ಬಳ್ಳಾರಿ ಎಚ್ಎಲ್ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಸೋಮಶೇಖರ ರೆಡ್ಡಿ
ಬಳ್ಳಾರಿ, ಆಗಸ್ಟ್ 03: ನಗರದ ಹೊರವಲಯದಲ್ಲಿರುವ ಎಚ್ಎಲ್ಸಿ ಕಾಲುವೆಗೆ ಶಾಸಕ ಸೋಮಶೇಖರ ರೆಡ್ಡಿ ಅವರು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಪಕ್ಷದ ಕಾರ್ಯಕರ್ತರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಮೊದಲಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿ ವರ್ಷ ಇದೇ ರೀತಿ ಮಳೆಯಾಗಲಿ. ಜಿಲ್ಲೆಯ ರೈತಾಪಿ ವರ್ಗ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಸಮೃದ್ಧಿಯ ಬೆಳೆ ಬೆಳೆಯುವಂತಾಗಲಿ ಎಂದು ಆಶಿಸಿದರು. ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಕೂಡ ಸದಾ ಹೀಗೆ ಭರ್ತಿಯಾಗಲಿ. ಬಳ್ಳಾರಿ ಮಹಾನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗದಂತೆ ಆ ವರುಣ ದೇವ ನೋಡಿಕೊಳ್ಳಬೇಕು ಎಂದು ಪ್ರಾರ್ಥಿಸಿದರು.
ಮಹಾನಗರ ಪಾಲಿಕೆ ಆಯುಕ್ತ ತುಷಾರಮಣಿ, ಮಾಜಿ ಸದಸ್ಯರಾದ ಎಸ್.ಮಲ್ಲನಗೌಡ, ತೂರ್ಪು ಯಲ್ಲಪ್ಪ, ಶ್ರೀನಿವಾಸ ಮೋತ್ಕರ, ಶಾಸಕರ ಆಪ್ತ ಕಾರ್ಯದರ್ಶಿ ವೀರಶೇಖರ ರೆಡ್ಡಿ ಇದ್ದರು.

ಸಿಎಂಗಾಗಿ ಶಾಸಕ ಸೋಮಶೇಖರ ರೆಡ್ಡಿ ಪ್ರಾರ್ಥನೆ: ಇದೇ ಸಂದರ್ಭ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಿ ಬರಲಿ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಪ್ರಾರ್ಥಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತೂ ಮಾತನಾಡಿ, "ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವುದು ನಮಗೆಲ್ಲ ಖುಷಿ ತಂದಿದೆ. ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ರಾಮನೂ ನೆಲೆಸಿದ್ದ ಎಂಬ ಪ್ರತೀತಿಯಿದೆ. ಹೀಗಾಗಿ, ಅಲ್ಲಿಂದ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಒಂದು ಕಲ್ಲನ್ನು ಒಯ್ಯಲಾಗಿದೆ. ಹೀಗಾಗಿ, ರಾಮಮಂದಿರದಲ್ಲೂ ಅಂಜನಾದ್ರಿ ಬೆಟ್ಟದ ಕಲ್ಲನ್ನು ನಾವು ನೋಡಬಹುದಾಗಿದೆ" ಎಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications