ಸಂಡೂರು ಉಪ ಚುನಾವಣೆ: 7 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರ ಸಲ್ಲಿಕೆ
ಬಳ್ಳಾರಿ, ಅಕ್ಟೋಬರ್ 26: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. ತಿಳಿಸಿದ್ದಾರೆ.
ಸಂಡೂರು ಉಪ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್. ವೆಂಕಣ್ಣ, ಟಿ. ಎರ್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ. ಎಂ. ಮಾರುತಿ ಒಂದೊಂದು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ. ಅನ್ನಪೂರ್ಣ ಅವರು 4 ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು 4 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಜಿನಪ್ಪ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣಾ ವೀಕ್ಷಕರ ನೇಮಕ: ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಡಾ. ದಿವ್ಯಾ ಎಸ್ ಅಯ್ಯರ್ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಿಸಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆ ಮತ್ತು ನೀತಿ ಸಂಹಿತೆ ಉಲ್ಲಂಘನೆಗಳನ್ನು ಪರಿಶೀಲಿಸಲು ಡಾ. ದಿವ್ಯಾ ಎಸ್ ಅಯ್ಯರ್ ನೇಮಕ ಮಾಡಲಾಗಿದೆ. ಸಾಮಾನ್ಯ ವೀಕ್ಷಕರಾದ ಅವರು ಸಂಡೂರಿನ ಹೊಸಪೇಟೆ ರಸ್ತೆಯ ಸರ್ಕ್ಯೂಟ್ ಹೌಸ್ನ ಕೊಠಡಿ ಸಂಖ್ಯೆ 1 ರಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸಾರ್ವಜನಿಕರು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷದ ಸದಸ್ಯರು ಯಾವುದೇ ಚುನಾವಣಾ ಸಂಬಂಧಿಸಿದ ದೂರುಗಳಿದ್ದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 4 ರಿಂದ 5 ರವರೆಗೆ ನಿಗದಿತ ಸ್ಥಳ ಮತ್ತು ಸಮಯದಲ್ಲಿ ಸಾಮಾನ್ಯ ವೀಕ್ಷಕರನ್ನು ಭೇಟಿ ಮಾಡಬಹುದು ಅಥವಾ 9141142756 ಸಂಖ್ಯೆಗೆ ಕರೆ ಮಾಡಬಹುದು.
ಸಿಬ್ಬಂದಿಗಳು ರಜೆ ಮೇಲೆ ತೆರಳುವಂತಿಲ್ಲ: ಸಂಡೂರು ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿರುವುದರಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ತಿಳಿಸಲಾಗಿದೆ.
ಉಪಚುನಾವಣೆಯಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ಆ ಕ್ಷೇತ್ರದ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪೋಸ್ಟಲ್ ಬ್ಯಾಲೆಟ್ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆಯನ್ನು ನಡೆಸಿ, ಸೂಚನೆಗಳನ್ನು ನೀಡಲಾಗಿದೆ.
ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನದ ದಿನದಂದು ತಮ್ಮ ಕರ್ತವ್ಯದ ಕಾರಣದಿಂದಾಗಿ ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಈ ಅವಕಾಶ ಒದಗಿಸಲಾಗುತ್ತದೆ. ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ಜೆಸ್ಕಾಂ, ಬಿಎಸ್ಎನ್ಎಲ್, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಟ್ರಾಫಿಕ್ ಪೊಲೀಸ್, ಆಂಬುಲೆನ್ಸ್ ಸೇವೆಯಲ್ಲಿರುವರು, ಕಾರಾಗೃಹ ಸೇರಿದಂತೆ 16 ಇತರೆ ಸೇವೆಗಳಡಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಈ ಮಾದರಿ ಮತದಾನ ಮಾಡಬಹುದು.
ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರಿಗೆ ಮತದಾನ ದಿನದ ಬದಲಿಗೆ ಮತದಾನ ದಿನಕ್ಕೂ ಪೂರ್ವದಲ್ಲಿಯೇ ಫೆಸಿಲಿಟೇಶನ್ ಸೆಂಟರ್ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡುವಂತಹ ಅವಕಾಶ ನೀಡಲಾಗುತ್ತದೆ.
ಅಗತ್ಯ ಸೇವೆಗಳಡಿ ಸೇವೆ ಸಲ್ಲಿಸುತ್ತಿರುವ ನೌಕರರು ಫೆಸಿಲಿಟೇಶನ್ ಸೆಂಟರ್ನಲ್ಲಿ ಮತದಾನ ಮಾಡಲು ಹಾಗೂ ಪೋಸ್ಟಲ್ ಬ್ಯಾಲಟ್ ಮತದಾನದ ಸೇವೆ ಪಡೆಯಲು, ಸಂಬಂಧಿಸಿದ ಇಲಾಖೆಯಿಂದ ನಮೂನೆ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು. ಬಳಿಕ ಭರ್ತಿ ಮಾಡಿದ ನಮೂನೆಯನ್ನು ಆ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ನೋಡಲ್ ಅಧಿಕಾರಿಗಳಿಗೆ ಆಯಾ ಇಲಾಖಾ ಅಧಿಕಾರಿಗಳು ಸಲ್ಲಿಸಬೇಕು. 12 ಡಿ ನಮೂನೆಯನ್ನು ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಫೆಸಿಲಿಟೇಶನ್ ಸೆಂಟರ್ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications