ಬಳ್ಳಾರಿ ನಗರಾಭಿವೃದ್ಧಿಗೆ 25 ಕೋಟಿ ರೂ.ವಿಶೇಷ ಅನುದಾನ
ಬಳ್ಳಾರಿ, ಆ. 25: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 25ಕೋಟಿ ರೂ.ವಿಶೇಷ ಅನುದಾನ ನೀಡುವಂತೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರಿಗೆ ಮನವಿ ಮಾಡಿದ್ದಾರೆ.
Recommended Video
ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾದ ಬುಡಾ ಅಧ್ಯಕ್ಷ ದಮ್ಮೂರು ಅವರು ಬಳ್ಳಾರಿ ನಗರಕ್ಕೆ ಅಗತ್ಯವಿರುವ 25 ಉದ್ಯಾನವನಗಳನ್ನು 25 ಶುದ್ಧ ನೀರಿನ ಘಟಕಗಳನ್ನು 25 ಸ್ವಾಗತ ಫಲಕಗಳನ್ನು ಹಾಗೂ 25 ಬಸ್ ತಂಗುದಾಣಗಳನ್ನು ನಿರ್ಮಿಸಲು ವಿಶೇಷ ಅನುದಾನದಡಿಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರೂಪಾಯಿಗಳನ್ನು ನೀಡಬೇಕೆಂದು ಅವರು ಕೋರಿಕೊಂಡರು.ದಮ್ಮೂರು ಶೇಖರ್ ಅವರ ಮನವಿಯನ್ನು ಆಲಿಸಿದ ಸಚಿವ ಭೈರತಿ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರನ್ವಯ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರವು 1988 ರಿಂದ ಪ್ರಾರಂಭವಾಗಿ ತನ್ನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತದೆ. ಬಳ್ಳಾರಿ-ಸಂಡೂರು ಸ್ಥಳೀಯ ಯೋಜನಾ ಪ್ರದೇಶವು ಬಳ್ಳಾರಿ ತಾಲೂಕಿನ 17 ಗ್ರಾಮಗಳು ಹಾಗೂ ಸಂಡೂರು ತಾಲೂಕಿನ 27 ಗ್ರಾಮಗಳನ್ನೊಳಗೊಂಡಿರುತ್ತದೆ.

ಹೊಸಪೇಟೆ ಸ್ಥಳೀಯ ಯೋಜನಾ ಪ್ರದೇಶವು 38 ಗ್ರಾಮಗಳನ್ನೊಳಗೊಂಡಿರುತ್ತದೆ. ವಿಜಯನಗರ ಸ್ಥಳೀಯ ಯೋಜನಾ ಪ್ರದೇಶವು ಬಳ್ಳಾರಿ ತಾಲೂಕಿನ 6 ಗ್ರಾಮ, ಹೊಸಪೇಟೆ ತಾಲೂಕಿನ 9 ಗ್ರಾಮ ಹಾಗೂ ಸಂಡೂರು ತಾಲೂಕಿನ 28 ಗ್ರಾಮ ಒಟ್ಟು 43 ಗ್ರಾಮಗಳನ್ನೊಳಗೊಂಡಿರುತ್ತದೆ. ವಿಸ್ತೀರ್ಣವು 580.70 ಚ.ಕಿ.ಮೀ.
ಬಳ್ಳಾರಿ ವ್ಯಾಪ್ತಿಯ ಜಾನೆಕುಂಟೆ, ಕೊಳಗಲ್ಲು, ಬಳ್ಳಾರಿ ಕಸಬಾ, ಬಿ ಗೋನಾಳ್, ಸಂಗನಕಲ್ಲು, ಹಲಕುಂದಿ, ಬೆಳಗಲ್ಲು, ಹೊನ್ನಳ್ಳಿ, ಪತ್ರ ಬೂದಿಹಾಳ್, ಬಿಸಲಹಳ್ಳಿ, ಬೇವಿನಹಳ್ಳಿ, ಮಿಂಚೇರಿ, ಆಲದಹಳ್ಳಿ, ಮುಂಡ್ರಿಗಿ, ಆಂದ್ರಾಳ್, ಹದ್ದಿನಗುಂಡು, ಕಕ್ಕಬೇವಿನಹಳ್ಳಿ, ಸಂಜೀವರಾಯನಕೋಟೆ ಮುಂತಾದ 18 ಗ್ರಾಮಗಳು ಸೇರಿವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications