Get Updates
Get notified of breaking news, exclusive insights, and must-see stories!

Sandur By Election: ಸಂಡೂರು ಉಪ ಚುನಾವಣೆ ಮತ ಎಣಿಕೆ, ಎಸ್‌ಪಿ ಪರಿಶೀಲನೆ

ಬಳ್ಳಾರಿ, ನವೆಂಬರ್ 21: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನವೆಂಬರ್ 23ರಂದು ನಡೆಯಲಿದೆ. ಮತದಾನ ಸುಸೂತ್ರವಾಗಿ, ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, 6 ಅಭ್ಯರ್ಥಿಗಳ ಭವಿಷ್ಯ ಇವಿನಂನಲ್ಲಿ ಭದ್ರವಾಗಿದೆ. ಯಾರಿಗೆ ಗೆಲುವು ಎಂದು ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಟ್ಟಿಂಗ್‌ ಸಹ ನಡೆಯುತ್ತಿದೆ. 2023ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂಡೂರು ಕ್ಷೇತ್ರದಲ್ಲಿ ಜಯಗಳಿಸಿದ್ದರು.

ಸಂಡೂರು ಉಪ ಚುನಾವಣೆಯ ಇವಿಎಂಗಳನ್ನು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಕ್ಷೇತ್ರದ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನವೆಂಬರ್ 13ರ ಬುಧವಾರ ಮತದಾನ ನಡೆದಿದ್ದು, ಒಟ್ಟು ಶೇ 76.24 ರಷ್ಟು ಮತದಾನವಾಗಿತ್ತು.

Sandur By Election 2024 Counting On November 23 SP Inspects Preparations

ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಮತ ಎಣಿಕೆ ನಡೆಯಲಿದೆ. ಬಳ್ಳಾರಿ ಎಸ್‌ಪಿ ಶೋಭಾ ರಾಣಿ ವಿ. ಜೆ. ಅವರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಮತದಾನದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

8 ಗಂಟೆಗೆ ಮತ ಎಣಿಕೆ ಆರಂಭ: ಸಂಡೂರು ಉಪ ಚುನಾವಣೆ ಕಣದಲ್ಲಿ 6 ಅಭ್ಯರ್ಥಿಗಳಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನಿಂದ ಈ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ ಪ್ರಮುಖ ಅಭ್ಯರ್ಥಿಗಳು. ಉಳಿದಂತೆ ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ಕಣದಲ್ಲಿದ್ದಾರೆ.

ಮತ ಎಣಿಕೆಯು ನವೆಂಬರ್ 23ರ ಶನಿವಾರ ಬೆಳಗ್ಗೆ 8ರಿಂದ ಆರಂಭವಾಗಲಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಮತಯಂತ್ರಗಳನ್ನು ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ. ಮತಯಂತ್ರಗಳು ಇರುವ ಸ್ಟ್ರಾಂಗ್‌ ರೂಂ ಬಾಗಿಲಿಗೆ ಬೀಗ ಹಾಕಿ, ಮೊಹರು ಹಾಕಲಾಗಿದೆ. ಬಾಗಿಲನ್ನು ದಪ್ಪ ಹಲಗೆಯ ಮೂಲಕ ಸಂಪೂರ್ಣ ಮುಚ್ಚಿ ಸೀಲ್ ಮಾಡಲಾಗಿದೆ.

ಮತ ಎಣಿಕೆ ಕೇಂದ್ರ ಸುತ್ತಲೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ. ಉಪ ಚುನಾವಣೆ ಮತಎಣಿಕೆ ನಡೆಯುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 22ರ ಸಂಜೆ 6 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

ಉಪ ಚುನಾವಣೆಯ ಮತ ಎಣಿಕೆಯನ್ನು ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನವೆಂಬರ್ 22ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 22ರ ಸಂಜೆ 6 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+