ಬಿಜೆಪಿ ಸೇರಲಿದ್ದಾರೆ ರಾಜಶೇಖರ್ ಮುಲಾಲಿ?
ಬಳ್ಳಾರಿ, ಮೇ 01 : ಮಾಹಿತಿ ಹಕ್ಕು ಕಾರ್ಯಕರ್ತ ರಾಜಶೇಖರ್ ಮುಲಾಲಿ ಬಿಜೆಪಿ ಸೇರಲಿದ್ದಾರೆ?. ಎಚ್.ವೈ.ಮೇಟಿ ರಾಸಲೀಲೆ ಪ್ರಕರಣವನ್ನು ಬಯಲು ಮಾಡುವಲ್ಲಿ ಮುಲಾಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೇ 3ರಂದು ರಾಜಶೇಖರ್ ಮುಲಾಲಿ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಮೇ 3ರಂದು ಪ್ರಧಾನಿ ಮೋದಿ ಬಳ್ಳಾರಿಗೆ ಭೇಟಿ ನೀಡಲಿದ್ದು, ಸಮಾವೇಶ ಉದ್ದೇಶಿಸಿ ಮಾಡನಾಡಲಿದ್ದಾರೆ. ಅಂದು ಮುಲಾಲಿ ಬಿಜೆಪಿಗೆ ಸೇರಲಿದ್ದಾರೆ.
ಬಳ್ಳಾರಿಯ ಬಿಜೆಪಿ ನಾಯಕರು ರಾಜಶೇಖರ್ ಮುಲಾಲಿ ಜೊತೆ ಈಗಾಗಲೇ ಈ ಕುರಿತು ಮಾತುಕತೆ ನಡೆಸಿದ್ದಾರೆ. ಮುಲಾಲಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿಯೂ ಮಾಧ್ಯಮಗಳಲ್ಲಿ ಬಂದ ವರದಿ ಹಂಚಿಕೊಂಡಿದ್ದಾರೆ.
ಯಾರು ರಾಜಶೇಖರ್ ಮುಲಾಲಿ? : ರಾಜಶೇಖರ್ ಮೂಲತಃ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ನೀಲಗುಂದದವರು. ಎಂಬಿಎ ಪದವೀಧರರು. ಕಳೆದ ಮೂರು ದಶಕಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದಾರೆ. ಕೆಲವು ವರ್ಷಗಳ ಕಾಲ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡಿದ್ದಾರೆ.

ಅಣ್ಣಾ ಹಜಾರೆ ಅವರ ಬೆಂಬಲಿಗರಾದ ರಾಜಶೇಖರ್ ಮುಲಾಲಿ ಅವರು, ಜನಲೋಕಪಾಲ ಮಸೂದೆ ಜಾರಿ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಅಣ್ಣಾ ಹಜಾರೆ ನೇತೃತ್ವದ 'ಅಣ್ಣಾ ಸಮರ್ಥಕ್ ಗಾಂಧಿವಾದಿ ಸಂಘ'ದ ರಾಷ್ಟ್ರೀಯ ತಂಡಕ್ಕೆ ರಾಜ್ಯದ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ.
ಅಧಿಕಾರಿಗಳನ್ನು ಅಮಾನತು ಮಾಡಿಸಿದ್ದರು : ರಾಜಶೇಖರ್ ಮುಲಾಲಿ ಅವರು ಮಾಹಿತಿ ಹಕ್ಕು ಕಾರ್ಯಕರ್ತರು. ಒಮ್ಮೆ ಅವರು ಬೈಕ್ ನೋಂದಣಿಗೆ ಆರ್ಟಿಓ ಕಚೇರಿಗೆ ಹೋಗಿದ್ದರು. ಎಲ್ಲಾ ದಾಖಲೆಗಳು ಸರಿ ಇದ್ದರೂ ಅಧಿಕಾರಿಗಳು 3 ಸಾವಿರ ರೂ. ಲಂಚ ಕೇಳಿದ್ದರು.
ರಾಜಶೇಖರ್ ಮುಲಾಲಿ ಅವರು ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದರು. ಇಬ್ಬರು ಅಧಿಕಾರಿಗಳನ್ನು ದೂರಿನ ಅನ್ವಯ ಅಮಾನತು ಮಾಡಲಾಗಿತ್ತು. ಕೂಡ್ಲಗಿಯ ಮಾಜಿ ಡಿವೈಎಸ್ಪಿ ಅನುಮಪಾ ಶೆಣೈ ಅವರ ಹೋರಾಟಕ್ಕೆ ಅವರು ಬೆಂಬಲ ನೀಡಿದ್ದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications