ಇನ್ಮುಂದೆ ಏನಿದ್ದರೂ ಸ್ವಚ್ಛ, ಪ್ರಾಮಾಣಿಕ ಆಡಳಿತ -ಶ್ರೀರಾಮುಲು
ಬಳ್ಳಾರಿ, ಜುಲೈ 26: "ಕಳೆದ 14 ತಿಂಗಳುಗಳಿಂದ ಇದ್ದ ಭ್ರಷ್ಟ ಸರ್ಕಾರ ಪತನವಾಗಿದೆ. ಇನ್ನೇನಿದ್ದರೂ ಸ್ವಚ್ಛ, ಪ್ರಾಮಾಣಿಕ ಆಡಳಿತ ನಡೆಯುತ್ತದೆ. ಸದನದಲ್ಲಿ ನಾವು ಗೆದ್ದಿದ್ದೇವೆ" ಎಂದು ಸಂತಸ ವ್ಯಕ್ತಪಡಿಸಿದ್ದಾರೆ ಶಾಸಕ ಶ್ರೀರಾಮುಲು.
"ಯಡಿಯೂರಪ್ಪ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ನಾನೂ ಅಲ್ಲಿಗೆ ಹೋಗುತ್ತಿದ್ದೇನೆ. ಜನರ ನಿರೀಕ್ಷೆಗೆ ತಕ್ಕಂತೆ, ಸ್ವಚ್ಛ ಪ್ರಾಮಾಣಿಕ ಆಡಳಿತ, ಭದ್ರತೆ ನೀಡಲು ಬಿಎಸ್ವೈ ಸಿಎಂ ಆಗ್ತಾರೆ- 40 ವರ್ಷಗಳ ಕಾಲ ರಾಜ್ಯಕ್ಕಾಗಿ ದುಡಿದಿದ್ದಾರೆ. ಅವರ ಶ್ರಮಕ್ಕೆ ಫಲ ಸಿಕ್ಕಿದೆ. ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಲಿ" ಎಂದು ಹಾರೈಸಿದರು.
ತಮಗೆ ಡಿಸಿಎಂ ಹುದ್ದೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ಜನರು ನನ್ನನ್ನು ಗುರುತಿಸಿದ್ದಾರೆ. ನಾನು ಸ್ಥಾನಮಾನಕ್ಕಾಗಿ ದುಡಿಯೋನಲ್ಲ. ಪಕ್ಷಕ್ಕಾಗಿ ದುಡಿಯುವವನು. ಪಕ್ಷದ ನಿರ್ಣಯಕ್ಕೆ ಬದ್ಧನಾಗಿದ್ದೇನೆ. ಜನರ ಭಾವನೆಗೆ ನಾನು ಬೆಲೆ ಕೊಡುವೆ" ಎಂದರು.

ಮೂವರು ಶಾಸಕರ ಅನರ್ಹತೆ ವಿಚಾರದ ಕುರಿತು ಮಾತನಾಡುತ್ತಾ, "ಈ ವಿಷಯದಲ್ಲಿ ಪಕ್ಷಪಾತ ಆಗಿದೆ. ಇದು ಸರಿಯಲ್ಲ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಕುತಂತ್ರದ ರಾಜಕಾರಣ ಮಾಡ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications