ್ನು ಪೊಲೀಸರಿಗೆ ಕೊಟ್ಟರೆ ಕೆಲವೇ ದಿನಗಳಲ್ಲಿ ನಿನ್ನನ್ನು ಮುಗಿಸುತ್ತೇವೆ. ಇದರ ಮೇಲೆ ನಿನ್ನ ಇಷ್ಟ ಎಂದು ಬರೆದಿದ್ದರು.
ನನಗೆ ಮತ್ತು ಕುಟುಂಬದ ಸದಸ್ಯರಿಗೆ ಸೂಕ್ತ ಭದ್ರತೆ ತುರ್ತಾಗಿ ನೀಡುವ ಮೂಲಕ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಹೋರಾಟ ನಡೆಸುವ ನನ್ನಂಥವರ ಬದುಕಿಗೆ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮುಲಾಲಿ ವಿನಂತಿ ಮಾಡಿಕೊಂಡಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications