ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ವಿಶೇಷ ರೈಲು: ಮಾಹಿತಿ ವಿವರ ತಿಳಿಯಿರಿ
ವಿಜಯನಗರ, ಫೆಬ್ರವರಿ 27: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕೊಟ್ಟೂರು ಶ್ರೀ ಗುರು ಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವದ ದಿನಾಂಕ ನಿಗದಿಯಾಗಿದ್ದು, ಲಕ್ಷಾಂತರ ಭಕ್ತರು ಈ ರಥೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ಹೊಸಪೇಟೆ-ಬಳ್ಳಾರಿ-ಕೊಟ್ಟೂರು-ದಾವಣಗೆರೆ ಮಾರ್ಗವಾಗಿ ವಿಶೇಷ ರೈಲು ಸಂಚಾರ ಸೇವೆ ನೀಡಲು ನೈರುತ್ಯ ರೈಲು ನಿರ್ಧರಿಸಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 29ರಿಂದ ಮಾರ್ಚ್ 5ರವರೆಗೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.

ಕೊಟ್ಟೂರು ಶ್ರೀ ಗುರುಬಸವೇಶ್ವರಸ್ವಾಮಿ ಜಾತ್ರೆಗೆ ಆಗಮಿಸುವ ಭಕ್ತರು ಹಾಗೂ ರೈಲು ಪ್ರಯಾಣಿಕರು ಈ ವಿಶೇಷ ರೈಲು ಸೇವೆಯನ್ನು ಬಳಸಿಕೊಳ್ಳುವಂತೆ ಬಳ್ಳಾರಿ ಸಂಸದ ದೇವೇಂದ್ರಪ್ಪ ಮನವಿ ಮಾಡಿದ್ದಾರೆ.
ಫೆಬ್ರವರಿ 29ರಿಂದ ಮಾರ್ಚ್ 5ರವರೆಗೆ ಪ್ರತಿ ನಿತ್ಯವು ಬಳ್ಳಾರಿ-ದಾವಣಗೆರೆ ವಿಶೇಷ ರೈಲು ಆರು ಬಾರಿ ಇದೇ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಬಳ್ಳಾರಿ ಹಾಗೂ ದಾವಣಗೆರೆ ಮಾರ್ಗದಲ್ಲಿ ಸಂಚರಿಸುವ ಈ ರೈಲು ತೋರಣಗಲ್ಲು, ಹೊಸಪೇಟೆ, ಹುಬ್ಬಳ್ಳಿ, ಕೊಟ್ಟೂರು ಹಾಗೂ ಅಮರಾವತಿ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಅವಕಾಶವಿದೆ.
ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವ 4/3/2024ರಂದು ನಡೆಯಲಿದೆ. ರಥೋತ್ಸವದ ಅಂಗವಾಗಿ 29/2/2024 ರಿಂದ 10/3/2024ರ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಪ್ರತಿನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಲಿದ್ದಾರೆ.
ಶ್ರೀ ಗುರುಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮತ್ತು ಬೆಳ್ಳಿ ರಥೋತ್ಸವ ಎಂದೇ ಕೊಟ್ಟೂರು ಜಾತ್ರೆ ಪ್ರಸಿದ್ಧಿ ಪಡೆದಿದೆ. ಫೆಬ್ರವರಿ 29ರಂದು ಬೆಳ್ಳಿ ರಥದಲ್ಲಿ ನಾಗರ ವಾಹನೋತ್ಸವ, ಮಾರ್ಚ್ 1ರಂದು ಬೆಳ್ಳಿ ರಥದಲ್ಲಿ ನವಿಲು ವಾಹನೋತ್ಸವ, ಮಾರ್ಚ್ 2ರಂದು ಬೆಳ್ಳಿ ರಥದಲ್ಲಿ ಗಜವಾಹನೋತ್ಸವ, ಮಾರ್ಚ್ 3ರಂದು ಬೆಳ್ಳಿ ರಥದಲ್ಲಿ ವೃಷಭ ವಾಹನೋತ್ಸವ ನಡೆಯಲಿದೆ. ಮಾರ್ಚ್ 4ರಂದು ಶ್ರೀ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಪ್ರತಿ ವರ್ಷ ಜಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾಡಳಿತ ಕೊಟ್ಟೂರು ಪಟ್ಟಣ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ಆದೇಶಿಸುತ್ತದೆ. ಈ ಬಾರಿಯೂ ಇದೇ ನಿಯಮ ಮುಂದುವರಿಯುವ ಸಾಧ್ಯತೆ ಇದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications