ಅಕ್ರಮವಾಗಿ ಹಣ ಗಳಿಸಿದ ಜನಾರ್ದನ ರೆಡ್ಡಿ ರಣಹೇಡಿ: ಸಹೋದರನ ವಿರುದ್ಧ ಸೋಮಶೇಖರ್ ರೆಡ್ಡಿ ಕಿಡಿ
ಬಳ್ಳಾರಿ, ಜೂನ್ 1: ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ನಡುವಿನ ರಾಜಕೀಯ ಅಸಮಾಧಾನ ಈಗ ಸ್ಫೋಟಗೊಂಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ಗೆದ್ದು ಶಾಸಕರಾಗಿರುವ ಜನಾರ್ದನ ರೆಡ್ಡಿ ಅವರ ನಾನು ಬೆಳಸಿದ ಹೇಡಿಗಳು ಮನೆಯಲ್ಲಿದ್ದಾರೆ. ನಾನು ಸದನಕ್ಕೆ ಬಂದಿದ್ದೇನೆ ಎನ್ನುವ ಹೇಳಿಕೆ ವಿರುದ್ಧ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಕಿಡಿಕಾರಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ನಮ್ಮನ್ನು ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಂಡರು. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರರೆಡ್ಡಿಯನ್ನು ಗೆಲ್ಲಿಸಿದ್ದರು. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನು ಖರೀದಿ ಮಾಡಿ ಕೆಆರ್ಪಿಪಿ ಪರವಾಗಿ ಕೆಲಸ ಮಾಡಿದ್ದಾರೆ ಎಂದರು.

ನಮ್ಮ ವಿರುದ್ಧ ಜನಾರ್ದನರೆಡ್ಡಿ ರಣಹೇಡಿ ಅಂತ ಪದ ಬಳಸಿದ್ದಾರೆ..? ನಮಗೆ ಏನ್ ಪದ ಬಳಸಿ ಏನ್ ಮಾತನಾಡಿದ್ದಾರೆ ಹೇಳಿ..? ನಾನು ಬೆಳೆಸಿದ ಹೇಡಿಗಳು ಮನೆಯಲ್ಲಿದ್ದಾರೆ. ನಾನು ಸದನಕ್ಕೆ ಬಂದಿದ್ದೇನೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನನಗೆ, ಶ್ರೀರಾಮುಲು. ಸೋಮಲಿಂಗಪ್ಪ. ಸುರೇಶಬಾಬು, ಕರುಣಾಕರ ರೆಡ್ಡಿಗೆ ಹೇಡಿ ಅಂತಾ ಕರೆದಿದ್ದಾರೆ. ನಿಜವಾದ ರಣಹೇಡಿ ಜನಾರ್ದನರೆಡ್ಡಿ, ನಾವಲ್ಲ ಎಂದು ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾತು ಮುಂದುವರಿಸಿದ ಸೋಮಶೇಖರ್ ರೆಡ್ಡಿ, ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ನಮ್ಮನ್ನ ಬಳಸಿಕೊಂಡು ಜನಾರ್ದನರೆಡ್ಡಿ ಅಕ್ರಮವಾಗಿ ಹಣ ಗಳಿಸಿದರು. ನಿಜವಾದ ರಣಹೇಡಿ ನಾವಲ್ಲ. ಜನಾರ್ದನ ರೆಡ್ಡಿ ರಣಹೇಡಿ. ಜನಾರ್ದನರೆಡ್ಡಿಗೆ ಚಿಕ್ಕದಿನಿಂದ ಒಂದು ಗುಣ ಇದೆ. ಯಾರೇ ಆಗಲಿ. ಅವನಿಗೆ ಅವನ ಕೆಳಗೆ ಇರಬೇಕು. ಅವರು ಹೇಳಿದ್ದು ಕೇಳಲಿಲ್ಲ ಎಂದರೆ ಅವರು ಎಲ್ಲರನ್ನೂ ಡೆಮಾಲಿಷ್ ಮಾಡುತ್ತಾರೆ. ನಾವೆಲ್ಲಾ ಒಂದಾಗಿದ್ದೇವೆ, ನಾವೂ ಜನಾರ್ದನ ರೆಡ್ಡಿಯನ್ನು ಎದುರಿಸುತ್ತೇವೆ. ಸಂಸತ್ ಚುನಾವಣೆಯಲ್ಲಿ ನಮ್ಮ ಬಲ ತೋರಿಸುತ್ತೇವೆ ಎಂದು ಸಹೋದರ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸೋಮಶೇಖರ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications